8:41 AM Saturday7 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಮಕ್ಕಳ ಶೈಕ್ಷಣಿಕ ಅಭಿವೃದ್ಧಿ ಹಾಗೂ ಶಿಕ್ಷಣಕ್ಕೆ ಕುಡಿಯುವ ನೀರು ವ್ಯವಸ್ಥೆಗೆ ಸಹಾಯ ಹಸ್ತ: ಫೈಟರ್ ರವಿ ಸಂಕಲ್ಪ

26/11/2022, 20:45

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಫೈಟರ್ ರವಿ ಅವರು ಶಿಕ್ಷಣದ ಜೊತೆಯಲ್ಲಿ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚಿನ ಸಹಾಯಹಸ್ತ ನೀಡುವುದಾಗಿ ಹೇಳಿದ್ದಾರೆ.
ಅವರು ನಾಗಮಂಗಲ ತಾಲೂಕಿನ ಬೆಳ್ಳೂರು ಹೋಬಳಿಯ ವಿವಿಧ ಸರ್ಕಾರಿ ಪ್ರೌಢಶಾಲೆ , ವಡೇರಪುರ ಹಟ್ನಾ ಕೆಂಬಾರೆ, ಕಾಳಿಂಗನಹಳ್ಳಿ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಮಕ್ಕಳ ಶೈಕ್ಷಣಿಕ ಹಾಗೂ ಶಿಕ್ಷಣಕ್ಕೆ ಕುಡಿಯುವ ನೀರು ಶಾಲಾ ಕಾರ್ಯಕ್ರಮಗಳಿಗೆ ಸಹಾಯದ ಭರವಸೆ ನೀಡಿದರು.
ಸಾಮಾಜಿಕ ಸೇವೆಗಳಲ್ಲಿ ಆರೋಗ್ಯ ಶುದ್ಧ ನೀರು ಶಿಕ್ಷಣ ಶೈಕ್ಷಣಿಕ ಪ್ರಗತಿಯತ್ತ ತಾಲೂಕಿನ ಎಲ್ಲಾ ಶಾಲೆಗಳಿಗೂ ಕೈಲಾದ ಸಹಾಯ ಮಾಡುತ್ತಿರುವ ಸಮಾಜ ಸೇವಕರಾದ ರವಿಯವರು ತಾಲೂಕಿನ ಅಭಿವೃದ್ಧಿಯ ಮುಂಚೂಣಿಗೆ ಹೊಸ ಅಧ್ಯಯನ ಬರೆಯಲು ಇವರ ಕನಸಿನ ಗುರಿ ತ್ರಿಕಲ್ಪ ಯೋಜನೆಯ ಉದ್ದೇಶಗಳಲ್ಲಿ ಒಂದಾಗಿದೆ.
ರವಿಯವರು ಇಂದು ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಮಕ್ಕಳಿಗೆ ಆಟದ ಸಾಮಗ್ರಿಗಳು ಕುಡಿಯುವ ನೀರಿನ ವ್ಯವಸ್ಥೆ ಮಾಡಿಸುವ ಭರವಸೆ ನೀಡುವ ಮುಖಾಂತರ ಶಿಕ್ಷಣಕ್ಕೂ ಹೆಚ್ಚಿನ ಆದ್ಯತೆ ಕೊಡುವ ಭರವಸೆಯ ಆಶಾ ಕಿರಣವಾಗಿದೆ.
ಇದೇ ಸಂದರ್ಭದಲ್ಲಿ ಶಾಲೆಯ ಶಿಕ್ಷಕರಾದ ತಿಮ್ಮರಾಯಗೌಡ ಲೋಕೇಶ್ ಹಾಗೂ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿಜೆ ಕುಮಾರ್ ಹಾಗೂ ಅನೇಕ ಗಣ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.

ದೇವಲಾಪುರ ಜಗದೀಶ್ ನಾಗಮಂಗಲ

ಇತ್ತೀಚಿನ ಸುದ್ದಿ

ಜಾಹೀರಾತು