5:33 AM Friday14 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ಹುಲಿ ದಾಳಿಗೆ 3 ಹಸುಗಳು ಬಲಿ: ಕಾಫಿನಾಡಲ್ಲಿ ಮುಂದುವರೆದ ವ್ಯಾಘ್ರ ಅಟ್ಟಹಾಸ; ಕೈಕಟ್ಟಿ ಕುಳಿತ ಅರಣ್ಯ ಇಲಾಖೆ

26/11/2022, 21:27

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ಭಾರತಿಬ್ಯೆಲು ಕನ್ನಗೆರೆ ಕಣ್ಣ ಕಾಫಿ ಎಸ್ಟೇಟ್ ನಲ್ಲಿ ಶುಕ್ರವಾರ ರಾತ್ರಿ ಸಮಯದಲ್ಲಿ ಹುಲಿ ಸುಮಾರು 4 ಹಸುಗಳನ್ನು ಬೇಟೆಯಾಡಿದ್ದು,ಇದರಲ್ಲಿ ಒಂದು ಕರು ಕೂಡ ಸೇರಿದೆ.

ಇವುಗಳಲ್ಲಿ ಒಂದು ಹಸು ಜೀವ ಉಳಿಸಿಕೊಂಡು ಕನ್ನಗೆರೆ ಗ್ರಾಮಕ್ಕೆ ಓಡಿ ಬಂದಿದೆ. ಇನ್ನೆರಡು ಹಸುಹಾಗು ಒಂದು ಕರು ಪ್ರಾಣ ಬಿಟ್ಟಿದ್ದು ಒಂದನ್ನು ಭಾಗಶಃ ತಿಂದು ಹಾಕಿದೆ.

ಅದರಲ್ಲಿ ಒಂದು ಹಸು ಗರ್ಭ ಧರಿಸಿದ್ದು ಹೊಟ್ಟೆಯಿಂದ ಕರವನ್ನು ಹೊರಹಾಕಿ ತಿಂದಿರುವ ಭಯಾನಕ ದೃಶ್ಯವನ್ನು ಗ್ರಾಮಸ್ಥರು ಕಂಡು ಬೆಚ್ಚಿಬಿದ್ದಿದ್ದಾರೆ. ಈ ಭಾಗದಲ್ಲಿ ಕಳೆದ ಕೆಲವು ದಿವಸಗಳಿಂದ ಎರಡು ಹುಲಿಗಳು ಸಂಚರಿಸುತ್ತಿದ್ದು, ಅನೇಕ ಹಸುಗಳನ್ನು ಇದುವರೆಗೂ ಬೇಟೆಯಾಡಿರುವ ವರದಿಯಾಗಿದೆ.

ಕೂಡಲೇ ಜೀವಹಾನಿ ಸಂಭವಿಸುವ ಮುಂಚೆ ಈ ಹುಲಿಗಳನ್ನು ಹಿಡಿದು ಸ್ಥಳಾಂತರಿಸಬೇಕು ಎಂದು ಗ್ರಾಮಸ್ಥರು ಅರಣ್ಯ ಇಲಾಖೆಗೆ ಅಗ್ರಹಿಸಿದ್ದಾರೆ.
ಉಪವಲಯ ಅರಣ್ಯ ಅಧಿಕಾರಿ ಉಮೇಶ್, ಅರಣ್ಯ ರಕ್ಷಕ ಮೋಹಸೀನ್ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು