2:57 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್…

ಇತ್ತೀಚಿನ ಸುದ್ದಿ

ಹುಲಿ ದಾಳಿಗೆ 3 ಹಸುಗಳು ಬಲಿ: ಕಾಫಿನಾಡಲ್ಲಿ ಮುಂದುವರೆದ ವ್ಯಾಘ್ರ ಅಟ್ಟಹಾಸ; ಕೈಕಟ್ಟಿ ಕುಳಿತ ಅರಣ್ಯ ಇಲಾಖೆ

26/11/2022, 21:27

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ಭಾರತಿಬ್ಯೆಲು ಕನ್ನಗೆರೆ ಕಣ್ಣ ಕಾಫಿ ಎಸ್ಟೇಟ್ ನಲ್ಲಿ ಶುಕ್ರವಾರ ರಾತ್ರಿ ಸಮಯದಲ್ಲಿ ಹುಲಿ ಸುಮಾರು 4 ಹಸುಗಳನ್ನು ಬೇಟೆಯಾಡಿದ್ದು,ಇದರಲ್ಲಿ ಒಂದು ಕರು ಕೂಡ ಸೇರಿದೆ.

ಇವುಗಳಲ್ಲಿ ಒಂದು ಹಸು ಜೀವ ಉಳಿಸಿಕೊಂಡು ಕನ್ನಗೆರೆ ಗ್ರಾಮಕ್ಕೆ ಓಡಿ ಬಂದಿದೆ. ಇನ್ನೆರಡು ಹಸುಹಾಗು ಒಂದು ಕರು ಪ್ರಾಣ ಬಿಟ್ಟಿದ್ದು ಒಂದನ್ನು ಭಾಗಶಃ ತಿಂದು ಹಾಕಿದೆ.

ಅದರಲ್ಲಿ ಒಂದು ಹಸು ಗರ್ಭ ಧರಿಸಿದ್ದು ಹೊಟ್ಟೆಯಿಂದ ಕರವನ್ನು ಹೊರಹಾಕಿ ತಿಂದಿರುವ ಭಯಾನಕ ದೃಶ್ಯವನ್ನು ಗ್ರಾಮಸ್ಥರು ಕಂಡು ಬೆಚ್ಚಿಬಿದ್ದಿದ್ದಾರೆ. ಈ ಭಾಗದಲ್ಲಿ ಕಳೆದ ಕೆಲವು ದಿವಸಗಳಿಂದ ಎರಡು ಹುಲಿಗಳು ಸಂಚರಿಸುತ್ತಿದ್ದು, ಅನೇಕ ಹಸುಗಳನ್ನು ಇದುವರೆಗೂ ಬೇಟೆಯಾಡಿರುವ ವರದಿಯಾಗಿದೆ.

ಕೂಡಲೇ ಜೀವಹಾನಿ ಸಂಭವಿಸುವ ಮುಂಚೆ ಈ ಹುಲಿಗಳನ್ನು ಹಿಡಿದು ಸ್ಥಳಾಂತರಿಸಬೇಕು ಎಂದು ಗ್ರಾಮಸ್ಥರು ಅರಣ್ಯ ಇಲಾಖೆಗೆ ಅಗ್ರಹಿಸಿದ್ದಾರೆ.
ಉಪವಲಯ ಅರಣ್ಯ ಅಧಿಕಾರಿ ಉಮೇಶ್, ಅರಣ್ಯ ರಕ್ಷಕ ಮೋಹಸೀನ್ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು