7:11 AM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಬಂಟ್ವಾಳ ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆಯ ಪ್ರಯುಕ್ತ ಕಾನೂನು ಅರಿವು ಕಾರ್ಯಕ್ರಮ

27/11/2022, 09:01

ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜ್ ರಾಷ್ಟೀಯ ಸೇವಾ ಯೋಜನೆ ಹಾಗೂ ಬಂಟ್ವಾಳ ತಾಲೂಕು ವಕೀಲರು ಸೇವಾ ಸಂಘದ ಜಂಟಿ ಆಶ್ರಯದಲ್ಲಿ ಸಂವಿಧಾನ ದಿನಾಚರಣೆಯ ಪ್ರಯುಕ್ತ ಕಾನೂನು ಅರಿವು ಕಾರ್ಯಕ್ರಮ ಕಾಲೇಜಿನಲ್ಲಿ ನಡೆಯಿತು.

ಪ್ರಧಾನ ಸಿವಿಲ್ ನ್ಯಾಯಾದೀಶರಾದ ಚಂದ್ರಶೇಖರ ವೈ ತಳವಾರ,
ಕಾರ್ಯಕ್ರಮವನ್ನು ಉದ್ಘಾಟಿಸಿ, ನಮ್ಮ ಸಂವಿಧಾನ ದೇಶದ ಜನರನ್ನು ಸಶಕ್ತಗೊ ಳಿಸಿದೆ. ಸರ್ವರಿಗೂ ಸಮಾನತೆ ಒದಗಿಸಿದೆ, ಭಾರತಕ್ಕೆ ಸಂವಿಧಾನ ದೊಡ್ಡ ಬಲ ಎಂಬ ಸಂದೇಶ ನೀಡಿದರು.

ಮುಖ್ಯ ಅತಿಥಿಯಾಗಿ ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ಬಿ. ಗಣೇಶಾನಂದ ಸೋಮಯಜಿ ಆಗಮಿಸಿದ್ದರು.

ಕಾಲೇಜಿನ ಪ್ರಾಂಶುಪಾಲೆ ಡಾ. ಸಿಸ್ಟರ್ ಲತಾ ಫೆರ್ನಾಂಡಿಸ್ ಎ ಸಿ , ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಸರಕಾರಿ ಸಹಾಯಕ ಅಭಿಯೋಜಕಿ ಹರಿಣಿ, ಬಂಟ್ವಾಳ ನಗರ ಪೊಲೀಸ್ ಠಾಠಾ ನೀರಿಕ್ಷಕರು ವಿವೇಕಾನಂದ ಉಪಸ್ಥಿತರಿದ್ದರು.

ಹಿರಿಯ ವಕೀಲ ಕೆ.ರಮೇಶ್ ಉಪಾಧ್ಯಾಯ ಸಂಪನ್ಮೂಲ ವ್ಯಕ್ತಿ ಯಾಗಿ ಅವರು ಮಾತನಾಡಿದರು.
ಅವರು ಮಾತನಾಡಿ ಭಾರತೀಯ ಸಂವಿಧಾನದ ಇತಿಹಾಸ ಅದರ ರುಪುರೇಷೆಗಳು, ಭಾರತೀಯ ಸಂವಿಧಾನದ ಹಕ್ಕುಗಳು, ಕರ್ತವ್ಯಗಳ ಅರಿವು ಪ್ರತಿಯೊಬ್ಬ ನಾಗರೀಕನಲ್ಲಿ ಇರಬೇಕು ಎಂಬ ಮಾಹಿತಿ ನೀಡಿದರು.

ಸುಪ್ರೀತ ನಿರೂಪಿಸಿದರು, ರಾಷ್ಟೀಯ ಸೇವಾ ಯೋಜನಾ ಘಟಕದ ಸಹ ಯೋಜನಾಧಿಕಾರಿ ವಿಜೇತ ಸ್ವಾಗತಿಸಿದರು, ಕಾಲೇಜಿನ ಮಾನವ ಹಕ್ಕು ಘಟಕದ ಸಂಯೋಜಕರು ನಿಹಾರಿಕಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು