3:58 AM Sunday2 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ಹೀಗೊಂದು ಅಮಾನವೀಯ ಕೃತ್ಯ: ಮಂಗಳೂರಿನಲ್ಲಿ ಬೀದಿ ನಾಯಿಯ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿ

03/07/2021, 09:06

ಮಂಗಳೂರು(reporterkarnataka news): ಪ್ರಾಣಿ ಪ್ರಿಯರನ್ನು ಬೆಚ್ಚಿ ಬೀಳಿಸುವ ಮತ್ತೊಂದು ಘಟನೆ ನಗರದಲ್ಲಿ ನಡೆದಿದೆ. ಶ್ವಾನವನ್ನು ಬೈಕ್ ಗೆ ಕಟ್ಟಿ ಎಳೆದ ಘಟನೆ ಇನ್ನೂ ಹಸಿರಾಗಿರುವಾಗಲೇ ನಗರದ ಶಿವಭಾಗ್ ಸಮೀಪ ಬೀದಿ ನಾಯಿಯೊಂದನ್ನು ಗುಂಡಿಟ್ಟು ಸಾಯಿಸಲಾಗಿದೆ.

ಶಿವಭಾಗ್ ಸಮೀಪದ ಜ್ಯುವೆಲ್ಲರ್ಸ್ ಮಳಿಗೆಯೊಂದರ ಹಿಂಭಾಗದಲ್ಲಿ ತಡರಾತ್ರಿ ಬೀದಿನಾಯಿಯನ್ನು ಗುಂಡು ಹೊಡೆದು 

ಕೊಲ್ಲಲಾಗಿದೆ. ಈ ಘಟನೆ ಪ್ರಾಣಿಪ್ರಿಯರಲ್ಲಿ ಆತಂಕ ಉಂಟು ಮಾಡಿದೆ. ಅನಿಮಲ್ ಕೇರ್ ಟ್ರಸ್ಟ್‌ನ ಮುಖ್ಯಸ್ಥೆ ಸುಮಾ ಅವರು ಈ ಕುರಿತು ಕದ್ರಿ ಠಾಣೆಗೆ ದೂರು ನೀಡಿದ್ದಾರೆ.

ಘಟನಾ ಸ್ಥಳಕ್ಕೆ ತೆರಳಿದ್ದ ಅನಿಮಲ್ ಕೇರ್ ಟ್ರಸ್ಟ್ ಕಾರ್ಯಕರ್ತರು ನಾಯಿಯನ್ನು ಆ್ಯಂಬುಲೆನ್ಸ್ ಮೂಲಕ ನಗರದ ಜೈಲು ರಸ್ತೆಯ ಪಶು ಆಸ್ಪತ್ರೆಗೆ ಸಾಗಿಸಿದ್ದಾರೆ. ಆಸ್ಪತ್ರೆಯಲ್ಲಿ ನಾಯಿಯ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ನಾಯಿಯ ದೇಹದಲ್ಲಿ ಬುಲೆಟ್ ಲಭಿಸಿದೆ ಎಂದು ಹೇಳಿದ್ದಾರೆ.

ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುಮಾ ರಮೇಶ್, ಇದೊಂದು ಅಮಾನವೀಯ ಕೃತ್ಯ. ಈ ಘಟನೆ ಬಗ್ಗೆ ಸಮಗ್ರ ತನಿಖೆ ನಡೆಯಬೇಕು. ಗುಂಡು ಹಾರಿಸಿದ ವ್ಯಕ್ತಿಯನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು