8:56 PM Saturday4 - May 2024
ಬ್ರೇಕಿಂಗ್ ನ್ಯೂಸ್
ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ…

ಇತ್ತೀಚಿನ ಸುದ್ದಿ

ಕೆನರಾ ಕಾಲೇಜಿನಲ್ಲಿ ಅಂಗಾಂಗದಾನ, ನೇತ್ರದಾನ ಮತ್ತು ನೋಂದಣಿ ಜಾಗೃತಿ ಅಭಿಯಾನ

28/11/2022, 20:35

ಮಂಗಳೂರು(reporterkarnataka.com): “ನಮ್ಮ ಸಮಾಜದಲ್ಲಿ ದಾನ ಎಂಬುದು ಕರುಣೆ,ಪ್ರೀತಿ, ದಯೆ ಮೊದಲಾದ ಮೌಲ್ಯಗಳನ್ನೊಳಗೊಂಡ ನಮಗ್ರ ಆದರ್ಶ. ಈ ಆದರ್ಶವನ್ನು ನಿಸ್ವಾರ್ಥದಿಂದ ಪಾಲಿಸುವವರನ್ನು ಸಮಾಜ ಸರ್ವಕಾಲಕ್ಕೂ ಸ್ಮರಿಸುತ್ತದೆ. ಇಂತಹಾ ಆದರ್ಶವನ್ನು ಪಾಲಿಸಿದ ವ್ಯಕ್ತಿಗಳ ಹಾದಿಯಲ್ಲಿ ನಡೆಯಲು ನಮಗೆ ಅವಕಾಶ ಮಾಡಿಕೊಡುವ ಪುಣ್ಯಕರ ಕಾರ್ಯವೇ ಅಂಗಾಂಗ ದಾನ ಹಾಗೂ ನೇತ್ರದಾನ. ಇನ್ನೊಬ್ಬರ ಜೀವ ಉಳಿಸುವ,ಒಂದಷ್ಟು ಜನರ ಬದುಕಿಗೆ ಬೆಳಕಾಗುವ, ಸಾವಿನ ನಂತರವೂ ಮತ್ತೊಬ್ಬರಿಗೆ ಬದುಕು ನೀಡಿ, ಜನಮಾನಸದಲ್ಲಿ ನಮಗೆ ಬದುಕಲು ಇಂತಹ ದಾನದಿಂದ ಸಾಧ್ಯ. ಹಾಗಾಗಿ ಇದು ಎಲ್ಲಕ್ಕಿಂತ ಶ್ರೇಷ್ಠ ದಾನ.ಈ ರೀತಿಯ ಶ್ರೇಷ್ಠ ಕಾರ್ಯದಲ್ಲಿ ಎಲ್ಲರೂ ಭಾಗಿಯಾಗಿ ಜಾಗೃತಿ ಕಾರ್ಯ ಕೈಗೊಂಡಾಗ ಮಾತ್ರ ಅಂಗಾಂಗ ಹಾಗೂ ನೇತ್ರದಾನ ಜನರ ಅಭಿಯಾನವಾಗಿ,ಆಂದೋಲನವಾಗಿ ಬದಲಾಗಲು ಸಾಧ್ಯ” ಎಂದು ಅಂಗಾಂಗದಾನದ ಜಿಲ್ಲಾ ಮುಖ್ಯ ಸಂಯೋಜಕ ಲಯನ್ ಫಿಲಿಪ್ ಜೆ.ಪಿರೇರಾ ಹೇಳಿದರು.

ಅವರು ಕೆನರಾ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆ ಹಾಗೂ ಕದ್ರಿಯ ಲಯನ್ಸ್ ಹಾಗೂ ಲಿಯೋ ಕ್ಲಬ್ ನ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ನೇತ್ರದಾನ ಹಾಗೂ ಅಂಗಾಂಗದಾನ ಮತ್ತು ನೋಂದಣಿ ಅಭಿಯಾನದ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕದ್ರಿ ಲಯನ್ಸ್ ಕ್ಲಬ್ ನ ಅಧ್ಯಕ್ಷೆ ಲಯನ್ ಸುಮಿತ್ರಾ ಶೆಟ್ಟಿ ಮಾತನಾಡಿ, ಅಂಗಾಂಗ ದಾನದ ಮಹತ್ವವನ್ನು ತಿಳಿಸಿ,ಈ ಒಂದು ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಲಯನ್ ಜಯಕುಮಾರಿ ಸತೀಶನ್,ಲಯನ್ ರತ್ನಾಕರ್,ಲಯನ್ ಮಾಲಾ ಕಿಶೋರ್, ಲಯನ್ ವಿಜಯ ಶೆಟ್ಟಿ ,ಕಾಲೇಜಿನ ರಾ.ಸೇ.ಯೋ.ಯೋಜನಾಧಿಕಾರಿಗಳಾದ ಸೀಮಾ ಪ್ರಭು,ವಾಣಿ ಯು.ಎಸ್.ಉಪಸ್ಥಿತರಿದ್ದರು.


ಕು.ಸಮೀಕ್ಷಾ ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು. ಕು.ವೀಕ್ಷಾ ಸಾಲ್ಯಾನ್ ವಂದಿಸಿ,ಕು.ಶ್ರಾವ್ಯ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು