8:50 AM Monday16 - February 2026
ಬ್ರೇಕಿಂಗ್ ನ್ಯೂಸ್
ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ…

ಇತ್ತೀಚಿನ ಸುದ್ದಿ

ಬಂಟ್ವಾಳ: ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಂಗವಾಗಿ ರಾಷ್ಟ್ರೀಯ ಐಕ್ಯತಾ ದಿನ ಆಚರಣೆ

28/11/2022, 20:52

ಬಂಟ್ವಾಳ(reporterkarnataka.com)
ರಾಷ್ಟ್ರೀಯ ಸೇವಾ ಯೋಜನೆ ಕಾರ್ಮೆಲ್ ಕಾಲೇಜ್ ಮೊಡಂಕಾಪು, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಬಂಟ್ವಾಳ ನಗರ ಪೊಲೀಸ್ ಠಾಣೆ ಇವರ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಂಗವಾಗಿ ರಾಷ್ಟ್ರೀಯ ಐಕ್ಯತಾ ದಿನ ಆಚರಿಸಲಾಯಿತು.



ಬಂಟ್ವಾಳ ನಗರ ಪೊಲೀಸ್ ಠಾಣಾಧಿಕಾರಿ ಕಲೈಮಾರ್ ಪಿ.ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು.
ಅವರು ಮಾತನಾಡಿ,ಭಾರತ ಒಂದು ಜಾತ್ಯತೀತ ರಾಷ್ಟ್ರವಾಗಿದೆ, ನಮ್ಮ ದೇಶ ಪ್ರಜಾಪ್ರಭುತ್ವದ ತಳಹದಿಯ ಮೇಲೆ ರೂಪುಗೊಂಡಿದೆ. ನಮ್ಮ ದೇಶವು ಜಾತಿ ಧರ್ಮ ಮತ ಪ್ರಾದೇಶಿಕ ಭೇದ ಭಾವಗಳನ್ನು ಬಿಟ್ಟು ನಾವೆಲ್ಲರೂ ಒಂದೇ ಎಂಬ ಭಾವನೆಯನ್ನು ಬೆಳೆಸುತ್ತದೆ. ಎಂಬ ಸಂದೇಶವನ್ನು ರಾಷ್ಟ್ರೀಯ ಸ್ವಯಂಸೇವಕರಿಗೆ ನೀಡಿದರು.


ಡಾ.ಸಿಸ್ಟರ್ ಲತಾ ಫರ್ನಾಂಡಿಸ್ ಎಸಿ ಪ್ರಾಂಶುಪಾಲರು ಕಾರ್ಮೆಲ್ ಕಾಲೇಜ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪ್ರತಿಜ್ಞಾವಿಧಿ ಭೋದಿಸಿದರು.
ತದನಂತರ ಜಾಥವನ್ನು ಹಮ್ಮಿಕೊಳ್ಳಲಾಯಿತು. ಜಾಥದಲ್ಲಿ 50 ರಾಷ್ಟ್ರೀಯ ಸೇವಾಯೋಜನೆಯ ಸ್ವಯಂಸೇವಕ, ಸೇವಕಿಯರು ಪಾಲ್ಗೊಂಡಿದ್ದರು. ಕಾರ್ಮೆಲ್ ಕಾಲೇಜ್ ಆವರಣದಿಂದ ಬಿಸಿ ರೋಡಿನವರೆಗೆ ನಡೆದ ಜಾಥ. ಯಶಸ್ವಿಯಾಗಿ ನೆರವೇರಿತು.

ಕನ್ನಡ ಉಪನ್ಯಾಸಕಿ ಸುಪ್ರೀತಾ ಕಾರ್ಯಕ್ರಮವನ್ನು ನಿರೂಪಿಸಿದರು. ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಕೀರ್ತನ್ ಸ್ವಾಗತಿಸಿದರು. ರಾಷ್ಟ್ರೀಯ ಸೇವಾ ಯೋಜನೆ ಘಟಕದ ನಾಯಕಿ ಆಸಿಯಾ ವಂದಿಸಿದರು.
ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವು ಮುಕ್ತಾಯಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು