6:41 PM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಎನ್ ಸಿ ಸಿ ಘಟಕಗಳ ವತಿಯಿಂದ ರಕ್ತದಾನ ಶಿಬಿರ

28/11/2022, 21:11

ಪುತ್ತೂರು(reporterkarnataka.com): ಸಂತ ಫಿಲೋಮಿನಾ ಕಾಲೇಜು ಹಾಗೂ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಎನ್ ಸಿ. ಸಿ ಘಟಕಗಳ ವತಿಯಿಂದ ರೋಟರಿ ಕ್ಯಾಂಪ್ಯೂ ಬ್ಲಡ್ ಸೆಂಟರ್ ಸಹಯೋಗದೊಂದಿಗೆ ಎನ್.ಸಿ.ಸಿ. ದಿನದ ಪ್ರಯುಕ್ತ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ರೋಟರಿ ಕ್ಯಾಂಪ್ಕೊ -ಬ್ಲಡ್ ಸೆಂಟರ್ ನಲ್ಲಿ ಆಯೋಜಿಸಲಾಯಿತು. ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ರೋಟರಿ ಕ್ಯಾಂಪ್ಕೊ ಬ್ಲಡ್ ಸೆಂಟರ್ ನ ವೈದ್ಯಾಧಿಕಾರಿಯಾದ ಡಾ| ರಾಮಚಂದ್ರ ಭಟ್ ರವರು ರಕ್ತದಾನವು ಸಕಲದಾನಗಳಿಗಿಂತಲೂ ಶ್ರೇಷ್ಠವಾದುದು ಯಾಕೆಂದರೆ ರಕ್ತವನ್ನು ಬೇರೆ ಯಾವುದೇ ಕೃತಕರೀತಿಯಲ್ಲಿ ತಯಾರಿಸಲು ಸಾಧ್ಯವಾಗುವುದಿಲ್ಲ. ಆರೋಗ್ಯವಂತ ವ್ಯಕ್ತಿಯು ದಾನಮಾಡುವ ಮೂಲಕ ಮಾತ್ರವೇ ರಕ್ತವನ್ನು ಪಡೆಯಬಹುದಾಗಿದೆ.
ಅಪಘಾತ, ಶಸ್ತ್ರಕ್ರಿಯೆ ಹಾಗೂ ಜ್ವರ ಮುಂತಾದ ಅನಾರೋಗ್ಯಗಳ ಸಂದರ್ಭದಲ್ಲಿ ರೋಗಿಗಳಿಗೆ ರಕ್ತದ ಅವಶ್ಯಕತೆ ಇರುತ್ತದೆ. 18 ವರ್ಷಗಳಿಗೆ ಮೇಲ್ಪಟ್ಟ ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡಬಹುದಾಗಿದೆ” ಎಂದು ಹೇಳಿದರು.

ಕಾಲೇಜಿನ ಎನ್ ಸಿಸಿ ಭೂದಳದ ಅಧಿಕಾರಿ ಲೆ ಜೋನ್ಸನ್ ಡೇವಿಡ್ ಸಿಕ್ವೆರಾ ಹಾಗೂ ನೌಕಾದಳದ ಅಧಿಕಾರಿ ತೇಜಸ್ವಿ ಭಟ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಸಹಕರಿಸಿದರು. 50 ಕೆಡೆಟ್ ಗಳು ರಕ್ತದಾನ ಮಾಡುವ ಮೂಲಕ ತಮಗಿರುವ ಸಾಮಾಜಿಕ ಕಳಕಳಿಯನ್ನು ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು