12:19 PM Friday14 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ದೇಶದ ಸಂಸ್ಕೃತಿ, ಆಚಾರ- ವಿಚಾರ ಉಳಿಸಲು ಸಂವಿಧಾನ ಸಹಕಾರಿ: ಪ್ರತಿಪಕ್ಷ ಉಪ ನಾಯಕ ಯು.ಟಿ. ಖಾದರ್

29/11/2022, 19:02

ಮಂಗಳೂರು(reporterkarnataka.com): ದ.ಕ. ಜಿಲ್ಲೆ ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿ 2022 ಹಾಗೂ ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ (ರಿ.) ದ.ಕ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ನಗರದ ಬೆಂದೂರ್ ವೆಲ್ ನ
ಶಿಕ್ಷಣ ಸಂಪನ್ಮೂಲ ಕೇಂದ್ರ ಪಡಿ ಸಂಸ್ಥೆಯ ಸಹಕಾರದೊಂದಿಗೆ ಶಾಸಕ ಯು.ಟಿ.ಖಾದರ್ ಅವರೊಂದಿಗೆ ಉಳ್ಳಾಲ ನಗರ ಸಭೆ ವ್ಯಾಪ್ತಿಯ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿಯರ ಸಂವಾದ ಕಾರ್ಯಕ್ರಮ ಕಲ್ಲಾಪು ಯುನಿಟಿ ಸಭಾಂಗಣದಲ್ಲಿ ನಡೆಯಿತು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ದ.ಕ ಜಿಲ್ಲೆಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಜಿ. ಶೋಭಾ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಹೆಣ್ಣು ಮಕ್ಕಳ ಮೇಲಿನ ಹೀನಾಯವಾದ ಅಪರಾಧವನ್ನು ತಡೆಗಟ್ಟಲು ಪೋಕ್ಸೋ ಕಾಯಿದೆಯನ್ನು ತರಲಾಗಿದೆ. ಹೆಣ್ಣು ಮಕ್ಕಳು ಹೆಚ್ಚಾಗಿ ಹೊಗಳಿಕೆಗೆ ಮರಳಾಗುತ್ತಾರೆ, ಪರಿಸರದವರು ಯಾವ ಉದ್ದೇಶಕ್ಕೆ ನಮ್ಮಲ್ಲಿ ಮಾತನಾಡುತ್ತಾರೆ ಎಂಬ ತಿಳುವಳಿಕೆ ನಮ್ಮಲ್ಲಿರಬೇಕು ಎಂದರು.

ಉಳ್ಳಾಲ ನಗರಸಭೆ ವ್ಯಾಪ್ತಿಯ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿಯರ ಸಂವಾದ ಕಾರ್ಯದಲ್ಲಿ ಮಾತನಾಡಿದ ಶಾಸಕ ಯು.ಟಿ.ಖಾದರ್ ನಮ್ಮೆಲ್ಲರಿಗೆ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಿರ್ಬೀತಿಯಿಂದ ಓಡಾಡಲು ಧೈರ್ಯ ಬಂದಿದ್ದರೆ ಅದು ನಮ್ಮಂತ ರಾಜಕಾರಣಿಯಲ್ಲ, ಬಿ.ಆರ್. ಅಂಬೇಡ್ಕರ್ ಅವರು ಬರೆದ ಸಂವಿಧಾನದಿಂದ ಆಗಿದೆ. ಈ ನಿಟ್ಟಿನಲ್ಲಿ ಭಾರತ ದೇಶದ ಸಂಸ್ಕೃತಿ ಆಚಾರ ವಿಚಾರಗಳನ್ನು ಉಳಿಸಲು ಸಂವಿಧಾನ ಸಹಕಾರಿಯಾಗಿದೆ. ದೇವರು ನೀಡಿದ ಆಯುಷ್ಯದಲ್ಲಿ ನಾವೆಲ್ಲರೂ ಸಂತೋಷದಿಂದ ಬದುಕಬೇಕು. ದ್ವೇಷ ಮತ್ತು ದುಶ್ಚಟದಿಂದ ದೂರ ಇರಬೇಕು ಎಂದು ಹೇಳಿದರು.

ಉಳ್ಳಾಲ ಆರಕ್ಷಕ ಠಾಣೆಯ ಉಪನಿರೀಕ್ಷಕರಾದ ರೇವಣ ಸಿದ್ದ ಅವರು ಮೊಬೈಲ್ , ಮಾದಕ ದ್ರವ್ಯ ಮಕ್ಕಳು ವಿಷಯದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿದರು.
ತೊಕ್ಕೊಟ್ಟು ಅಂಬಾವನ ನಾಗಕನ್ನಿಕಾ ದೇವಸ್ಥಾನದ ಅಧ್ಯಕ್ಷರಾದ ಸುಂದರ್ ಗಟ್ಟಿ ಅಧ್ಯಕ್ಷತೆ ವಹಿಸಿದರು.

ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಮತ್ತು ಮಕ್ಕಳ ರಕ್ಷಣಾಧಿಕಾರಿ ಶೈಲಜಾ ಕಾರಗಿ, ದ.ಕ ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಉಳ್ಳೇಪಾಡಿ, ಮೆಸ್ಕಾಂ ಇಲಾಖೆಯ ಹಿರಿಯ ಇಂಜಿನಿಯರ್ ಮಾರಪ್ಪ, ಉದ್ಯಮಿ ಅಲ್ತಾಫ್ ಒಡೆಯರ್,ಚೈಲ್ಡ್ ಲೈನ್ 1098 ರ ಸದಸ್ಯೆ ರೇವತಿ, ಪಡಿ ಸಂಸ್ಥೆಯ ಜಿಲ್ಲಾ ಸಂಯೋಜಕರಾದ ಗ್ರೀಷ್ಮಾ, ಬಂಟ್ವಾಳ ಶಿಕ್ಷಣ ಸಂಪನ್ಮೂಲ ಕೇಂದ್ರದ ಸದಸ್ಯ ಹ್ಯಾರೀಸ್ ಮೊದಲಾದವರು ಉಪಸ್ಥಿತರಿದ್ದರು.

ವಕಾಲತ್ತು ಸಂಯೋಜಕ ಸಿದ್ದಾಂತ್ ಪಿ. ಪ್ರಾಸ್ತವಿಕವಾಗಿ ಮಾತನಾಡಿದರು, ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿ 2022 ದ.ಕ ಜಿಲ್ಲೆಯ ಸಂಚಾಲಕಿ ಕಮಲಾ ಗೌಡ ಸ್ವಾಗತಿಸಿದರು. ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ ಜೊ ತೆಕಾರ್ಯದರ್ಶಿ ಆರ್.ಉಷಾ ನಾಯಕ್ ಆಶಯ ಗೀತೆ ಹಾಡಿದರು,ಮಂಗಳೂರು ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷೆ ಆಶಾಲತಾ ಸುವರ್ಣ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು