2:39 PM Monday6 - April 2026
ಬ್ರೇಕಿಂಗ್ ನ್ಯೂಸ್
Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ…

ಇತ್ತೀಚಿನ ಸುದ್ದಿ

ಕೊನೆಗೂ ಬಂದ್ರು ಡಿಸಿಎಂ ಸಾಹೇಬ್ರು: ನದಿಯಲ್ಲಿ ಮುಳುಗಿ ಸಾವನ್ನಪ್ಪಿದ 4 ಮಂದಿ ಸಹೋದರರ ಮನೆಗೆ ಸವದಿ ಭೇಟಿ: 2 ಲಕ್ಷ ಪರಿಹಾರ

03/07/2021, 14:28

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರು ಕೃಷ್ಣ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಕುಟುಂಬಕ್ಕೆ ಸುಮಾರು 6 ದಿನಗಳ ಬಳಿಕ ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಶ್ಮಣ ಸವದಿ ಅವರು ಶಾಸಕ ಮಹೇಶ್ ಕುಮಟಳ್ಳಿ ಜತೆ ಭೇಟಿ ನೀಡಿ ಸಾಂತ್ವನ ಹೇಳಿದರು.

ದುಃಖತೃಪ್ತ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಸಾಂತ್ವನ ಹೇಳುವುದರ ಜೊತೆಗೆ ಮೃತರ ಮಕ್ಕಳ ಹಾಗೂ ತಂದೆ ತಾಯಿಯ ಉಪ ಜೀವನಕ್ಕೆ  ಸಹಾಯವಾಗಲೆಂದು ವೈಯಕ್ತಿಕ ನೆಲೆಯಲ್ಲಿ 2 ಲಕ್ಷ ರೂ. ಪರಿಹಾರ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಲಕ್ಷ್ಮಣ್ ಸವದಿ, ಆದಷ್ಟು ಬೇಗ ಸರ್ಕಾರದಿಂದ ಪರಿಹಾರವನ್ನು ಮುಂಜೂರು ಮಾಡಿಸಿ ಬಡ ಕುಟುಂಬಕ್ಕೆ ನೆರವು ಒದಗಿಸುವುದಾಗಿ ಭರವಸೆ ನೀಡಿದರು.

ದುರ್ಘಟನೆ ನಡೆದು 4 ದಿನಗಳ ಬಳಿಕ ಘಟನಾ ಸ್ಥಳಕ್ಕೆ ಆಗಮಿಸಿದ ಸ್ಥಳೀಯ ಶಾಸಕ ಮಹೇಶ್ ಕುಮಟಳ್ಳಿ ಅವರು ಎರಡನೇ ಬಾರಿ  ಡಿಸಿಎಂ ಜತೆಗೆ ಭೇಟಿ ನೀಡಿ ಕ್ಷೇತ್ರದ ಜನತೆಯ ಮನ ಗೆಲ್ಲಲ್ಲು ಪ್ರಯತ್ನಿಸಿದ್ದಾರೆ. ಶಾಸಕರು ತಡವಾಗಿ ಆಗಮಿಸಿದ ಬಗ್ಗೆ ಈ ಹಿಂದೆ ಸ್ಥಳೀಯ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ದುಂಡಪ್ಪ ಕೋಮ್ಮರ್, ಆರ್. ಬಂಗಾರೆಪ್ಪ, ಸಮಾಜ ಕಲ್ಯಾಣ ಅಧಿಕಾರಿ ಪ್ರವೀಣ್ ಪಾಟೀಲ, ಹಲ್ಯಾಳ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ

ವೆಂಕಟೇಶ್ ಸಂದ್ರಿಮಣಿ, ಗ್ರಾಮದ ಹಿರಿಯರಾದ ಸುರೇಶ ವಾಡೆದ, ಸಂಗಮೇಶ್ ಇಂಗಳಿ, ರಾವಸಾಬ ಪಾಟೀಲ್, ಗೋಪಾಲ ಮಂಗಸೂಳಿ,ಕುಮಾರ್ ಪಾಟೀಲ್, ಸಿದ್ದಪ್ಪ ಲೋಕುರ್, ಚಂದ್ರಕಾಂತ್ ಕಾಗವಾಡ, ಮಹಾಂತೇಶ್ ಶಿಂಗಿ, ಶಿವಾನಂದ್ ಇಂಗಳಿ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಉಪಸ್ಥಿತರಿದ್ದರು..

ಇತ್ತೀಚಿನ ಸುದ್ದಿ

ಜಾಹೀರಾತು