9:15 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಕೊನೆಗೂ ಬಂದ್ರು ಡಿಸಿಎಂ ಸಾಹೇಬ್ರು: ನದಿಯಲ್ಲಿ ಮುಳುಗಿ ಸಾವನ್ನಪ್ಪಿದ 4 ಮಂದಿ ಸಹೋದರರ ಮನೆಗೆ ಸವದಿ ಭೇಟಿ: 2 ಲಕ್ಷ ಪರಿಹಾರ

03/07/2021, 14:28

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರು ಕೃಷ್ಣ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಕುಟುಂಬಕ್ಕೆ ಸುಮಾರು 6 ದಿನಗಳ ಬಳಿಕ ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಶ್ಮಣ ಸವದಿ ಅವರು ಶಾಸಕ ಮಹೇಶ್ ಕುಮಟಳ್ಳಿ ಜತೆ ಭೇಟಿ ನೀಡಿ ಸಾಂತ್ವನ ಹೇಳಿದರು.

ದುಃಖತೃಪ್ತ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಸಾಂತ್ವನ ಹೇಳುವುದರ ಜೊತೆಗೆ ಮೃತರ ಮಕ್ಕಳ ಹಾಗೂ ತಂದೆ ತಾಯಿಯ ಉಪ ಜೀವನಕ್ಕೆ  ಸಹಾಯವಾಗಲೆಂದು ವೈಯಕ್ತಿಕ ನೆಲೆಯಲ್ಲಿ 2 ಲಕ್ಷ ರೂ. ಪರಿಹಾರ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಲಕ್ಷ್ಮಣ್ ಸವದಿ, ಆದಷ್ಟು ಬೇಗ ಸರ್ಕಾರದಿಂದ ಪರಿಹಾರವನ್ನು ಮುಂಜೂರು ಮಾಡಿಸಿ ಬಡ ಕುಟುಂಬಕ್ಕೆ ನೆರವು ಒದಗಿಸುವುದಾಗಿ ಭರವಸೆ ನೀಡಿದರು.

ದುರ್ಘಟನೆ ನಡೆದು 4 ದಿನಗಳ ಬಳಿಕ ಘಟನಾ ಸ್ಥಳಕ್ಕೆ ಆಗಮಿಸಿದ ಸ್ಥಳೀಯ ಶಾಸಕ ಮಹೇಶ್ ಕುಮಟಳ್ಳಿ ಅವರು ಎರಡನೇ ಬಾರಿ  ಡಿಸಿಎಂ ಜತೆಗೆ ಭೇಟಿ ನೀಡಿ ಕ್ಷೇತ್ರದ ಜನತೆಯ ಮನ ಗೆಲ್ಲಲ್ಲು ಪ್ರಯತ್ನಿಸಿದ್ದಾರೆ. ಶಾಸಕರು ತಡವಾಗಿ ಆಗಮಿಸಿದ ಬಗ್ಗೆ ಈ ಹಿಂದೆ ಸ್ಥಳೀಯ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ದುಂಡಪ್ಪ ಕೋಮ್ಮರ್, ಆರ್. ಬಂಗಾರೆಪ್ಪ, ಸಮಾಜ ಕಲ್ಯಾಣ ಅಧಿಕಾರಿ ಪ್ರವೀಣ್ ಪಾಟೀಲ, ಹಲ್ಯಾಳ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ

ವೆಂಕಟೇಶ್ ಸಂದ್ರಿಮಣಿ, ಗ್ರಾಮದ ಹಿರಿಯರಾದ ಸುರೇಶ ವಾಡೆದ, ಸಂಗಮೇಶ್ ಇಂಗಳಿ, ರಾವಸಾಬ ಪಾಟೀಲ್, ಗೋಪಾಲ ಮಂಗಸೂಳಿ,ಕುಮಾರ್ ಪಾಟೀಲ್, ಸಿದ್ದಪ್ಪ ಲೋಕುರ್, ಚಂದ್ರಕಾಂತ್ ಕಾಗವಾಡ, ಮಹಾಂತೇಶ್ ಶಿಂಗಿ, ಶಿವಾನಂದ್ ಇಂಗಳಿ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಉಪಸ್ಥಿತರಿದ್ದರು..

ಇತ್ತೀಚಿನ ಸುದ್ದಿ

ಜಾಹೀರಾತು