7:56 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಕೊನೆಗೂ ಬಂದ್ರು ಡಿಸಿಎಂ ಸಾಹೇಬ್ರು: ನದಿಯಲ್ಲಿ ಮುಳುಗಿ ಸಾವನ್ನಪ್ಪಿದ 4 ಮಂದಿ ಸಹೋದರರ ಮನೆಗೆ ಸವದಿ ಭೇಟಿ: 2 ಲಕ್ಷ ಪರಿಹಾರ

03/07/2021, 14:28

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರು ಕೃಷ್ಣ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಕುಟುಂಬಕ್ಕೆ ಸುಮಾರು 6 ದಿನಗಳ ಬಳಿಕ ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಶ್ಮಣ ಸವದಿ ಅವರು ಶಾಸಕ ಮಹೇಶ್ ಕುಮಟಳ್ಳಿ ಜತೆ ಭೇಟಿ ನೀಡಿ ಸಾಂತ್ವನ ಹೇಳಿದರು.

ದುಃಖತೃಪ್ತ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಸಾಂತ್ವನ ಹೇಳುವುದರ ಜೊತೆಗೆ ಮೃತರ ಮಕ್ಕಳ ಹಾಗೂ ತಂದೆ ತಾಯಿಯ ಉಪ ಜೀವನಕ್ಕೆ  ಸಹಾಯವಾಗಲೆಂದು ವೈಯಕ್ತಿಕ ನೆಲೆಯಲ್ಲಿ 2 ಲಕ್ಷ ರೂ. ಪರಿಹಾರ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಲಕ್ಷ್ಮಣ್ ಸವದಿ, ಆದಷ್ಟು ಬೇಗ ಸರ್ಕಾರದಿಂದ ಪರಿಹಾರವನ್ನು ಮುಂಜೂರು ಮಾಡಿಸಿ ಬಡ ಕುಟುಂಬಕ್ಕೆ ನೆರವು ಒದಗಿಸುವುದಾಗಿ ಭರವಸೆ ನೀಡಿದರು.

ದುರ್ಘಟನೆ ನಡೆದು 4 ದಿನಗಳ ಬಳಿಕ ಘಟನಾ ಸ್ಥಳಕ್ಕೆ ಆಗಮಿಸಿದ ಸ್ಥಳೀಯ ಶಾಸಕ ಮಹೇಶ್ ಕುಮಟಳ್ಳಿ ಅವರು ಎರಡನೇ ಬಾರಿ  ಡಿಸಿಎಂ ಜತೆಗೆ ಭೇಟಿ ನೀಡಿ ಕ್ಷೇತ್ರದ ಜನತೆಯ ಮನ ಗೆಲ್ಲಲ್ಲು ಪ್ರಯತ್ನಿಸಿದ್ದಾರೆ. ಶಾಸಕರು ತಡವಾಗಿ ಆಗಮಿಸಿದ ಬಗ್ಗೆ ಈ ಹಿಂದೆ ಸ್ಥಳೀಯ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ದುಂಡಪ್ಪ ಕೋಮ್ಮರ್, ಆರ್. ಬಂಗಾರೆಪ್ಪ, ಸಮಾಜ ಕಲ್ಯಾಣ ಅಧಿಕಾರಿ ಪ್ರವೀಣ್ ಪಾಟೀಲ, ಹಲ್ಯಾಳ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ

ವೆಂಕಟೇಶ್ ಸಂದ್ರಿಮಣಿ, ಗ್ರಾಮದ ಹಿರಿಯರಾದ ಸುರೇಶ ವಾಡೆದ, ಸಂಗಮೇಶ್ ಇಂಗಳಿ, ರಾವಸಾಬ ಪಾಟೀಲ್, ಗೋಪಾಲ ಮಂಗಸೂಳಿ,ಕುಮಾರ್ ಪಾಟೀಲ್, ಸಿದ್ದಪ್ಪ ಲೋಕುರ್, ಚಂದ್ರಕಾಂತ್ ಕಾಗವಾಡ, ಮಹಾಂತೇಶ್ ಶಿಂಗಿ, ಶಿವಾನಂದ್ ಇಂಗಳಿ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಉಪಸ್ಥಿತರಿದ್ದರು..

ಇತ್ತೀಚಿನ ಸುದ್ದಿ

ಜಾಹೀರಾತು