1:03 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಕೊನೆಗೂ ಬಂದ್ರು ಡಿಸಿಎಂ ಸಾಹೇಬ್ರು: ನದಿಯಲ್ಲಿ ಮುಳುಗಿ ಸಾವನ್ನಪ್ಪಿದ 4 ಮಂದಿ ಸಹೋದರರ ಮನೆಗೆ ಸವದಿ ಭೇಟಿ: 2 ಲಕ್ಷ ಪರಿಹಾರ

03/07/2021, 14:28

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರು ಕೃಷ್ಣ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಕುಟುಂಬಕ್ಕೆ ಸುಮಾರು 6 ದಿನಗಳ ಬಳಿಕ ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಶ್ಮಣ ಸವದಿ ಅವರು ಶಾಸಕ ಮಹೇಶ್ ಕುಮಟಳ್ಳಿ ಜತೆ ಭೇಟಿ ನೀಡಿ ಸಾಂತ್ವನ ಹೇಳಿದರು.

ದುಃಖತೃಪ್ತ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಸಾಂತ್ವನ ಹೇಳುವುದರ ಜೊತೆಗೆ ಮೃತರ ಮಕ್ಕಳ ಹಾಗೂ ತಂದೆ ತಾಯಿಯ ಉಪ ಜೀವನಕ್ಕೆ  ಸಹಾಯವಾಗಲೆಂದು ವೈಯಕ್ತಿಕ ನೆಲೆಯಲ್ಲಿ 2 ಲಕ್ಷ ರೂ. ಪರಿಹಾರ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಲಕ್ಷ್ಮಣ್ ಸವದಿ, ಆದಷ್ಟು ಬೇಗ ಸರ್ಕಾರದಿಂದ ಪರಿಹಾರವನ್ನು ಮುಂಜೂರು ಮಾಡಿಸಿ ಬಡ ಕುಟುಂಬಕ್ಕೆ ನೆರವು ಒದಗಿಸುವುದಾಗಿ ಭರವಸೆ ನೀಡಿದರು.

ದುರ್ಘಟನೆ ನಡೆದು 4 ದಿನಗಳ ಬಳಿಕ ಘಟನಾ ಸ್ಥಳಕ್ಕೆ ಆಗಮಿಸಿದ ಸ್ಥಳೀಯ ಶಾಸಕ ಮಹೇಶ್ ಕುಮಟಳ್ಳಿ ಅವರು ಎರಡನೇ ಬಾರಿ  ಡಿಸಿಎಂ ಜತೆಗೆ ಭೇಟಿ ನೀಡಿ ಕ್ಷೇತ್ರದ ಜನತೆಯ ಮನ ಗೆಲ್ಲಲ್ಲು ಪ್ರಯತ್ನಿಸಿದ್ದಾರೆ. ಶಾಸಕರು ತಡವಾಗಿ ಆಗಮಿಸಿದ ಬಗ್ಗೆ ಈ ಹಿಂದೆ ಸ್ಥಳೀಯ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ದುಂಡಪ್ಪ ಕೋಮ್ಮರ್, ಆರ್. ಬಂಗಾರೆಪ್ಪ, ಸಮಾಜ ಕಲ್ಯಾಣ ಅಧಿಕಾರಿ ಪ್ರವೀಣ್ ಪಾಟೀಲ, ಹಲ್ಯಾಳ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ

ವೆಂಕಟೇಶ್ ಸಂದ್ರಿಮಣಿ, ಗ್ರಾಮದ ಹಿರಿಯರಾದ ಸುರೇಶ ವಾಡೆದ, ಸಂಗಮೇಶ್ ಇಂಗಳಿ, ರಾವಸಾಬ ಪಾಟೀಲ್, ಗೋಪಾಲ ಮಂಗಸೂಳಿ,ಕುಮಾರ್ ಪಾಟೀಲ್, ಸಿದ್ದಪ್ಪ ಲೋಕುರ್, ಚಂದ್ರಕಾಂತ್ ಕಾಗವಾಡ, ಮಹಾಂತೇಶ್ ಶಿಂಗಿ, ಶಿವಾನಂದ್ ಇಂಗಳಿ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಉಪಸ್ಥಿತರಿದ್ದರು..

ಇತ್ತೀಚಿನ ಸುದ್ದಿ

ಜಾಹೀರಾತು