2:15 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಕೊನೆಗೂ ಬಂದ್ರು ಡಿಸಿಎಂ ಸಾಹೇಬ್ರು: ನದಿಯಲ್ಲಿ ಮುಳುಗಿ ಸಾವನ್ನಪ್ಪಿದ 4 ಮಂದಿ ಸಹೋದರರ ಮನೆಗೆ ಸವದಿ ಭೇಟಿ: 2 ಲಕ್ಷ ಪರಿಹಾರ

03/07/2021, 14:28

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರು ಕೃಷ್ಣ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಕುಟುಂಬಕ್ಕೆ ಸುಮಾರು 6 ದಿನಗಳ ಬಳಿಕ ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಶ್ಮಣ ಸವದಿ ಅವರು ಶಾಸಕ ಮಹೇಶ್ ಕುಮಟಳ್ಳಿ ಜತೆ ಭೇಟಿ ನೀಡಿ ಸಾಂತ್ವನ ಹೇಳಿದರು.

ದುಃಖತೃಪ್ತ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಸಾಂತ್ವನ ಹೇಳುವುದರ ಜೊತೆಗೆ ಮೃತರ ಮಕ್ಕಳ ಹಾಗೂ ತಂದೆ ತಾಯಿಯ ಉಪ ಜೀವನಕ್ಕೆ  ಸಹಾಯವಾಗಲೆಂದು ವೈಯಕ್ತಿಕ ನೆಲೆಯಲ್ಲಿ 2 ಲಕ್ಷ ರೂ. ಪರಿಹಾರ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಲಕ್ಷ್ಮಣ್ ಸವದಿ, ಆದಷ್ಟು ಬೇಗ ಸರ್ಕಾರದಿಂದ ಪರಿಹಾರವನ್ನು ಮುಂಜೂರು ಮಾಡಿಸಿ ಬಡ ಕುಟುಂಬಕ್ಕೆ ನೆರವು ಒದಗಿಸುವುದಾಗಿ ಭರವಸೆ ನೀಡಿದರು.

ದುರ್ಘಟನೆ ನಡೆದು 4 ದಿನಗಳ ಬಳಿಕ ಘಟನಾ ಸ್ಥಳಕ್ಕೆ ಆಗಮಿಸಿದ ಸ್ಥಳೀಯ ಶಾಸಕ ಮಹೇಶ್ ಕುಮಟಳ್ಳಿ ಅವರು ಎರಡನೇ ಬಾರಿ  ಡಿಸಿಎಂ ಜತೆಗೆ ಭೇಟಿ ನೀಡಿ ಕ್ಷೇತ್ರದ ಜನತೆಯ ಮನ ಗೆಲ್ಲಲ್ಲು ಪ್ರಯತ್ನಿಸಿದ್ದಾರೆ. ಶಾಸಕರು ತಡವಾಗಿ ಆಗಮಿಸಿದ ಬಗ್ಗೆ ಈ ಹಿಂದೆ ಸ್ಥಳೀಯ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ದುಂಡಪ್ಪ ಕೋಮ್ಮರ್, ಆರ್. ಬಂಗಾರೆಪ್ಪ, ಸಮಾಜ ಕಲ್ಯಾಣ ಅಧಿಕಾರಿ ಪ್ರವೀಣ್ ಪಾಟೀಲ, ಹಲ್ಯಾಳ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ

ವೆಂಕಟೇಶ್ ಸಂದ್ರಿಮಣಿ, ಗ್ರಾಮದ ಹಿರಿಯರಾದ ಸುರೇಶ ವಾಡೆದ, ಸಂಗಮೇಶ್ ಇಂಗಳಿ, ರಾವಸಾಬ ಪಾಟೀಲ್, ಗೋಪಾಲ ಮಂಗಸೂಳಿ,ಕುಮಾರ್ ಪಾಟೀಲ್, ಸಿದ್ದಪ್ಪ ಲೋಕುರ್, ಚಂದ್ರಕಾಂತ್ ಕಾಗವಾಡ, ಮಹಾಂತೇಶ್ ಶಿಂಗಿ, ಶಿವಾನಂದ್ ಇಂಗಳಿ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಉಪಸ್ಥಿತರಿದ್ದರು..

ಇತ್ತೀಚಿನ ಸುದ್ದಿ

ಜಾಹೀರಾತು