1:23 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಬೈಂದೂರು: ಜಾತಿ ನಿಂದನೆ ಪ್ರಕರಣ; ಕಂಬದಕೋಣೆ ಅರ್ಚಕರ ವಿರುದ್ಧ ಪ್ರಕರಣ ದಾಖಲು

30/11/2022, 12:58

ಬೈಂದೂರು(reporterkarnataka.com): ಜಾತಿ ನಿಂದನೆ ಮಾಡಿದ ಹಾಗೂ ಪೂಜೆಯ ವಿಚಾರದಲ್ಲಿ ಅರ್ಚಕರ ವಿರುದ್ಧ ಪ್ರಕರಣವೊಂದು ಕಂಬದ ಕೋಣೆಯ ಕೊಕ್ಕೇಶ್ವರ ದೇವಾಲಯದಲ್ಲಿ ನಡೆದಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೆ.28ರಂದುಕಂಬದ ಕೋಣೆಯ ಕೊಕ್ಕೆಶ್ವರ ದೇವಾಲಯಕ್ಕೆ ಹೊದ ಸಂದರ್ಭದಲ್ಲಿ ಹಳಗೇರಿ ಶಿವರಾಮ ಎಂಬುವವರು ನ. 28 ರ ಬೆಳಗ್ಗೆ ದೇವರಿಗೆ ಪೂಜೆ ಮಾಡಿಸಲು ಹಣ್ಣುಕಾಯಿ, ಹೂವು ಹಾಗೂ ಪೂಜಾ ಸಾಮಗ್ರಿಗಳನ್ನು ತೆಗೆದುಕೊಂಡು ಮಗನೊಂದಿಗೆ ಕಂಬದ ಕೋಣೆ ಗ್ರಾಮದ ಕೊಕ್ಕೇಶ್ವರ ದೇವಸ್ಥಾನಕ್ಕೆ ಹೋಗಿದ್ದರು.

ಈ ವೇಳೆ ದೇವಸ್ಥಾನದ ಅರ್ಚಕರಾದ ಶೇಷಗಿರಿ ಕಾರಂತರು ಇದ್ದು, ಶಿವರಾಮ ಹಾಗೂ ಅವರ ಮಗನನ್ನು ತಡೆದು ನಿಲ್ಲಿಸಿದ್ದು, ಶಿವರಾಮ ಶೇಷಗಿರಿ ಕಾರಂತ ರವರಲ್ಲಿ ದೇವರಿಗೆ ಪೂಜೆ ಮಾಡಿಕೊಡುವಂತೆ ವಿನಂತಿಸಿಕೊಂಡಿದ್ದು ಅದಕ್ಕೆ ಶೇಷಗಿರಿ ಕಾರಂತರು ಒಪ್ಪದೇ ಇದ್ದು, ಶೇಷಗಿರಿ ಕಾರಂತರು ಶಿವರಾಮ ಹಾಗೂ ಅವರ ಮಗನಿಗೆ ಜಾತಿನಿಂದನೆ ಮಾಡಿ ದೇವಸ್ಥಾನಕ್ಕೆ ಪ್ರವೇಶ ಹಾಗೂ ಪೂಜೆಗೆ ನಿರಾಕರಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿಲಾಗಿದೆ.
ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೋಲೀಸರು ತನಿಖೆ ನಡೆಸುತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು