1:04 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಬೈಂದೂರು: ಜಾತಿ ನಿಂದನೆ ಪ್ರಕರಣ; ಕಂಬದಕೋಣೆ ಅರ್ಚಕರ ವಿರುದ್ಧ ಪ್ರಕರಣ ದಾಖಲು

30/11/2022, 12:58

ಬೈಂದೂರು(reporterkarnataka.com): ಜಾತಿ ನಿಂದನೆ ಮಾಡಿದ ಹಾಗೂ ಪೂಜೆಯ ವಿಚಾರದಲ್ಲಿ ಅರ್ಚಕರ ವಿರುದ್ಧ ಪ್ರಕರಣವೊಂದು ಕಂಬದ ಕೋಣೆಯ ಕೊಕ್ಕೇಶ್ವರ ದೇವಾಲಯದಲ್ಲಿ ನಡೆದಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೆ.28ರಂದುಕಂಬದ ಕೋಣೆಯ ಕೊಕ್ಕೆಶ್ವರ ದೇವಾಲಯಕ್ಕೆ ಹೊದ ಸಂದರ್ಭದಲ್ಲಿ ಹಳಗೇರಿ ಶಿವರಾಮ ಎಂಬುವವರು ನ. 28 ರ ಬೆಳಗ್ಗೆ ದೇವರಿಗೆ ಪೂಜೆ ಮಾಡಿಸಲು ಹಣ್ಣುಕಾಯಿ, ಹೂವು ಹಾಗೂ ಪೂಜಾ ಸಾಮಗ್ರಿಗಳನ್ನು ತೆಗೆದುಕೊಂಡು ಮಗನೊಂದಿಗೆ ಕಂಬದ ಕೋಣೆ ಗ್ರಾಮದ ಕೊಕ್ಕೇಶ್ವರ ದೇವಸ್ಥಾನಕ್ಕೆ ಹೋಗಿದ್ದರು.

ಈ ವೇಳೆ ದೇವಸ್ಥಾನದ ಅರ್ಚಕರಾದ ಶೇಷಗಿರಿ ಕಾರಂತರು ಇದ್ದು, ಶಿವರಾಮ ಹಾಗೂ ಅವರ ಮಗನನ್ನು ತಡೆದು ನಿಲ್ಲಿಸಿದ್ದು, ಶಿವರಾಮ ಶೇಷಗಿರಿ ಕಾರಂತ ರವರಲ್ಲಿ ದೇವರಿಗೆ ಪೂಜೆ ಮಾಡಿಕೊಡುವಂತೆ ವಿನಂತಿಸಿಕೊಂಡಿದ್ದು ಅದಕ್ಕೆ ಶೇಷಗಿರಿ ಕಾರಂತರು ಒಪ್ಪದೇ ಇದ್ದು, ಶೇಷಗಿರಿ ಕಾರಂತರು ಶಿವರಾಮ ಹಾಗೂ ಅವರ ಮಗನಿಗೆ ಜಾತಿನಿಂದನೆ ಮಾಡಿ ದೇವಸ್ಥಾನಕ್ಕೆ ಪ್ರವೇಶ ಹಾಗೂ ಪೂಜೆಗೆ ನಿರಾಕರಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿಲಾಗಿದೆ.
ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೋಲೀಸರು ತನಿಖೆ ನಡೆಸುತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು