6:33 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಡಾ. ಅಂಬೇಡ್ಕರ್ ಚಿಂತನೆ ಯುವ ಪೀಳಿಗೆಯಲ್ಲಿ ಬಿತ್ತುವ ಕಾರ್ಯ ನಡೆಯಲಿ: ಶಾಸಕ ವೇದವ್ಯಾಸ ಕಾಮತ್

30/11/2022, 19:28

ಮಂಗಳೂರು(reporterkarnataka.com): ಅಂಬೇಡ್ಕರ್ ಚಿಂತನೆಗಳನ್ನು ಯುವ ಪೀಳಿಗೆ ಅಭ್ಯಸಿಸಿ ಅಳವಡಿಸಿಕೊಂಡಾಗ ದೇಶಕ್ಕೆ ಮುಂದಿನ ಭವಿಷ್ಯವಾಗಿ ವ್ಯಕ್ತಿತ್ವ ರೂಪುಗೊಳ್ಳಲಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು.

ಮಂಗಳೂರು ಮಹಾನಗರ ಪಾಲಿಕೆಯ ಕದ್ರಿ ಉತ್ತರ ವಾರ್ಡಿನ ನಂತೂರು ಶ್ರೀ ಕೊರಗಜ್ಜ ಗುಡಿಯ ಬಳಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶದ ಏಕತೆಯ ಕುರಿತು, ಸಾಮಾಜಿಕ ಸಮಾನತೆಯ ಕುರಿತು ದೂರ ದೃಷ್ಟಿಯ ಚಿಂತನೆಯಿಂದ ನಿರ್ಮಿಸಿದ ಸಂವಿಧಾನವು ಈ ದೇಶದ ಭದ್ರ ಬುನಾದಿ. ಅವರ ಚಿಂತನೆಗಳನ್ನು ಸಮಾಜದ ಯುವ ಪೀಳಿಗೆಗಳಲ್ಲಿ ಬಿತ್ತುವ ಮೂಲಕ ಅವರಲ್ಲಿ ರಾಷ್ರ್ಟಾಭಿಮಾನ ಬೆಳೆಸುವ ಕಾರ್ಯ ಆಗಬೇಕು ಎಂದು ಹೇಳಿದರು.

ನಂತೂರು ಪರಿಸರದಲ್ಲಿ ಅಂಬೇಡ್ಕರ್ ಭವನ ನಿರ್ಮಿಸುವ‌ ಕುರಿತು‌ ಸ್ಥಳೀಯರು ಸ್ಥಳೀಯ ಕಾರ್ಪೋರೇಟರ್ ಮೂಲಕ ಸಲ್ಲಿಸಿದ ಬೇಡಿಕೆಯಂತೆ 20 ಲಕ್ಷ ರೂಪಾಯಿ ಅನುದಾನ ನೀಡಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಶಕಿಲಾ ಕಾವಾ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ರಮೇಶ್ ಕಂಡೆಟ್ಟು, ಭಾಸ್ಕರ್ ಚಂದ್ರ ಶೆಟ್ಟಿ, ಮುಖಂಡರಾದ ಅಜಯ್ ಕುಲಶೇಖರ, ಮಂಗಳಾ ಆಚಾರ್ಯ, ಪೂರ್ಣಿಮಾ ರಾವ್, ಗಿರಿಧರ್ ಶೆಟ್ಟಿ, ಸಂತೋಷ್ ನಂತೂರು, ಪ್ರಸನ್ನ, ಕಮಲಾಕ್ಷಿ, ಗಾಯತ್ರಿ, ಶಿಲ್ಪ, ಉಮಾ ಕಂಡೆಟ್ಟು, ಉಮಾ ಶೆಟ್ಟಿ, ನಾರಾಯಣ ಶೆಟ್ಟಿ, ರಾಮಕೃಷ್ಣ ಕದ್ರಿ, ವೆಂಕಟೇಶ್ ಕದ್ರಿ, ನಿರ್ಮಲ ಗುಂಡಳಿಕೆ, ಸುಜಾತ ಗುಂಡಳಿಕೆ, ರವೀಂದ್ರ ನಂತೂರು, ವಿಜಯ ಶೆಣೈ, ಪುಷ್ಪ, ಹರಿ ನಂತೂರು, ಗಂಗಾಧರ್ ನಂತೂರು, ಕಮಲಾಕ್ಷಿ, ವಿಕ್ಟರ್ ಗುಂಡಳಿಕೆ, ಬೇಬಿ, ವಿದ್ಯಾ, ದೀಕ್ಷಾ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು