5:34 PM Friday3 - May 2024
ಬ್ರೇಕಿಂಗ್ ನ್ಯೂಸ್
ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:…

ಇತ್ತೀಚಿನ ಸುದ್ದಿ

ನೆರೆ ಸಂತ್ರಸ್ತರೊಂದಿಗೆ ಸುವರ್ಣ ಸೌಧಕ್ಕೆ ಮುತ್ತಿಗೆ: ಸರಕಾರಕ್ಕೆ ಕಾಂಗ್ರೆಸ್ ಎಚ್ಚರಿಕೆ

02/12/2022, 10:27

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಜಿಲ್ಲೆಯ ಅಥಣಿ ತಾಲೂಕಿನ ಕೃಷ್ಣಾ ನದಿ ನೆರೆ ಸಂತ್ರಸ್ತರಿಗೆ ಡಿ.19ರ ಒಳಗಾಗಿ ಹಕ್ಕುಪತ್ರ ನೀಡದಿದ್ದರೆ ನೆರೆ ಸಂತ್ರಸ್ತರೊಂದಿಗೆ ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುವದು ಎಂದು ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ತಾಲೂಕಿನ ರಡ್ಡೇರಹಟ್ಟಿ ಗ್ರಾಮದಲ್ಲಿ ವಾಸವಿರುವ ನಾಗನೂರ ಪಿ.ಕೆ. ಗ್ರಾಮದ 53 ಕುಟುಂಬಗಳಿಗೆ ಇಂದು ಸಂಜೆ ಆಹಾರ ಕಿಟ್ ವಿತರಿಸಿ ಮಾತನಾಡಿದ ಅವರು, ಕಳೆದ 18 ವರ್ಷಗಳಿಂದ ಮನೆ ಕಳೆದುಕೊಂಡು ನಿರ್ಗತಿಕರಾಗಿ ರಡ್ಡೇರಹಟ್ಟಿ ಗ್ರಾಮದಲ್ಲಿ ತಾತ್ಕಾಲಿಕ ಶೆಡ್ ಹೊಡೆದು ವಾಸವಿರುವ ಸಂತ್ರಸ್ತರಿಗೆ ಹಕ್ಕು ಪತ್ರ ವಿತರಣೆ ಮಾಡಿಲ್ಲ, ಮಳೆ ಬಂತೆಂದರೆ ಮಡ್ಡಿ ಬಸವಣ್ಣ ದೇವರ ಸಮುದಾಯ ಭವನದಲ್ಲಿ ಇವರ ವಾಸ ಅನಿವಾರ್ಯವಾಗಿದೆ. ಪಡಿತರ ಆಹಾರ ತರಲು ರಡ್ಡೇರಹಟ್ಟಿಯಿಂದ ನಾಗನೂರ ಪಿ.ಕೆ ಗ್ರಾಮಕ್ಕೆ ಸುಮಾರು 5 ಕಿಮೀ ದೂರ ಪ್ರಯಾಣಿಸಬೇಕು. 15 ವರ್ಷಗಳ ಕಾಲ ಶಾಸಕರಾಗಿ ಮಂತ್ರಿಗಳಾಗಿ ಉಪಮುಖ್ಯಮಂತ್ರಿ ಹುದ್ಧೆ ಅಲಂಕರಿಸಿದ ಲಕ್ಷ್ಮಣ ಸವದಿಯವರ ಸ್ವಗ್ರಾಮದ ಸಂತ್ರಸ್ತರ ಗತಿ ಈ ರೀತಿಯಾದರೆ ಉಳಿದವರ ಪಾಡೇನು? ಶಾಸಕ ಮಹೇಶ ಕುಮಠಳ್ಳಿ ಸಾವಿರಾರು ಕೋಟಿ ಅನುದಾನ ತಂದಿರುವದಾಗಿ ಹೇಳುತ್ತಿದ್ದು, ಅದು ಎಲ್ಲಿ ಹೋಯಿತು ಎಂದು ಪ್ರಶ್ನಿಸಿದರು.


ಇದೇ 19 ರೊಳಗೆ ನೆರೆ ಸಂತ್ರಸ್ತರಿಗೆ ಹಕ್ಕುಪತ್ರ ನೀಡಿ ಮನೆ ನಿರ್ಮಿಸಿಕೊಡಬೇಕು ಇಲ್ಲದಿದ್ದರೆ, ನಾಗನೂರ.ಪಿ.ಕೆ ಗ್ರಾಮದಿಂದ ಬೆಳಗಾವಿ ಸುವರ್ಣಸೌದವರೆಗೆ ಸಂತ್ರರೊಂದಿಗೆ ಪಾದಯಾತ್ರೆ ಕೈಗೊಳ್ಳಲಾಗುವದು ಎಂದರು.

ಜಿಲ್ಲಾ ಕಾಂಗ್ರೆಸ್ ಕಿಸಾನ್ ಫಟಕದ ಅಧ್ಯಕ್ಷ ಶಿವು ಗುಡ್ಡಾಪುರ ಮಾತನಾಡಿ, ಮನೆಗೆದ್ದು ಮಾರುಗೆದ್ದ ಎಂಬ ನಾಣ್ಣುಡಿ ಇದೆ ಸ್ವಂತ ಊರಿನ ಜನರಿಗೆ ನ್ಯಾಯ ಒದಗಿಸುವಲ್ಲಿ ಲಕ್ಷ್ಮಣ ಸವದಿ ವಿಫಲರಾಗಿದ್ದು ಅವರಲ್ಲಿ ಇಚ್ಛಾಶಕ್ತಿ ಕೊರತೆ ಎದ್ದು ಕಾಣುತ್ತಿದೆ ಎಂದರು.

ಈ ವೇಳೆ ಮುಖಂಡರಾದ ಸುನೀಲ ಸಂಕ, ಸಿದ್ಧಾರ್ಥ ಶಿಂಗೆ, ರಾವಸಾಬ ಐಹೊಳೆ, ಶ್ರೀಕಾಂತ ಪೂಜಾರಿ, ಭೀಮಪ್ಪ ಯಕ್ಕುಂಡಿ, ರಮೇಶ ಪವಾರ, ಬಸವರಾಜ ಬುಟಾಳಿ, ಶಂಕರ ಮಗದುಮ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು