1:33 AM Sunday5 - April 2026
ಬ್ರೇಕಿಂಗ್ ನ್ಯೂಸ್
ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ…

ಇತ್ತೀಚಿನ ಸುದ್ದಿ

ನೆರೆ ಸಂತ್ರಸ್ತರೊಂದಿಗೆ ಸುವರ್ಣ ಸೌಧಕ್ಕೆ ಮುತ್ತಿಗೆ: ಸರಕಾರಕ್ಕೆ ಕಾಂಗ್ರೆಸ್ ಎಚ್ಚರಿಕೆ

02/12/2022, 10:27

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಜಿಲ್ಲೆಯ ಅಥಣಿ ತಾಲೂಕಿನ ಕೃಷ್ಣಾ ನದಿ ನೆರೆ ಸಂತ್ರಸ್ತರಿಗೆ ಡಿ.19ರ ಒಳಗಾಗಿ ಹಕ್ಕುಪತ್ರ ನೀಡದಿದ್ದರೆ ನೆರೆ ಸಂತ್ರಸ್ತರೊಂದಿಗೆ ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುವದು ಎಂದು ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ತಾಲೂಕಿನ ರಡ್ಡೇರಹಟ್ಟಿ ಗ್ರಾಮದಲ್ಲಿ ವಾಸವಿರುವ ನಾಗನೂರ ಪಿ.ಕೆ. ಗ್ರಾಮದ 53 ಕುಟುಂಬಗಳಿಗೆ ಇಂದು ಸಂಜೆ ಆಹಾರ ಕಿಟ್ ವಿತರಿಸಿ ಮಾತನಾಡಿದ ಅವರು, ಕಳೆದ 18 ವರ್ಷಗಳಿಂದ ಮನೆ ಕಳೆದುಕೊಂಡು ನಿರ್ಗತಿಕರಾಗಿ ರಡ್ಡೇರಹಟ್ಟಿ ಗ್ರಾಮದಲ್ಲಿ ತಾತ್ಕಾಲಿಕ ಶೆಡ್ ಹೊಡೆದು ವಾಸವಿರುವ ಸಂತ್ರಸ್ತರಿಗೆ ಹಕ್ಕು ಪತ್ರ ವಿತರಣೆ ಮಾಡಿಲ್ಲ, ಮಳೆ ಬಂತೆಂದರೆ ಮಡ್ಡಿ ಬಸವಣ್ಣ ದೇವರ ಸಮುದಾಯ ಭವನದಲ್ಲಿ ಇವರ ವಾಸ ಅನಿವಾರ್ಯವಾಗಿದೆ. ಪಡಿತರ ಆಹಾರ ತರಲು ರಡ್ಡೇರಹಟ್ಟಿಯಿಂದ ನಾಗನೂರ ಪಿ.ಕೆ ಗ್ರಾಮಕ್ಕೆ ಸುಮಾರು 5 ಕಿಮೀ ದೂರ ಪ್ರಯಾಣಿಸಬೇಕು. 15 ವರ್ಷಗಳ ಕಾಲ ಶಾಸಕರಾಗಿ ಮಂತ್ರಿಗಳಾಗಿ ಉಪಮುಖ್ಯಮಂತ್ರಿ ಹುದ್ಧೆ ಅಲಂಕರಿಸಿದ ಲಕ್ಷ್ಮಣ ಸವದಿಯವರ ಸ್ವಗ್ರಾಮದ ಸಂತ್ರಸ್ತರ ಗತಿ ಈ ರೀತಿಯಾದರೆ ಉಳಿದವರ ಪಾಡೇನು? ಶಾಸಕ ಮಹೇಶ ಕುಮಠಳ್ಳಿ ಸಾವಿರಾರು ಕೋಟಿ ಅನುದಾನ ತಂದಿರುವದಾಗಿ ಹೇಳುತ್ತಿದ್ದು, ಅದು ಎಲ್ಲಿ ಹೋಯಿತು ಎಂದು ಪ್ರಶ್ನಿಸಿದರು.


ಇದೇ 19 ರೊಳಗೆ ನೆರೆ ಸಂತ್ರಸ್ತರಿಗೆ ಹಕ್ಕುಪತ್ರ ನೀಡಿ ಮನೆ ನಿರ್ಮಿಸಿಕೊಡಬೇಕು ಇಲ್ಲದಿದ್ದರೆ, ನಾಗನೂರ.ಪಿ.ಕೆ ಗ್ರಾಮದಿಂದ ಬೆಳಗಾವಿ ಸುವರ್ಣಸೌದವರೆಗೆ ಸಂತ್ರರೊಂದಿಗೆ ಪಾದಯಾತ್ರೆ ಕೈಗೊಳ್ಳಲಾಗುವದು ಎಂದರು.

ಜಿಲ್ಲಾ ಕಾಂಗ್ರೆಸ್ ಕಿಸಾನ್ ಫಟಕದ ಅಧ್ಯಕ್ಷ ಶಿವು ಗುಡ್ಡಾಪುರ ಮಾತನಾಡಿ, ಮನೆಗೆದ್ದು ಮಾರುಗೆದ್ದ ಎಂಬ ನಾಣ್ಣುಡಿ ಇದೆ ಸ್ವಂತ ಊರಿನ ಜನರಿಗೆ ನ್ಯಾಯ ಒದಗಿಸುವಲ್ಲಿ ಲಕ್ಷ್ಮಣ ಸವದಿ ವಿಫಲರಾಗಿದ್ದು ಅವರಲ್ಲಿ ಇಚ್ಛಾಶಕ್ತಿ ಕೊರತೆ ಎದ್ದು ಕಾಣುತ್ತಿದೆ ಎಂದರು.

ಈ ವೇಳೆ ಮುಖಂಡರಾದ ಸುನೀಲ ಸಂಕ, ಸಿದ್ಧಾರ್ಥ ಶಿಂಗೆ, ರಾವಸಾಬ ಐಹೊಳೆ, ಶ್ರೀಕಾಂತ ಪೂಜಾರಿ, ಭೀಮಪ್ಪ ಯಕ್ಕುಂಡಿ, ರಮೇಶ ಪವಾರ, ಬಸವರಾಜ ಬುಟಾಳಿ, ಶಂಕರ ಮಗದುಮ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು