6:32 AM Friday3 - April 2026
ಬ್ರೇಕಿಂಗ್ ನ್ಯೂಸ್
ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;…

ಇತ್ತೀಚಿನ ಸುದ್ದಿ

ಶಾಲೆಗೆ ಲೆಗಿನ್ಸ್ ಧರಿಸಿಕೊಂಡು ಬಂದ ಶಿಕ್ಷಕಿಗೆ ಅವಮಾನ: ಮುಖ್ಯ ಶಿಕ್ಷಕಿ ವಿರುದ್ಧ ಶಿಕ್ಷಣಾಧಿಕಾರಿಗೆ ದೂರು

02/12/2022, 13:23

ಮಲಪ್ಪುರಂ(reporter Karnataka.com): ಲೆಗ್ಗಿನ್ಸ್ ಧರಿಸಿಕೊಂಡು ಶಾಲೆಗೆ ಬಂದ ಶಿಕ್ಷಕಿಯೊಬ್ಬರನ್ನು ಮುಖ್ಯ ಶಿಕ್ಷಕಿ ನಿಂದಿಸಿ ಅನುಚಿತವಾಗಿ ವರ್ತಿಸಿದ ಘಟನೆ ಮಲಪ್ಪುರಂ ಜಿಲ್ಲೆಯ ಎಡಪಟ್ಟದಲ್ಲಿ ನಡೆದಿದ್ದು, ನಿಂದನೆಗೊಳಗಾದ ಶಿಕ್ಷಕಿ ದೂರು ನೀಡಿದ್ದಾರೆ.

ಶಿಕ್ಷಕಿ ಸರಿತಾ ಅವರು 13 ವರ್ಷಗಳಿಂದ ಅಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದೀಗ ಅವರು ಜಿಲ್ಲಾ ಶಿಕ್ಷಣಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಸರಿತಾ ಅವರು ಮಿಸಸ್ ಕೇರಳ ಎಂಬ ಬಿರುದಿಗೆ ಪಾತ್ರರಾಗಿದ್ದಾರೆ.
ಅವರು ಹಾಕಿದ ವಸ್ತ್ರ ನೋಡಿ ಮುಖ್ಯ ಶಿಕ್ಷಕಿ ರಾಮಲತಾ ‘ಶಿಕ್ಷಕಿ ಆಗಿ ಸರಿತಾ ಅವರೇ ಇಂತಹ ಬಟ್ಟೆ ಧರಿಸಿ ಶಾಲೆಗೆ ಬರುವಾಗ ಮಕ್ಕಳಿಗೆ ಶಿಸ್ತಿನ ಉಡುಪು ಧರಿಸಿ ಶಾಲೆಗೆ ಬನ್ನಿ ಎಂದು ಹೇಳುವುದು ಹೇಗೆ?’ ಎಂದು ಪ್ರಶ್ನಿಸಿದ್ದಾರೆ. ಮೊದಲಿಗೆ ಇದನ್ನು ತಮಾಷೆಯಾಗಿ ತೆಗೆದುಕೊಂಡ ಶಿಕ್ಷಕಿ ‘ಶಿಕ್ಷಕರಿಗೆ ಸಮವಸ್ತ್ರ ಇದೆಯೇ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿದ ರಾಮಲತಾ ‘ನಮ್ಮ ಶಾಲೆಯ ಹೆಣ್ಣು ಮಕ್ಕಳು ಕೂಡ ಇಂತಹ ಬಟ್ಟೆ ಧರಿಸಿ ಶಾಲೆಗೆ ಬರೋದಿಲ್ಲ. ಅವರ ಸಂಸ್ಕೃತಿ ಅವರು ಹಾಕಿರೋ ಪ್ಯಾಂಟಿನಿಂದಲೇ ಗೊತ್ತಾಗುತ್ತೆ’ ಎಂದಿದ್ದಾರೆ.

ಇದಕ್ಕೆ ಉತ್ತರಿಸಿದ ಸರಿತಾ ಸ ಅವರು ನಾನು ಸಭ್ಯವಾಗಿ ಬಟ್ಟೆ ಧರಿಸಿದ್ದೆ. ಇವರ ಆ ವರ್ತನೆ ನನ್ನನ್ನು ಮಾನಸಿಕ ಯಾತನೆಗೆ ದೂಡಿದೆ. ನಾನು ಹಾಕಿದ್ದ ಡ್ರೆಸ್ ನ ಫೋಟೋ ಸಮೇತ ದೂರು ನೀಡಿದ್ದೇನೆ. ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು