1:28 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಶಾಲೆಗೆ ಲೆಗಿನ್ಸ್ ಧರಿಸಿಕೊಂಡು ಬಂದ ಶಿಕ್ಷಕಿಗೆ ಅವಮಾನ: ಮುಖ್ಯ ಶಿಕ್ಷಕಿ ವಿರುದ್ಧ ಶಿಕ್ಷಣಾಧಿಕಾರಿಗೆ ದೂರು

02/12/2022, 13:23

ಮಲಪ್ಪುರಂ(reporter Karnataka.com): ಲೆಗ್ಗಿನ್ಸ್ ಧರಿಸಿಕೊಂಡು ಶಾಲೆಗೆ ಬಂದ ಶಿಕ್ಷಕಿಯೊಬ್ಬರನ್ನು ಮುಖ್ಯ ಶಿಕ್ಷಕಿ ನಿಂದಿಸಿ ಅನುಚಿತವಾಗಿ ವರ್ತಿಸಿದ ಘಟನೆ ಮಲಪ್ಪುರಂ ಜಿಲ್ಲೆಯ ಎಡಪಟ್ಟದಲ್ಲಿ ನಡೆದಿದ್ದು, ನಿಂದನೆಗೊಳಗಾದ ಶಿಕ್ಷಕಿ ದೂರು ನೀಡಿದ್ದಾರೆ.

ಶಿಕ್ಷಕಿ ಸರಿತಾ ಅವರು 13 ವರ್ಷಗಳಿಂದ ಅಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದೀಗ ಅವರು ಜಿಲ್ಲಾ ಶಿಕ್ಷಣಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಸರಿತಾ ಅವರು ಮಿಸಸ್ ಕೇರಳ ಎಂಬ ಬಿರುದಿಗೆ ಪಾತ್ರರಾಗಿದ್ದಾರೆ.
ಅವರು ಹಾಕಿದ ವಸ್ತ್ರ ನೋಡಿ ಮುಖ್ಯ ಶಿಕ್ಷಕಿ ರಾಮಲತಾ ‘ಶಿಕ್ಷಕಿ ಆಗಿ ಸರಿತಾ ಅವರೇ ಇಂತಹ ಬಟ್ಟೆ ಧರಿಸಿ ಶಾಲೆಗೆ ಬರುವಾಗ ಮಕ್ಕಳಿಗೆ ಶಿಸ್ತಿನ ಉಡುಪು ಧರಿಸಿ ಶಾಲೆಗೆ ಬನ್ನಿ ಎಂದು ಹೇಳುವುದು ಹೇಗೆ?’ ಎಂದು ಪ್ರಶ್ನಿಸಿದ್ದಾರೆ. ಮೊದಲಿಗೆ ಇದನ್ನು ತಮಾಷೆಯಾಗಿ ತೆಗೆದುಕೊಂಡ ಶಿಕ್ಷಕಿ ‘ಶಿಕ್ಷಕರಿಗೆ ಸಮವಸ್ತ್ರ ಇದೆಯೇ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿದ ರಾಮಲತಾ ‘ನಮ್ಮ ಶಾಲೆಯ ಹೆಣ್ಣು ಮಕ್ಕಳು ಕೂಡ ಇಂತಹ ಬಟ್ಟೆ ಧರಿಸಿ ಶಾಲೆಗೆ ಬರೋದಿಲ್ಲ. ಅವರ ಸಂಸ್ಕೃತಿ ಅವರು ಹಾಕಿರೋ ಪ್ಯಾಂಟಿನಿಂದಲೇ ಗೊತ್ತಾಗುತ್ತೆ’ ಎಂದಿದ್ದಾರೆ.

ಇದಕ್ಕೆ ಉತ್ತರಿಸಿದ ಸರಿತಾ ಸ ಅವರು ನಾನು ಸಭ್ಯವಾಗಿ ಬಟ್ಟೆ ಧರಿಸಿದ್ದೆ. ಇವರ ಆ ವರ್ತನೆ ನನ್ನನ್ನು ಮಾನಸಿಕ ಯಾತನೆಗೆ ದೂಡಿದೆ. ನಾನು ಹಾಕಿದ್ದ ಡ್ರೆಸ್ ನ ಫೋಟೋ ಸಮೇತ ದೂರು ನೀಡಿದ್ದೇನೆ. ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು