7:07 PM Friday9 - May 2025
ಬ್ರೇಕಿಂಗ್ ನ್ಯೂಸ್
J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ… Chikkamagaluru | ಮಲೆನಾಡಿನಲ್ಲಿ ಮಿತಿಮೀರಿದ ಕಾಡುಪ್ರಾಣಿಗಳ ಉಪಟಳ: ಮೂಡಿಗೆರೆ ಸಮೀಪ ಹಸುವನ್ನು ಕೊಂದ… ಮಾಜಿ ಮುಖ್ಯಮಂತ್ರಿ, ದಿವಂಗತ ಕೆ.ಸಿ.ರೆಡ್ಡಿ ಅವರ ಜನ್ಮದಿನ: ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾವಿನ ರಾಜಧಾನಿ ಶ್ರೀನಿವಾಸಪುರ ಮತ್ತೆ ಸಜ್ಜು: ಮೇ 15ರಿಂದ ಮಾರಾಟ ಭರ್ಜರಿ ಆರಂಭ Chikkamagaluru | ಕಾಶ್ಮೀರದಲ್ಲಿ ಉಗ್ರರ ದಾಳಿ: ಕೊಟ್ಟಿಗೆಹಾರ ಬಂದ್; ಅಂಗಡಿ-ಮುಂಗಟ್ಟು ಸ್ತಬ್ದ

ಇತ್ತೀಚಿನ ಸುದ್ದಿ

ಶಾಲೆಗೆ ಲೆಗಿನ್ಸ್ ಧರಿಸಿಕೊಂಡು ಬಂದ ಶಿಕ್ಷಕಿಗೆ ಅವಮಾನ: ಮುಖ್ಯ ಶಿಕ್ಷಕಿ ವಿರುದ್ಧ ಶಿಕ್ಷಣಾಧಿಕಾರಿಗೆ ದೂರು

02/12/2022, 13:23

ಮಲಪ್ಪುರಂ(reporter Karnataka.com): ಲೆಗ್ಗಿನ್ಸ್ ಧರಿಸಿಕೊಂಡು ಶಾಲೆಗೆ ಬಂದ ಶಿಕ್ಷಕಿಯೊಬ್ಬರನ್ನು ಮುಖ್ಯ ಶಿಕ್ಷಕಿ ನಿಂದಿಸಿ ಅನುಚಿತವಾಗಿ ವರ್ತಿಸಿದ ಘಟನೆ ಮಲಪ್ಪುರಂ ಜಿಲ್ಲೆಯ ಎಡಪಟ್ಟದಲ್ಲಿ ನಡೆದಿದ್ದು, ನಿಂದನೆಗೊಳಗಾದ ಶಿಕ್ಷಕಿ ದೂರು ನೀಡಿದ್ದಾರೆ.

ಶಿಕ್ಷಕಿ ಸರಿತಾ ಅವರು 13 ವರ್ಷಗಳಿಂದ ಅಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದೀಗ ಅವರು ಜಿಲ್ಲಾ ಶಿಕ್ಷಣಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಸರಿತಾ ಅವರು ಮಿಸಸ್ ಕೇರಳ ಎಂಬ ಬಿರುದಿಗೆ ಪಾತ್ರರಾಗಿದ್ದಾರೆ.
ಅವರು ಹಾಕಿದ ವಸ್ತ್ರ ನೋಡಿ ಮುಖ್ಯ ಶಿಕ್ಷಕಿ ರಾಮಲತಾ ‘ಶಿಕ್ಷಕಿ ಆಗಿ ಸರಿತಾ ಅವರೇ ಇಂತಹ ಬಟ್ಟೆ ಧರಿಸಿ ಶಾಲೆಗೆ ಬರುವಾಗ ಮಕ್ಕಳಿಗೆ ಶಿಸ್ತಿನ ಉಡುಪು ಧರಿಸಿ ಶಾಲೆಗೆ ಬನ್ನಿ ಎಂದು ಹೇಳುವುದು ಹೇಗೆ?’ ಎಂದು ಪ್ರಶ್ನಿಸಿದ್ದಾರೆ. ಮೊದಲಿಗೆ ಇದನ್ನು ತಮಾಷೆಯಾಗಿ ತೆಗೆದುಕೊಂಡ ಶಿಕ್ಷಕಿ ‘ಶಿಕ್ಷಕರಿಗೆ ಸಮವಸ್ತ್ರ ಇದೆಯೇ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿದ ರಾಮಲತಾ ‘ನಮ್ಮ ಶಾಲೆಯ ಹೆಣ್ಣು ಮಕ್ಕಳು ಕೂಡ ಇಂತಹ ಬಟ್ಟೆ ಧರಿಸಿ ಶಾಲೆಗೆ ಬರೋದಿಲ್ಲ. ಅವರ ಸಂಸ್ಕೃತಿ ಅವರು ಹಾಕಿರೋ ಪ್ಯಾಂಟಿನಿಂದಲೇ ಗೊತ್ತಾಗುತ್ತೆ’ ಎಂದಿದ್ದಾರೆ.

ಇದಕ್ಕೆ ಉತ್ತರಿಸಿದ ಸರಿತಾ ಸ ಅವರು ನಾನು ಸಭ್ಯವಾಗಿ ಬಟ್ಟೆ ಧರಿಸಿದ್ದೆ. ಇವರ ಆ ವರ್ತನೆ ನನ್ನನ್ನು ಮಾನಸಿಕ ಯಾತನೆಗೆ ದೂಡಿದೆ. ನಾನು ಹಾಕಿದ್ದ ಡ್ರೆಸ್ ನ ಫೋಟೋ ಸಮೇತ ದೂರು ನೀಡಿದ್ದೇನೆ. ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು