11:47 PM Friday14 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ…

ಇತ್ತೀಚಿನ ಸುದ್ದಿ

ದ.ಕ. ಜಿಲ್ಲೆಯಲ್ಲಿ ದನಗಳಿಗೆ ಚರ್ಮಗಂಟು ರೋಗ: ಮುನ್ನೆಚ್ಚರಿಕೆ ವಹಿಸಲು ಸೂಚನೆ

02/12/2022, 13:53

ಸುಳ್ಯ(reporterkarnataka.com): ಉತ್ತರ ಕರ್ನಾಟಕದಲ್ಲಿ ಕಾಣಿಸಿಕೊಂಡ ಚರ್ಮಗಂಟು ರೋಗ ಈಗ ದ.ಕ. ದಲ್ಲಿ ಕಾಣಿಸಿಕೊಂಡಿದೆ. ಆ ಮೂಲಕ ಹೈನುಗಾರರ ನಿದ್ದೆಗೆಡಿಸುವಂತೆ ಮಾಡಿದೆ.

ಜಿಲ್ಲೆಯ ಬೆಳ್ತಂಗಡಿ, ಕಡಬ, ಸುಳ್ಯ ತಾಲೂಕುಗಳ ಕೆಲವು ಗ್ರಾಮಗಳಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗದ ಲಕ್ಷಣಗಳು ಕಂಡು ಬಂದಿವೆ.
ಚರ್ಮಗಂಟು ರೋಗವು ದನ ಮತ್ತು ಎಮ್ಮೆಗಳಲ್ಲಿ ಕಂಡು ಬರುವ ವೈರಸ್ ಕಾಯಿಲೆಯಾಗಿದ್ದು ಕ್ಯಾಪ್ರಿಪಾಕ್ಸ್ ಎಂಬ ವೈರಾಣುವಿನಿಂದ ಹರಡುತ್ತದೆ. ರೋಗ ತಗುಲಿದ ಪ್ರಾಣಿಯಿಂದ ರಕ್ತ ಹೀರುವ ಸೊಳ್ಳೆ,ಉಣ್ಣೆ ನೊಣಗಳು ಆರೋಗ್ಯವಂತ ಜಾನುವಾರುಗಳಿಗೆ ಕಚ್ಚುವ ಮೂಲಕ ರೋಗವನ್ನು ಹರಡುತ್ತವೆ. ರೋಗಪೀಡಿತ ಜಾನುವಾರುಗಳ ರಕ್ತ, ಕೀವು, ದೈಹಿಕ ಸ್ರಾವಗಳ ನೇರ ಸಂಪರ್ಕದಿಂದಲೂ ರೋಗಾಣು ಹರಡಬಹುದು.

ಬೆಳ್ತಂಗಡಿ ತಾಲೂಕಿನ ಹೊಸಂಗಡಿ, ಚಿಬಿದ್ರೆ, ಧರ್ಮಸ್ಥಳ ಗ್ರಾಮಗಳ ಶಂಕಿತ 5 ಹಸುಗಳ ಕಡಬದ ಕಡಬ, ಕುಟುಪಾಡಿ, ಬಂಟ್ರ ಗ್ರಾಮಗಳ 3 ಹಸುಗಳ, ಸುಳ್ಯ ತಾಲೂಕಿನ ಉಬರಡ್ಕ ಮಿತ್ತೂರು, ಮಕರ್ಂಜೆ ಗ್ರಾಮಗಳ 2 ಚರ್ಮ ಗಂಟು ರೋಗ ಶಂಕಿತ ಹಸುಗಳ ರಕ್ತದ ಮಾದರಿಯನ್ನು ಜಿಲ್ಲಾ ಪ್ರಯೋಗಕ್ಕೆ ಈಗಾಗಲೇ ರವಾನಿಸಲಾಗಿದೆ.
ಚರ್ಮಗಂಟು ರೋಗದ ಲಕ್ಷಣಗಳು ಕಂಡು ಬರುತ್ತಿದ್ದಂತೆ ಇದೀಗ ಜಿಲ್ಲೆಯ ಪ್ರತಿ ತಾಲೂಕಿಗೆ ತಲಾ 19,000 ಲಸಿಕೆಯನ್ನು ಇಲಾಖೆ ವತಿಯಿಂದ ಪೂರೈಸಲಾಗಿದ್ದು, ಅಲ್ಲಲ್ಲಿ ಶಿಬಿರಗಳನ್ನು ಏರ್ಪಡಿಸುವ ಮೂಲಕ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು