8:59 PM Monday30 - March 2026
ಬ್ರೇಕಿಂಗ್ ನ್ಯೂಸ್
ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ…

ಇತ್ತೀಚಿನ ಸುದ್ದಿ

ಕಾಡಾನೆ ಸೆರೆ ಕಾರ್ಯಾಚರಣೆ 4ನೇ ದಿನಕ್ಕೆ: ಡ್ರೋನ್ ಕ್ಯಾಮರಕ್ಕೂ ಚಳ್ಳೆಹಣ್ಣು ತಿನ್ನಿಸಿದ ಮೂಡಿಗೆರೆ ಭೈರ

02/12/2022, 18:10

ಸಂತೋಪ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ಜಿಲ್ಲೆಯ ಮೂಡಿಗೆರೆ ತಾಲೂಕಿನ ವಿವಿಧೆಡೆ ನರಹಂತಕ ಕಾಡಾನೆ ಸೆರೆಗೆ ಕಾರ್ಯಾಚರಣೆ ಆರಂಭಗೊಂಡಿದ್ದು,ಡ್ರೋನ್ ಕ್ಯಾಮರಕ್ಕೂ ಮೂಡಿಗೆರೆ ಭೈರ ಚಳ್ಳೆಹಣ್ಣು ತಿನ್ನಿಸಿದೆ.

ಕಾಫಿನಾಡ ಮಲೆನಾಡು ಭಾಗದಲ್ಲಿ ಕಾಡಾನೆ ಭೀತಿ-ಹಾವಳಿ ಎಗ್ಗಿಲ್ಲದೆ ಮುಂದುವರಿದಿದೆ. ಒಂದೆಡೆ ನರಹಂತಕ ಆನೆಗಳ ಹುಡುಕಾಟ ನಡೆಯುತ್ತಿದ್ದರೆ,ಮತ್ತೊಂದೆಡೆ ಮೈಕ್ ಅನೌನ್ಸ್ ಮೆಂಟ್ ನಡೆಯುತ್ತಿದೆ.
ಚಿಕ್ಕಮಗಳೂರು ತಾಲೂಕಿನ ಆಲ್ದೂರು ಭಾಗದಲ್ಲಿ 3 ಕಾಡಾನೆಗಳು ರೌಂಡ್ಸ್ ಮಾಡುತ್ತಿದೆ. ಕಾಫಿ ತೋಟದಲ್ಲೇ ಬೀಡು ಬಿಟ್ಟಿರುವ ಕಾಡಾನೆಗಳು, ಸ್ಥಳಿಯರಲ್ಲಿ ಆತಂಕ ಉಂಟು ಮಾಡಿದೆ.

ಜನ ಎಚ್ಚರಿಕೆಯಿಂದಿರಿ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮೈಕ್ ನಲ್ಲಿ ಅನೌನ್ಸ್ ಮೆಂಟ್ ಮಾಡುತ್ತಿದ್ದಾರೆ. ಆದರೆ ಆನೆಗಳು ಕಾರ್ಯಚರಣೆಗೂ ಸಿಗದೆ ತಪ್ಪಿಸಿಕೊಳ್ಳುತ್ತಿವೆ.

ಡ್ರೋನ್ ಬಳಸಿ ಮೂಡಿಗೆರೆ ಬೈರಾ ಹಾಗೂ ಮತ್ತೊಂದು ಒಂಟಿ ಸಲಗಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ. ನಾಲ್ಕನೇ ದಿನವೂ ಕಾರ್ಯಚರಣೆ ಮುಂದುವರಿದಿದೆ.
ಚಿಕ್ಕಮಗಳೂರು ಹಾಗೂ ಮೂಡಿಗೆರೆ ತಾಲೂಕಿನ‌ ಕುಂದೂರು, ತಳವಾರ ಸುತ್ತಮುತ್ತ ಕಾರ್ಯಾಚರಣೆ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು