12:04 AM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕಾಡಾನೆ ಸೆರೆ ಕಾರ್ಯಾಚರಣೆ 4ನೇ ದಿನಕ್ಕೆ: ಡ್ರೋನ್ ಕ್ಯಾಮರಕ್ಕೂ ಚಳ್ಳೆಹಣ್ಣು ತಿನ್ನಿಸಿದ ಮೂಡಿಗೆರೆ ಭೈರ

02/12/2022, 18:10

ಸಂತೋಪ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ಜಿಲ್ಲೆಯ ಮೂಡಿಗೆರೆ ತಾಲೂಕಿನ ವಿವಿಧೆಡೆ ನರಹಂತಕ ಕಾಡಾನೆ ಸೆರೆಗೆ ಕಾರ್ಯಾಚರಣೆ ಆರಂಭಗೊಂಡಿದ್ದು,ಡ್ರೋನ್ ಕ್ಯಾಮರಕ್ಕೂ ಮೂಡಿಗೆರೆ ಭೈರ ಚಳ್ಳೆಹಣ್ಣು ತಿನ್ನಿಸಿದೆ.

ಕಾಫಿನಾಡ ಮಲೆನಾಡು ಭಾಗದಲ್ಲಿ ಕಾಡಾನೆ ಭೀತಿ-ಹಾವಳಿ ಎಗ್ಗಿಲ್ಲದೆ ಮುಂದುವರಿದಿದೆ. ಒಂದೆಡೆ ನರಹಂತಕ ಆನೆಗಳ ಹುಡುಕಾಟ ನಡೆಯುತ್ತಿದ್ದರೆ,ಮತ್ತೊಂದೆಡೆ ಮೈಕ್ ಅನೌನ್ಸ್ ಮೆಂಟ್ ನಡೆಯುತ್ತಿದೆ.
ಚಿಕ್ಕಮಗಳೂರು ತಾಲೂಕಿನ ಆಲ್ದೂರು ಭಾಗದಲ್ಲಿ 3 ಕಾಡಾನೆಗಳು ರೌಂಡ್ಸ್ ಮಾಡುತ್ತಿದೆ. ಕಾಫಿ ತೋಟದಲ್ಲೇ ಬೀಡು ಬಿಟ್ಟಿರುವ ಕಾಡಾನೆಗಳು, ಸ್ಥಳಿಯರಲ್ಲಿ ಆತಂಕ ಉಂಟು ಮಾಡಿದೆ.

ಜನ ಎಚ್ಚರಿಕೆಯಿಂದಿರಿ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮೈಕ್ ನಲ್ಲಿ ಅನೌನ್ಸ್ ಮೆಂಟ್ ಮಾಡುತ್ತಿದ್ದಾರೆ. ಆದರೆ ಆನೆಗಳು ಕಾರ್ಯಚರಣೆಗೂ ಸಿಗದೆ ತಪ್ಪಿಸಿಕೊಳ್ಳುತ್ತಿವೆ.

ಡ್ರೋನ್ ಬಳಸಿ ಮೂಡಿಗೆರೆ ಬೈರಾ ಹಾಗೂ ಮತ್ತೊಂದು ಒಂಟಿ ಸಲಗಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ. ನಾಲ್ಕನೇ ದಿನವೂ ಕಾರ್ಯಚರಣೆ ಮುಂದುವರಿದಿದೆ.
ಚಿಕ್ಕಮಗಳೂರು ಹಾಗೂ ಮೂಡಿಗೆರೆ ತಾಲೂಕಿನ‌ ಕುಂದೂರು, ತಳವಾರ ಸುತ್ತಮುತ್ತ ಕಾರ್ಯಾಚರಣೆ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು