2:11 PM Wednesday24 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ಕಾಡಾನೆ ಸೆರೆ ಕಾರ್ಯಾಚರಣೆ 4ನೇ ದಿನಕ್ಕೆ: ಡ್ರೋನ್ ಕ್ಯಾಮರಕ್ಕೂ ಚಳ್ಳೆಹಣ್ಣು ತಿನ್ನಿಸಿದ ಮೂಡಿಗೆರೆ ಭೈರ

02/12/2022, 18:10

ಸಂತೋಪ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ಜಿಲ್ಲೆಯ ಮೂಡಿಗೆರೆ ತಾಲೂಕಿನ ವಿವಿಧೆಡೆ ನರಹಂತಕ ಕಾಡಾನೆ ಸೆರೆಗೆ ಕಾರ್ಯಾಚರಣೆ ಆರಂಭಗೊಂಡಿದ್ದು,ಡ್ರೋನ್ ಕ್ಯಾಮರಕ್ಕೂ ಮೂಡಿಗೆರೆ ಭೈರ ಚಳ್ಳೆಹಣ್ಣು ತಿನ್ನಿಸಿದೆ.

ಕಾಫಿನಾಡ ಮಲೆನಾಡು ಭಾಗದಲ್ಲಿ ಕಾಡಾನೆ ಭೀತಿ-ಹಾವಳಿ ಎಗ್ಗಿಲ್ಲದೆ ಮುಂದುವರಿದಿದೆ. ಒಂದೆಡೆ ನರಹಂತಕ ಆನೆಗಳ ಹುಡುಕಾಟ ನಡೆಯುತ್ತಿದ್ದರೆ,ಮತ್ತೊಂದೆಡೆ ಮೈಕ್ ಅನೌನ್ಸ್ ಮೆಂಟ್ ನಡೆಯುತ್ತಿದೆ.
ಚಿಕ್ಕಮಗಳೂರು ತಾಲೂಕಿನ ಆಲ್ದೂರು ಭಾಗದಲ್ಲಿ 3 ಕಾಡಾನೆಗಳು ರೌಂಡ್ಸ್ ಮಾಡುತ್ತಿದೆ. ಕಾಫಿ ತೋಟದಲ್ಲೇ ಬೀಡು ಬಿಟ್ಟಿರುವ ಕಾಡಾನೆಗಳು, ಸ್ಥಳಿಯರಲ್ಲಿ ಆತಂಕ ಉಂಟು ಮಾಡಿದೆ.

ಜನ ಎಚ್ಚರಿಕೆಯಿಂದಿರಿ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮೈಕ್ ನಲ್ಲಿ ಅನೌನ್ಸ್ ಮೆಂಟ್ ಮಾಡುತ್ತಿದ್ದಾರೆ. ಆದರೆ ಆನೆಗಳು ಕಾರ್ಯಚರಣೆಗೂ ಸಿಗದೆ ತಪ್ಪಿಸಿಕೊಳ್ಳುತ್ತಿವೆ.

ಡ್ರೋನ್ ಬಳಸಿ ಮೂಡಿಗೆರೆ ಬೈರಾ ಹಾಗೂ ಮತ್ತೊಂದು ಒಂಟಿ ಸಲಗಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ. ನಾಲ್ಕನೇ ದಿನವೂ ಕಾರ್ಯಚರಣೆ ಮುಂದುವರಿದಿದೆ.
ಚಿಕ್ಕಮಗಳೂರು ಹಾಗೂ ಮೂಡಿಗೆರೆ ತಾಲೂಕಿನ‌ ಕುಂದೂರು, ತಳವಾರ ಸುತ್ತಮುತ್ತ ಕಾರ್ಯಾಚರಣೆ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು