3:23 AM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ನೆಲ್ಯಾಡಿ: ರಾಷ್ಟ್ರೀಯ ಐಕ್ಯತಾ ಸಪ್ತಾಹ; ಸುಸ್ಥಿರ ಅಭಿವೃದ್ಧಿ ಹಾಗೂ ಪರಿಸರ ಸಂರಕ್ಷಣೆ ಉಪನ್ಯಾಸ

02/12/2022, 18:44

ನೆಲ್ಯಾಡಿ(reporterkarnataka.com):
ವಿಶ್ವವಿದ್ಯಾನಿಲಯ ಘಟಕ ಕಾಲೇಜು, ನೆಲ್ಯಾಡಿಯಲ್ಲಿ ಇತ್ತೀಚೆಗೆ ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಡಿಯಲ್ಲಿ ‘ಸುಸ್ಥಿರ ಅಭಿವೃದ್ಧಿ ಹಾಗೂ ಪರಿಸರ ಸಂರಕ್ಷಣೆ’ ಉಪನ್ಯಾಸ ಕಾರ್ಯಕ್ರಮವನ್ನು ಕಾಲೇಜಿನ ಅರ್ಥಶಾಸ್ತ್ರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ರಾಯಚೂರಿನ ಮಸ್ಕಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ. ರಜಿಯಾ ಎಂ. ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸುಸ್ಥಿರ ಅಭಿವೃದ್ಧಿಯು ಚರ್ಚಿಸಿದಷ್ಟು ಮುಗಿಯದ ಒಂದು ಅಂತರ್ಗತ ವಿಷಯವಾಗಿದೆ. ಪರಿಸರವನ್ನು ಸಂರಕ್ಷಿಸಿ ನಾವು ಆರ್ಥಿಕ ಪ್ರಗತಿಯನ್ನು ಸಾಧಿಸಬೇಕಾಗಿದೆ. ಮಾನವನು ತನ್ನ ಸ್ವಹಿತದ ಸಾಧನೆಗೆ ಪ್ರಕೃತಿಯನ್ನು ಶೋಷಿಸುವುದು ಸರಿಯಲ್ಲ ಎಂದರು.

ಅಧ್ಯಕ್ಷತೆಯನ್ನು ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ನೂರಂದಪ್ಪ ಅವರು ವಹಿಸಿದ್ದರು. ಆರ್ಥಿಕ ಅಭಿವೃದ್ಧಿಯು ಪ್ರಕೃತಿಗೆ ಹಾನಿಕಾರಕವಾಗಬಾರದು, ಸಂಪನ್ಮೂಲಗಳನ್ನು ಮಿತವಾಗಿ ಬಳಸಿಕೊಂಡು ಮುಂದಿನ ಪೀಳಿಗೆಗೂ ಕಾಪಾಡಿಕೊಳ್ಳಬೇಕು ಎಂದು ಅವರು ನುಡಿದರು.
ಕಾರ್ಯಕ್ರಮದ ಸಂಚಾಲಕರು ಹಾಗೂ ಅರ್ಥಶಾಸ್ತ್ರ ಸಂಘದ ಸಂಯೋಜಕರಾದ ಶ್ರುತಿ ಸ್ವಾಗತಿಸಿದರು. ಅರ್ಥಶಾಸ್ತ್ರ ಸಂಘದ ವಿದ್ಯಾರ್ಥಿ ಕಾರ್ಯದರ್ಶಿ ಧನ್ಯಶ್ರೀ ಅತಿಥಿಗಳ ವ್ಯಕ್ತಿ ಪರಿಚಯ ಮಾಡಿಕೊಟ್ಟರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ಸ್ಫೂರ್ತಿ ಕೆ.ಟಿ. ವಂದಿಸಿದರು. ವಿದ್ಯಾರ್ಥಿನಿ ನುಸ್ರಿಲ್ ಕಾರ್ಯಕ್ರಮ ನಿರೂಪಿಸಿದರು.

ವೇದಿಕೆಯಲ್ಲಿ ಅರ್ಥಶಾಸ್ತ್ರ ಸಂಘದ ಸಹ ಕಾರ್ಯದರ್ಶಿ ಸಂದೀಪ್ ಕುಮಾರ್ ಬಿ.ಎಂ ಉಪಸ್ಥಿತರಿದ್ದರು. ಕಾಲೇಜಿನ ಎಲ್ಲಾ ವಿಭಾಗದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು