2:04 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ನಿರ್ಜನ ಪ್ರದೇಶದಲ್ಲಿ 78ರ ಹರೆಯದ ವೃದ್ಧೆಯ ಮೇಲೆ ಅತ್ಯಾಚಾರ: ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

03/12/2022, 14:12

ನಿರ್ಜನ ಪ್ರದೇಶದಲ್ಲಿ 78ರ ಹರೆಯದ ವೃದ್ಧೆಯ ಮೇಲೆ ಅತ್ಯಾಚಾರ: ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

ಉಡುಪಿ(reporterkarnataka.com): ಸುಮಾರು 5 ವರ್ಷಗಳ ಹಿಂದೆ ಗುಜರಿ ಹೆಕ್ಕಿಕೊಂಡು ಬದುಕು ಸಾಗಿಸುತ್ತಿದ್ದ 78 ವರ್ಷ ಪ್ರಾಯದ ವೃದ್ದೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶ ನೀಡಿದೆ.
ಶಿವಮೊಗ್ಗ ಮೂಲದ ಇರ್ಫಾನ್ ಶಿಕ್ಷೆಗೆ ಗುರಿಯಾದ ಆರೋಪಿ. ಈತ ಉಡುಪಿಯ ಕೋಳಿ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದನು. 2017ರ ಜೂನ್ 5ರಂದು ಉಡುಪಿ ಪರಿಸರದಲ್ಲಿ ಗುಜರಿ ಮಾರಾಟ ಮಾಡಿಕೊಂಡು ಬದುಕುತ್ತಿದ್ದ ವೃದ್ಧೆಯನ್ನು ತೆಂಕಪೇಟೆ ಪರಿಸರದ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ನಡೆಸಿ ಆಕೆಯ ಬಳಿಯಿದ್ದ 30 ಸಾವಿರ ರೂ. ನಗದು ಹಾಗೂ ಆಭರಣ ದೋಚಿಕೊಂಡು ಹೋಗಿದ್ದನು ಎನ್ನಲಾಗಿದೆ. ಈ ಬಗ್ಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
2022ರ ಏ.7ರಂದು ನ್ಯಾಯಾಲಯ ಈ ಪ್ರಕರಣ ವಿಚಾರಣೆ ಆರಂಭಿಸಿದ್ದು, 18 ಸಾಕ್ಷಿಗಳ ಪೈಕಿ 15 ಸಾಕ್ಷಿಗಳ ಹೇಳಿಕೆ ಪಡೆದು ಆರೋಪಿ ಮೇಲಿನ ಆರೋಪ ಸಾಬೀತಾಗಿದೆ ಎಂದು ನ್ಯಾಯಾಧೀಶ ದಿನೇಶ್ ಹೆಗ್ಡೆ ಅಭಿಪ್ರಾಯಪಟ್ಟರು. ಅದರಂತೆ ಆರೋಪಿಗೆ ಅತ್ಯಾಚಾರ ಪ್ರಕರಣದಡಿ 10 ವರ್ಷ ಕಠಿಣ ಜೈಲುಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದರು. ಪ್ರಾಸಿಕ್ಯೂಷನ್ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಷನ್ ಜಯರಾಮ ಶೆಟ್ಟಿ ವಾದಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು