3:10 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್…

ಇತ್ತೀಚಿನ ಸುದ್ದಿ

ಕಾರ್ಕಳ ಕೋಟೆಕಣಿಯಲ್ಲಿ ಫಿರಂಗಿ ಮಾದರಿಯ ಕಲ್ಲುಗುಂಡುಗಳು ಪತ್ತೆ!: ಕಳೆದಿ ಆಳ್ವಿಕೆ ಕಾಲದ್ದು ಶಂಕೆ

03/12/2022, 23:29

ಕಾರ್ಕಳ(reporterkarnataka.com): ಐತಿಹಾಸಿಕ ಹಿನ್ನಲೆಯುಳ್ಳ ಕಾರ್ಕಳ ಸರಕಾರಿ ಆಸ್ಪತ್ರೆ ಬಳಿಯ ಕೋಟೆಕಣಿ ಪರಿಸರದಲ್ಲಿ ಶನಿವಾರ ಕಟ್ಟಡ ನಿರ್ಮಾಣ ಕಾಮಗಾರಿಗೆಂದು ಹಿಟಾಚಿಯಲ್ಲಿ ಮಣ್ಣು ಅಗೆಯುತ್ತಿದ್ದಾಗ ಫಿರಂಗಿ ಮಾದರಿಯ ಕಲ್ಲುಗುಂಡುಗಳು ಪತ್ತೆಯಾಗಿವೆ. ಉದ್ಯಮಿಯೊಬ್ಬರು ಖರೀದಿಸಿದ್ದ ಈ ಜಾಗದಲ್ಲಿ ಕಟ್ಟಡ ನಿರ್ಮಾಣಕ್ಕಾಗಿ ಭೂಮಿಯನ್ನು ಅಗೆಯುತ್ತಿದ್ದಾಗ ಸುಮಾರು 15 ಅಡಿ ಆಳದಲ್ಲಿ ವೃತ್ತಾಕಾರದ ನೂರಾರು ಕಲ್ಲು ಗುಂಡುಗಳು ಪತ್ತೆಯಾಗಿವೆ.
ಸ್ಥಳಕ್ಕೆ ಕಾರ್ಕಳ ಪ್ರಭಾರ ತಹಶೀಲ್ದಾರ್ ಪುರಂದರ ಎಸ್ ಹಾಗೂ ಪುರಾತತ್ವ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಉತ್ಖನನದಿಂದ ಸಿಕ್ಕಿರುವ ಕಲ್ಲು ಗುಂಡುಗಳನ್ನು ಪುರಾತತ್ವ ಇಲಾಖೆಗೆ ಒಪ್ಪಿಸಲಾಗಿದೆ.

ಇತಿಹಾಸಕಾರರ ಪ್ರಕಾರ ಕಳೆದಿಯ ಶಿವಪ್ಪ ನಾಯಕನ ಆಳ್ವಿಕೆಯಲ್ಲಿ ಇಲ್ಲಿ ಕೋಟೆ ನಿರ್ಮಿಸಲಾಗಿತ್ತು. ಬಳಿಕ ಟಿಪ್ಪು ಶಿವಪ್ಪ ನಾಯಕನ ಕೋಟೆಗೆ ದಾಳಿ ನಡೆಸಿದ್ದ ಎನ್ನುವುದು ಇತಿಹಾಸಕಾರರ ಅಭಿಪ್ರಾಯವಾಗಿದೆ. ವೈರಿಗಳ ವಿರುದ್ಧ ಫಿರಂಗಿ ದಾಳಿಗೆ ಈ ಕಲ್ಲು ಗುಂಡುಗಳನ್ನು ಬಳಸಿಕೊಂಡಿರುವ ಸಾಧ್ಯತೆಯಿದೆ ಎಂಬುವುದಾಗಿ ಇತಿಹಾಸಕಾರರು ಉಲ್ಲೇಖಿಸಿದ್ದಾರೆ. ವೈರಿಗಳಿಂದ ರಕ್ಷಿಸಿಕೊಳ್ಳಲು ಕೋಟೆಯ ಸುತ್ತಲೂ ಕಂದಕ ನಿರ್ಮಿಸಿದ್ದರಿಂದ ಈ ಸ್ಥಳಕ್ಕೆ ಕೋಟೆಕಣಿ ಎಂದೇ ಹೆಸರು ಬಂದಿತ್ತು ಅಲ್ಲದೇ ಇದೇ ಹೆಸರು ಇಂದಿಗೂ ಚಾಲ್ತಿಯಲ್ಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು