1:57 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಕದ್ರಿ ಸಂಗೀತ ಸೌರಭ 2022 ಜೀವಮಾನ ಶ್ರೇಷ್ಠ ರಾಷ್ಟ್ರ ಪ್ರಶಸ್ತಿಗೆ ಸಂಗೀತ ವಿದ್ವಾನ್ ಎಂ. ನಾರಾಯಣ ಆಯ್ಜೆ

04/12/2022, 14:49

ಮಂಗಳೂರು(reporterkarnataka.com): ಡಾ. ಕದ್ರಿ ಗೋಪಾಲನಾಥ್ ಅಕಾಡೆಮಿ ಫಾರ್ ಆರ್ಟ್ಸ್ ಆಶ್ರಯದಲ್ಲಿ ಡಿಸೆಂಬರ್ 6ರಂದು ಪದ್ಮಶ್ರೀ ಡಾ. ಕದ್ರಿ ಗೋಪಾಲನಾಥ್ ಅವರ 73ನೇ ಜನುಮ ಜಯಂತಿಯ ಪ್ರಯುಕ್ತ
ಕದ್ರಿ ಸಂಗೀತ ಸೌರಭ 2022 ಹಮ್ಮಿಕೊಳ್ಳಲಾಗಿದ್ದು, ಈ ಬಾರಿಯ ಕದ್ರಿ ಸಂಗೀತ ಸೌರಭ ಜೀವಮಾನ ಶ್ರೇಷ್ಠ ರಾಷ್ಟ್ರ ಪ್ರಶಸ್ತಿಗೆ ಸಂಗೀತ ವಿದ್ವಾನ್ ಎಂ. ನಾರಾಯಣ ಅವರನ್ನು ಆಯ್ಕೆ ಮಾಡಲಾಗಿದೆ.

ಮೂಡಬಿದ್ರೆಯಲ್ಲಿ ಜನಿಸಿದ ಎಂ. ನಾರಾಯಣ ಅವರು ಒಬ್ಬ ಅಪ್ರತಿಮ ಕಲಾವಿದರು. ಪ್ರಸ್ತುತ ಸುರತ್ಕಲ್ ನ ಶ್ರೀಗಣೇಶ್ ಸಂಗೀತ ಮತ್ತು ನೃತ್ಯ ಕಲಾ ಶಾಲೆಯಲ್ಲಿ ಕಳೆದ 25 ವರ್ಷಗಳಿಂದ ಸಂಗೀತ ಪ್ರಾದ್ಯಾಪಕರಾಗಿ ಸಾವಿರಾರು ವಿದ್ಯಾರ್ಥಿಗಳಿಗೆ ಸಂಗೀತ ಶಿಕ್ಷಣವನ್ನು ನೀಡುತ್ತಿದ್ದಾರೆ.

ಓರ್ವ ಖ್ಯಾತ ಸಂಗೀತ ರಚನಕಾರರಾಗಿರುವ ಇವರು ನಾರಾಯಣದಾಸ ನಾಮಾಂಕಿತದಲ್ಲಿ ಈವರೆಗೆ ವಿವಿಧ ರಾಗ ತಾಳಗಳಲ್ಲಿ 25 ಜತಿ ಸ್ವರಗಳು, 75 ತಾಣ ವರ್ಣಗಳು, 4 ಸ್ವರ ಜತಿಗಳು, 200 ಕೃತಿಗಳು ಹಾಗು 15 ತಿಲ್ಲಾನಗಳನ್ನು ಕನ್ನಡ ತೆಲುಗು ಹಾಗೂ ಸಂಸ್ಕೃತದಲ್ಲಿ ರಚಿಸಿದ್ದಾರೆ.
ಅಂತೆಯೇ 72 ಮೇಳಕರ್ತ ರಾಗಗಳಲ್ಲೂ ಕೂಡ ಕೃತಿ ರಚನೆ ಮಾಡಿರುವ ಕರ್ನಾಟಕದ ಕೆಲವೇ ಕೆಲವು ರಚನಕಾರರಲ್ಲಿ ಇವರು ಒಬ್ಬರು.

ಅವರು ಶ್ರೀಮಹಾಗಣಪತಿಯ ಮೇಲೆ 47 ಕೃತಿಗಳ ರಚನೆ ಮಾಡಿದ್ದಾರೆ. ಅವರ ಅಪರಿಮಿತ ಸಾಧನೆಯನ್ನು ಗುರುತಿಸಿ ಡಾ. ಕದ್ರಿ ಗೋಪಾಲನಾಥ್ ಅಕಾಡೆಮಿ ಫಾರ್ ಆರ್ಟ್ಸ್ ವತಿಯಿಂದ ಕದ್ರಿ ಸಂಗೀತ ಸೌರಭ 2022 ರ ಜೀವಮಾನ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಲಾಗುವುದು. ಪ್ರಶಸ್ತಿಯು 50,000 ರೂ‌ ನಗದು ಹಾಗೂ ಬೆಳ್ಳಿಯ ಫಲಕ ಹೊಂದಿದೆ.
ಡಿಸೆಂಬರ್ 6 2022 ರಂದು ಸಂಜೆ 530 ಕ್ಕೆ ಮಂಗಳೂರು ಉರ್ವ ಸ್ಟೋರ್ ಹತ್ತಿರ ಇರುವ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು