10:54 AM Monday6 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಪಶ್ಚಿಮವಾಹಿನಿ ಯೋಜನೆ: ಕೃಷಿ ಹಾಗೂ ಕುಡಿಯುವ ನೀರಿಗೆ 35ಕ್ಕೂ ಹೆಚ್ಚು ಕಿಂಡಿ ಅಣೆಕಟ್ಟು ನಿರ್ಮಾಣ

03/07/2021, 22:10

ಮಂಗಳೂರು(reporterkarnataka news): ಪಶ್ಚಿಮವಾಹಿನಿ ಯೋಜನೆಯಡಿ 35ಕ್ಕೂ ಹೆಚ್ಚು ಕಿಂಡಿ ಅಣೆಕಟ್ಟು ನಿರ್ಮಾಣದ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಆ ಯೋಜನೆಯಿಂದ ಕುಡಿಯಲು ಹಾಗೂ ಕೃಷಿಗೆ ನೀರು ಪೂರೈಸಲಾಗುವುದು ಎಂದು ಸಣ್ಣ ನೀರಾವರಿ ಸಚಿವ ಜೆ. ಸಿ. ಮಧುಸ್ವಾಮಿ  ಹೇಳಿದರು.

ಅವರು ಶನಿವಾರ ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ  ಸಣ್ಣ ನೀರಾವರಿ ಇಲಾಖೆಗೆ ಸಂಬಂಧಿಸಿದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಣ್ಣ ನೀರಾವರಿ ಇಲಾಖೆ ಕೈಗೊಳ್ಳಲಾದ ವಿವಿಧ ಯೋಜನೆಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ನುಡಿದರು.

ಇಲಾಖೆಯಡಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲು ಕರೆಯಲಾದ ಟೆಂಡರುಗಳನ್ನು ಬೇಗ ಅನುಮತಿ ನೀಡಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು, ಯಾವುದೇ ಕಾರಣಕ್ಕೂ ವಿಳಂಬ ಮಾಡದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದರು.

ಸಣ್ಣ ನೀರಾವರಿ ಇಲಾಖೆ ವತಿಯಿಂದ ಕೈಗೊಳ್ಳಲಾಗುವ ಕಾಮಗಾರಿಗಳ ಮಾಸ್ಟರ್ ಪ್ಲಾನ್ ಅನ್ನು ಸಂಬಂಧಿಸಿದ ಶಾಸಕರ ಗಮನಕ್ಕೆ ತರಲಾಗುವುದು. ಶಾಸಕರು ಸೂಚಿಸುವ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕರಾದ ಉಮಾನಾಥ್ ಕೋಟ್ಯಾನ್, ವೇದವ್ಯಾಸ್ ಕಾಮತ್, ರಾಜೇಶ್ ನಾಯ್ಕ್, ಯು.ಟಿ. ಖಾದರ್, ಸಂಜೀವ ಮಠಂದೂರು, ಭರತ್ ಶೆಟ್ಟಿ, ಇಲಾಖೆಯ ಕಾರ್ಯದರ್ಶಿಗಳಾದ ಮೃತ್ಯುಂಜಯ ಸ್ವಾಮಿ, ಇಲಾಖೆಯ ಮೈಸೂರು ವೃತ್ತದ ಎಸ್ ಸಿ ರಾಜಶೇಖರ ಯಡಳ್ಳಿ, ಜಿಲ್ಲೆಯ ಸಣ್ಣ ನೀರಾವರಿ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್ ಗೋಕುಲದಾಸ್,  ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್  ವಿಷ್ಣು ಕಾಮತ್, ಸಿಬ್ಬಂದಿಗಳಾದ ಶಿವ ಪ್ರಸನ್ನ, ರಾಕೇಶ್, ಆನಂದ್, ಲವೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು