2:56 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್…

ಇತ್ತೀಚಿನ ಸುದ್ದಿ

ಮಂಗಳೂರು: ಕೆಪಿಟಿ ಸಮಸ್ಯೆ ಕುರಿತು ಚರ್ಚಿಸಲು ಹೋದ ಎಬಿವಿಪಿ ಮುಖಂಡರಿಗೆ ನಿಂದನೆ: ಪ್ರತಿಭಟನೆ

05/12/2022, 23:48

ಮಂಗಳೂರು(reporterkarnataka.com): ಕಾಲೇಜು ಸಮಸ್ಯೆಯ ಬಗ್ಗೆ ಮಾತನಾಡಲು ಹೋದಂತಹ ವಿದ್ಯಾರ್ಥಿ ಪರಿಷತ್‌ನ ನಾಯಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಾಂಶುಪಾಲರ ಕೊಠಡಿಯಿಂದ ಹೊರದಬ್ಬಿದ ಘಟನೆ ಕೆಪಿಟಿಯಲ್ಲಿ ನಡೆದಿದೆ.

ಪ್ರಾಂಶುಪಾಲರ ನಡೆಯಿಂದ ಕೆರಳಿದ ವಿದ್ಯಾರ್ಥಿಗಳು ಕಾಲೇಜು ಮುಂಬಾಗ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. ಕೆಪಿಟಿ ಪ್ರಾಂಶುಪಾಲರ ನಡೆಯಿಂದ ವಿದ್ಯಾರ್ಥಿಗಳು ಆಕ್ರೋಶಗೊಂಡಿದ್ದಾರೆ. ಮದ್ಯಾಹ್ನದಿಂದ ವಿದ್ಯಾರ್ಥಿಗಳು ಕಾಲೇಜಿನ ಹೊರಗಡೆ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ವಿದ್ಯಾರ್ಥಿಗಳ ಸಮಸ್ಯೆಯ ಕುರಿತಾಗಿ ಕೆಪಿಟಿ ಕಾಲೇಜಿನ ಪ್ರಾಂಶುಪಾಲರ ಬಳಿ ಚರ್ಚಿಸಲು ವಿದ್ಯಾರ್ಥಿ ಪರಿಷತ್ ನ ಪ್ರಮುಖ ಕಾರ್ಯಕರ್ತರು ತೆರಳಿದಾಗ ವಿದ್ಯಾರ್ಥಿಗಳನ್ನು ನಿಂದಿಸಿ, ಪರಿಷತ್ ನ ಕಾರ್ಯಕರ್ತರಿಗೆ ಕಾಲೇಜಿನ ವಿದ್ಯಾರ್ಥಿಗಳಿಂದ ಹೊಡೆಸುವುದಾಗಿ ಹೇಳಿದಾಗ ಕೆರಳಿದ ವಿದ್ಯಾರ್ಥಿ ಪರಿಷತ್ ನ ಕಾರ್ಯಕರ್ತರು ಕಾಲೇಜಿನ ಮುಂಬಾಗದಲ್ಲಿ ಪ್ರತಿಭಟನೆಯನ್ನು ಪ್ರಾರಂಭಿಸಿದರು.

ಮಧ್ಯಾಹ್ನದಿಂದ ನಡೆಯುತ್ತಿರುವ ಪ್ರತಿಭಟನೆಗೆ ಪ್ರಾಂಶುಪಾಲರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಎಬಿವಿಪಿ ನಾಯಕರು ಹೇಳಿದ್ದು ಪ್ರತಿಭಟನಾ ಸ್ಥಳಕ್ಕೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಅವರು ಬೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

ವಿದ್ಯಾರ್ಥಿಗಳೊಂದಿಗೆ ಅನುಚಿತ ವರ್ತನೆಗೆ ಕ್ಷಮೆಯಾಚಿಸ ಬೇಕಾಗಿ ಆಗ್ರಹಿಸಿದ್ದಾರೆ. ಪ್ರತಿಭಟನೆಯ ನೇತೃತ್ವವನ್ನು
ವಿಭಾಗ ಸಂಚಾಲಕರಾದ ಹರ್ಷಿತ್ ಕೊಯ್ಲಿ, ಜಿಲ್ಲಾ ಸಂಚಾಲಕ್ ಶ್ರೇಯಸ್ ವಿಭಾಗ ಎಸ್ ಎಫ್ ಡಿ ಪ್ರಮುಖ್ ನಿಶಾನ್ ಆಳ್ವ ಪ್ರಮುಖರಾದ ಸ್ಕಂದ ಕಿರಣ್, ಶ್ರೀಪಾದ್ ವಹಿಸಿದ್ದಾರೆ.

ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತನ್ನು ಏರ್ಪಾಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು