12:10 PM Saturday10 - May 2025
ಬ್ರೇಕಿಂಗ್ ನ್ಯೂಸ್
Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಕವಿ, ಶಿಕ್ಷಕ, ಸಂಪಾದಕ ನಾರಾಯಣ ರೈ ಕಕ್ಕುವಳ್ಳಿಗೆ ಸನ್ಮಾನ: ‘ಮುಕ್ತಕ ಪುಷ್ಪ’ ಕೃತಿ ಬಿಡುಗಡೆ

06/12/2022, 10:59

ಪುತ್ತೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಜೇನು ವ್ಯವಸಾಯಗಾರರ ಸಹಕಾರಿ ಸಂಘ ಪುತ್ತೂರು ಇಲ್ಲಿನ ಮಾಧುರಿ ಸೌಧ ಸಭಾಂಗಣದಲ್ಲಿ ಭಾನುವಾರ ಜರಗಿದ ಅಂತಾರಾಜ್ಯ ಮಟ್ಟದ ಮಧು ಕವಿಗೋಷ್ಠಿಯ ಸಮಾರಂಭದಲ್ಲಿ ಹಿರಿಯ ಕವಿ, ನಿವೃತ್ತ ಶಿಕ್ಷಕ , ಮಧುಪ್ರಪಂಚ ಪತ್ರಿಕೆಯ ಪ್ರಧಾನ ಸಂಪಾದಕ ನಾರಾಯಣ ರೈ ಕುಕ್ಕುವಳ್ಳಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಜಯಾನಂದ ಪೆರಾಜೆ ಅಭಿನಂದನಾ ಭಾಷಣ ಮಾಡಿದರು. 40 ವರ್ಷ ಶಿಕ್ಷಕರಾಗಿ, ಪತ್ರಿಕೆಯಲ್ಲಿ ಅಂಕಣಕಾರರಾಗಿ ಗುರುತಿಸಲ್ಪಟ್ಟಿದ್ದಾರೆ. ಉತ್ತಮ ವ್ಯಂಗ್ಯ ಚಿತ್ರಕಾರರಾಗಿ , ಕಲಾವಿದನಾಗಿ, ಕವಿಯಾಗಿ ಸಾಧನೆ ಮಾಡಿದ ಕುಕ್ಕುವಳ್ಳಿಯವರು ಮಧು ಪ್ರಪಂಚ ಪತ್ರಿಕೆಯ ಪ್ರಧಾನ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು . ಸಭಾಧ್ಯಕ್ಷ ಹಿರಿಯ ಪತ್ರಕರ್ತ ವಿ.ಬಿ. ಅರ್ತಿಕಜೆ ರವರು ಕುಕ್ಕುವಳ್ಳಿಯವರ ಸಾಧನೆಯ ಬಗ್ಗೆ ಅಭಿನಂದಿಸಿ ಶುಭ ಹಾರೈಸಿ ಕಕ್ಕುವಳ್ಳಿಯವರ ಸರಳ ವ್ಯಕ್ತಿತ್ವವನ್ನು ಕೊಂಡಾಡಿದರು. ಜಿಲ್ಲಾ ಜೇನು ವ್ಯವಸಾಯಗಾರರ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್ ಅವರ ಕಾರ್ಯವೈಖರಿಯ ಬಗ್ಗೆ ತಿಳಿಸಿ ಜೇನು ಸಂಘದ ಸ್ಮರಣಿಕೆ ನೀಡಿದರು.

ಕನ್ನಡ ಸಾಹಿತ್ಯ ಪರಿಷತಿನ ಅಧ್ಯಕ್ಷ ಉಮೇಶ್ ನಾಯಕ್ ಕನ್ನಡ ಶಾಲು ಹಾಕಿ ಗೌರವಿಸಿ ‘ಮುಕ್ತಕ ಪುಷ್ಪ’ ಕೃತಿ ಬಿಡುಗಡೆ ಮಾಡಿದರು. ಕೇಂದ್ರ ಕನ್ನಡ ಸಾಹಿತ್ಯ ಜಿಲ್ಲಾಧ್ಯಕ್ಷ ಡಾ.ಸುರೇಶ್ ನೆಗಳಗುಳಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಸಮುದ್ರವಳ್ಳಿ ವಾಸು, ಪಿಂಗಾರ ಸಾಹಿತ್ಯ ಬಳಗದ ಸಂಚಾಲಕ ರೈಮಂಡ್ ಡಿಕುನ್ಹ ಕವಿಗೋಷ್ಠಿಗೆ ಚಾಲನೆ ನೀಡಿ 50 ಕವಿಗಳು ಸ್ವರಚಿತ ಕವನ ವಾಚಿಸಿದರು, ಶಿಕ್ಷಣ ಸಂಯೋಜಕ ಹರಿಪ್ರಸಾದ್ ಶುಭ ಹಾರೈಸಿದರು.

ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಪುತ್ತೂರು ತಾಲೂಕು ಅಧ್ಯಕ್ಷೆ ಶಾಂತ ಪುತ್ತೂರು ಸ್ವಾಗತಿಸಿ ಪ್ರಸ್ತಾವನೆ ಗೈದರು. ಅಪೂರ್ವ ಕಾರಂತ್ ನಿರೂಪಿಸಿ, ಜಿ.ಪಿ. ಶಾಂ ಭಟ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು