7:56 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕೋವಿಡ್ ಪಾಸಿಟಿವ್ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರ ಆಗಮಿಸಲು ಆಂಬುಲೆನ್ಸ್ ವ್ಯವಸ್ಥೆ: ಕೇರ್ ಸೆಂಟರ್ ನಲ್ಲಿ ಎಕ್ಸಾಂ

04/07/2021, 08:35

ಮಂಗಳೂರು(reporterkarnataka news): ಕೋವಿಡ್ ಪಾಸಿಟಿವ್ ಬಂದ ವಿದ್ಯಾರ್ಥಿಗಳನ್ನು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಅಂಬುಲೆನ್ಸ್ ಮೂಲಕ ಕರೆದು ತರುವ ವ್ಯವಸ್ಥೆ ಮಾಡಲಾಗಿದ್ದು, ಕೋವಿಡ್ ಕೇರ್ ಸೆಂಟರ್ ನಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿದೆ.

ಕೋವಿಡ್ ಕೇರ್ ಸೆಂಟರ್ ನಲ್ಲಿ ಮೇಜು, ಕುರ್ಚಿ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುವುದು. ಪಿಪಿಇ ಕಿಟ್ ಹಾಕಿಕೊಂಡು ಅವರಿಗೆ ಪ್ರಶ್ನೆ ಪತ್ರಿಕೆ ನೀಡುವ ವ್ಯವಸ್ಥೆ ಮಾಡಲಾಗಿದೆ. ಈ ಬಾರಿ ಬಹು ಆಯ್ಕೆ ಮಾದರಿಯ ಪ್ರಶ್ನೆ ಪತ್ರಿಕೆಗಳನ್ನು ರೂಪಿಸಲಾಗಿದ್ದು, ಒಎಮ್ ‌ಆರ್ ಶೀಟ್ ಗಳ ಬಗ್ಗೆ ವಿದ್ಯಾರ್ಥಿಗಳಿಗೆ ಯಾವುದೇ ಗೊಂದಲ ಹಾಗೂ ಹೆದರಿಕೆ ಬಾರದಂತೆ ಅವರಲ್ಲಿ ಜಾಗೃತಿ ಮೂಡಿಸಲು ಸೂಚಿಸಲಾಗಿದೆ.

ಪರೀಕ್ಷೆಗಳ ನಡುವೆ ಎರಡು ದಿನಗಳ ಅಂತರವಿದ್ದು ಈ ಸಂದರ್ಭದಲ್ಲಿ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್ ಮಟ್ಟದಲ್ಲಿ ರಚಿಸಲಾಗಿರುವ ಪರೀಕ್ಷಾ ಕೊಠಡಿಗಳನ್ನು ಸಂಪೂರ್ಣವಾಗಿ ಸ್ಯಾನಿಟೈಜ್ ಮಾಡಲಾಗುವುದು. ಪ್ರಮುಖವಾಗಿ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗದಂತೆ ಕಟ್ಟುನಿಟ್ಟಿನ ಎಚ್ಚರವಹಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಬಾರಿ ಪರೀಕ್ಷಾ ಕೇಂದ್ರಕ್ಕೆ ಎರಡು ಗಂಟೆಗಳ ಮುಂಚಿತವಾಗಿ ಆಗಮಿಸಲು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು