ಇತ್ತೀಚಿನ ಸುದ್ದಿ
ಕುಂಜತ್ತಬೈಲ್ ದಕ್ಷಿಣ ವಾರ್ಡ್: ವಿವಿಧ ರಸ್ತೆ ಅಭಿವೃದ್ಧಿ, ಚರಂಡಿ ರಚನೆಗೆ ಶಾಸಕ ಡಾ. ವೈ ಭರತ್ ಶೆಟ್ಟಿ ಗುದ್ದಲಿ ಪೂಜೆ
07/12/2022, 19:54

ಸುರತ್ಕಲ್(reporterkarnataka.com): ಸುಮಾರು1.21 ಕೋಟಿ ರೂ. ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕುಂಜತ್ತಬೈಲ್ ದಕ್ಷಿಣ ವಾರ್ಡ್ 15 ವ್ಯಾಪ್ತಿಯ ವಿವಿಧ ರಸ್ತೆ ಅಭಿವೃದ್ಧಿ, ಚರಂಡಿ ರಚನೆಗೆ ಶಾಸಕ ಡಾ. ವೈ ಭರತ್ ಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಈ ವಾರ್ಡಿನಲ್ಲಿ ಒಟ್ಟು 2.5 ಕೋಟಿ ರೂ. ವೆಚ್ಚದಲ್ಲಿ ಇನ್ನು ಹಲವು ಅಭಿವೃದ್ಧಿ ಕಾಮಗಾರಿಗಳು ನಡೆಯಲಿವೆ. 1 ಕೋಟಿ ರೂ ಅನುದಾನದಲ್ಲಿ ಒಳಚರಂಡಿ ಕಾಮಗಾರಿಗಳು ಕೂಡ ನಡೆಯಲಿವೆ ಎಂದು ತಿಳಿಸಿದರು.
ಪಾಲಿಕೆಯ ಸ್ಥಳೀಯ ಸದಸ್ಯೆ ಸುಮಂಗಲಾ ರಾವ್, ಜಿಲ್ಲಾ ಮಾಧ್ಯಮ ಪ್ರಮುಖ್ ರಣದೀಪ್ ಕಾಂಚನ್, ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಸಿತೇಶ್ ಕೊಂಡೆ, ಶಕ್ತಿ ಕೇಂದ್ರ ಪ್ರಮುಖ್ ಸಾಕ್ಷಾತ್ ಶೆಟ್ಟಿ, ಬೂತ್ ಅಧ್ಯಕ್ಷರಾದ ನವೀನ್, ಶ್ರವಣ್, ಶಿವಪ್ರಸಾದ್, ಪ್ರಮುಖರಾದ ಮಾಧವ, ಕಮಲಾಕ್ಷ, ಪ್ರಕಾಶ್, ಕಿರಣ್ ಶೆಟ್ಟಿ, ಅಜಿತ್ ಶೆಟ್ಟಿ, ನಿತೇಶ್,
ಪಕ್ಷದ ಮುಖಂಡರು, ಸ್ಥಳೀಯರು, ಕಾರ್ಯಕರ್ತರು ಉಪಸ್ಥಿತರಿದ್ದರು.