11:56 AM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಮುಳಬಾಗಿಲು ಅಂಜನಾದ್ರಿ ಬೆಟ್ಟದಲ್ಲಿ ಬೆಚ್ಚಿಬೀಳಿಸುವ ಘಟನೆ: ಹೆತ್ತಬ್ಬೆಯಿಂದಲೇ ಇಬ್ಬರು ಹೆಣ್ಣು ಮಕ್ಕಳಿಗೆ ಬೆಂಕಿ; ಓರ್ವ ಬಾಲಕಿ ಸಾವು

08/12/2022, 10:33

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಇಬ್ಬರು ಮಕ್ಕಳಿಗೆ ತಾಯಿಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಹೃದಯ ವಿದ್ರಾವಕ ಘಟನೆ ತಡರಾತ್ರಿ ನಡೆದಿದ್ದು , ಓರ್ವ ಪುತ್ರಿ ಸುಟ್ಟು ಕರಕಲಾಗಿದ್ದು , ಮತ್ತೊಬ್ಬ ಮಗಳ ಸ್ಥಿತಿ ಚಿಂತಾಜನಕವಾಗಿದೆ .

ಓರ್ವ ಮಗಳು ಅಕ್ಷಯ ( ೮ ) ಸ್ಥಳದಲ್ಲೇ ಮೃತಪಟ್ಟಿದ್ದು , ಮತ್ತೊಬ್ಬ ಮಗಳು ಉದಯಶ್ರೀ ( ೬ ) ಸಾವು ಬದುಕಿನ ನಡುವೆ ಹೋರಾಡುತ್ತಿದ್ದು , ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಬುಧವಾರ ಮುಂಜಾನೆ ವಾಯುವಿಹಾರಕ್ಕೆಂದು ತೆರಳಿದವರು ಅಂಜನಾದ್ರಿ ಬೆಟ್ಟದ ಬಳಿ ಜನ ಹೋದಾಗ ಚೀರಾಡುವ ಶಬ್ದ ಕೇಳಿಸಿದ್ದು , ಸಮೀಪಕ್ಕೆ ಹೋದಾಗ ಸುಟ್ಟ ಗಾಯಗಳಿಂದ ಓರ್ವ ಬಾಲಕಿ ನರಳಾಡುತ್ತ ರೋಧಿಸುತ್ತಿರುವ ಮತ್ತು ಮತ್ತೊಬ್ಬ ಬಾಲಕಿಯ ಸುಟ್ಟು ಕರಕಲಾದ ಶವ ಕಂಡು ಬಂದಿದೆ . ಈ ದೃಶ್ಯ ಕಂಡ ಬೆಚ್ಚಿಬಿದ್ದ ಸ್ಥಳೀಯರು ತಕ್ಷಣ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದು , ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ತಾಯಿಯನ್ನು ವಶಕ್ಕೆ ಪಡೆದು ನರಳಾಡುತ್ತಿದ್ದ ಬಾಲಕಿಯನ್ನು ಪಿಎಸ್‌ಐ ಮಂಜುನಾಥ್ ಬೆಟ್ಟದಿಂದ ಎತ್ತಿಕೊಂಡೇ ಓಡಿ ಬಂದು ಆಸ್ಪತ್ರೆಗೆ ದಾಖಲಿಸಿದ ದೃಶ್ಯ ಹೃದಯ ಕಲುಕುವಂತಿತ್ತು .


ಮಕ್ಕಳಿಗೆ ಬೆಂಕಿ ಹಚ್ಚಿದ ತಾಯಿಯ ಹೆಸರು ಜ್ಯೋತಿ , ಈಕೆ ಆಂಧ್ರ ಪ್ರದೇಶದ ಪಲಮನೇನು ಬಳಿಯ ಬುಸಾನಿ ಕುರುಪಲ್ಲಿ ನಿವಾಸಿಯಾಗಿದ್ದು ,ಈಕೆ ಆಂಧ್ರದ ತಿರುಮೇಶ್ ಎಂಬಾತನನ್ನು ಮದುವೆಯಾಗಿದ್ದರು . ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು , ಕೌಟುಂಬಿಕ ಕಲಹದಿಂದ ಮನನೊಂದ ಜ್ಯೋತಿ ತನ್ನಿಬ್ಬರು ಮಕ್ಕಳೊಂದಿಗೆ ಮುಳಬಾಗಿಲಿಗೆ ಮಂಗಳವಾರ ಆಗಮಿಸಿದ್ದು , ಆತ್ಮಹತ್ಯೆಗೆ ನಿರ್ಧರಿಸಿ ಪೆಟ್ರೋಲ್ ತೆಗೆದುಕೊಂಡು ಹೋಗಿದ್ದಾಳೆ . ಮೊದಲು ಮಕ್ಕಳನ್ನು ಕೊಂದು ನಂತರ ತಾನು ಸಾಯಲು ನಿರ್ಧರಿಸಿದ್ದು , ಇಬ್ಬರು ಹೆಣ್ಣು ಮಕ್ಕಳಿಗೆ ಬೆಂಕಿ ಹಚ್ಚಿದ್ದಾಳೆ ಎನ್ನಲಾಗಿದೆ . ಮಕ್ಕಳ ಚೀರಾಟ ನೋಡಿ ಕಣ್ಣೀರು ಸುರಿಸುತ್ತಾ ಪಕ್ಕದಲ್ಲೇ ಕುಳಿತಿದ್ದಾಳೆ . ಘಟನೆ ರಾತ್ರಿ ನಡೆದಿದ್ದರಿಂದ ಸಾರ್ವಜನಿಕರಿಗೆ ವಿಷಯ ಗೊತ್ತಾಗಿಲ್ಲ , ಮುಳಬಾಗಿಲು ಪೊಲೀಸರು ಪ್ರಕರಣ ದಾಖಲಿಸಿದ್ದು , ತಾಯಿ ಜ್ಯೋತಿಯನ್ನು ಬಂಧಿಸಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು