11:39 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮುಳಬಾಗಿಲು ಅಂಜನಾದ್ರಿ ಬೆಟ್ಟದಲ್ಲಿ ಬೆಚ್ಚಿಬೀಳಿಸುವ ಘಟನೆ: ಹೆತ್ತಬ್ಬೆಯಿಂದಲೇ ಇಬ್ಬರು ಹೆಣ್ಣು ಮಕ್ಕಳಿಗೆ ಬೆಂಕಿ; ಓರ್ವ ಬಾಲಕಿ ಸಾವು

08/12/2022, 10:33

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಇಬ್ಬರು ಮಕ್ಕಳಿಗೆ ತಾಯಿಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಹೃದಯ ವಿದ್ರಾವಕ ಘಟನೆ ತಡರಾತ್ರಿ ನಡೆದಿದ್ದು , ಓರ್ವ ಪುತ್ರಿ ಸುಟ್ಟು ಕರಕಲಾಗಿದ್ದು , ಮತ್ತೊಬ್ಬ ಮಗಳ ಸ್ಥಿತಿ ಚಿಂತಾಜನಕವಾಗಿದೆ .

ಓರ್ವ ಮಗಳು ಅಕ್ಷಯ ( ೮ ) ಸ್ಥಳದಲ್ಲೇ ಮೃತಪಟ್ಟಿದ್ದು , ಮತ್ತೊಬ್ಬ ಮಗಳು ಉದಯಶ್ರೀ ( ೬ ) ಸಾವು ಬದುಕಿನ ನಡುವೆ ಹೋರಾಡುತ್ತಿದ್ದು , ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಬುಧವಾರ ಮುಂಜಾನೆ ವಾಯುವಿಹಾರಕ್ಕೆಂದು ತೆರಳಿದವರು ಅಂಜನಾದ್ರಿ ಬೆಟ್ಟದ ಬಳಿ ಜನ ಹೋದಾಗ ಚೀರಾಡುವ ಶಬ್ದ ಕೇಳಿಸಿದ್ದು , ಸಮೀಪಕ್ಕೆ ಹೋದಾಗ ಸುಟ್ಟ ಗಾಯಗಳಿಂದ ಓರ್ವ ಬಾಲಕಿ ನರಳಾಡುತ್ತ ರೋಧಿಸುತ್ತಿರುವ ಮತ್ತು ಮತ್ತೊಬ್ಬ ಬಾಲಕಿಯ ಸುಟ್ಟು ಕರಕಲಾದ ಶವ ಕಂಡು ಬಂದಿದೆ . ಈ ದೃಶ್ಯ ಕಂಡ ಬೆಚ್ಚಿಬಿದ್ದ ಸ್ಥಳೀಯರು ತಕ್ಷಣ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದು , ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ತಾಯಿಯನ್ನು ವಶಕ್ಕೆ ಪಡೆದು ನರಳಾಡುತ್ತಿದ್ದ ಬಾಲಕಿಯನ್ನು ಪಿಎಸ್‌ಐ ಮಂಜುನಾಥ್ ಬೆಟ್ಟದಿಂದ ಎತ್ತಿಕೊಂಡೇ ಓಡಿ ಬಂದು ಆಸ್ಪತ್ರೆಗೆ ದಾಖಲಿಸಿದ ದೃಶ್ಯ ಹೃದಯ ಕಲುಕುವಂತಿತ್ತು .


ಮಕ್ಕಳಿಗೆ ಬೆಂಕಿ ಹಚ್ಚಿದ ತಾಯಿಯ ಹೆಸರು ಜ್ಯೋತಿ , ಈಕೆ ಆಂಧ್ರ ಪ್ರದೇಶದ ಪಲಮನೇನು ಬಳಿಯ ಬುಸಾನಿ ಕುರುಪಲ್ಲಿ ನಿವಾಸಿಯಾಗಿದ್ದು ,ಈಕೆ ಆಂಧ್ರದ ತಿರುಮೇಶ್ ಎಂಬಾತನನ್ನು ಮದುವೆಯಾಗಿದ್ದರು . ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು , ಕೌಟುಂಬಿಕ ಕಲಹದಿಂದ ಮನನೊಂದ ಜ್ಯೋತಿ ತನ್ನಿಬ್ಬರು ಮಕ್ಕಳೊಂದಿಗೆ ಮುಳಬಾಗಿಲಿಗೆ ಮಂಗಳವಾರ ಆಗಮಿಸಿದ್ದು , ಆತ್ಮಹತ್ಯೆಗೆ ನಿರ್ಧರಿಸಿ ಪೆಟ್ರೋಲ್ ತೆಗೆದುಕೊಂಡು ಹೋಗಿದ್ದಾಳೆ . ಮೊದಲು ಮಕ್ಕಳನ್ನು ಕೊಂದು ನಂತರ ತಾನು ಸಾಯಲು ನಿರ್ಧರಿಸಿದ್ದು , ಇಬ್ಬರು ಹೆಣ್ಣು ಮಕ್ಕಳಿಗೆ ಬೆಂಕಿ ಹಚ್ಚಿದ್ದಾಳೆ ಎನ್ನಲಾಗಿದೆ . ಮಕ್ಕಳ ಚೀರಾಟ ನೋಡಿ ಕಣ್ಣೀರು ಸುರಿಸುತ್ತಾ ಪಕ್ಕದಲ್ಲೇ ಕುಳಿತಿದ್ದಾಳೆ . ಘಟನೆ ರಾತ್ರಿ ನಡೆದಿದ್ದರಿಂದ ಸಾರ್ವಜನಿಕರಿಗೆ ವಿಷಯ ಗೊತ್ತಾಗಿಲ್ಲ , ಮುಳಬಾಗಿಲು ಪೊಲೀಸರು ಪ್ರಕರಣ ದಾಖಲಿಸಿದ್ದು , ತಾಯಿ ಜ್ಯೋತಿಯನ್ನು ಬಂಧಿಸಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು