12:00 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಕಾರಿನ ಬ್ರೇಕ್ ಫೈಲ್: ಪ್ರತಿಪಕ್ಷ ಉಪ ನಾಯಕ ಯು. ಟಿ. ಖಾದರ್ ಅಪಾಯದಿಂದ ಪಾರು

09/12/2022, 21:48

ಮಂಗಳೂರು(reporterkarnataka.com): ಪ್ರತಿಪಕ್ಷದ ಉಪನಾಯಕ ಹಾಗೂ ಮಂಗಳೂರು ಶಾಸಕ ಯು. ಟಿ. ಖಾದರ್ ಅವರು ಪ್ರಯಾಣಿಸುತ್ತಿದ್ದ ಕಾರ್ ಬ್ರೇಕ್ ಫೈಲ್ ಆಗಿದ್ದು, ಅದೃಷ್ಟವಶಾತ್ ಖಾದರ್ ಅವರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

ಶುಕ್ರವಾರ ಅಪರಾಹ್ನ ಈ ಘಟನೆ ಬಂಟ್ವಾಳ ಬಂಟರ ಭವನ ಕಡೆಯಿಂದ ಮಂಗಳೂರಿಗೆ ಬರುತ್ತಿದ್ದಾಗ ನಡೆದಿದೆ. ಪಡೀಲ್ ಬಳಿಯ ಕಣ್ಣೂರು ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಸಮೀಪ ಕಾರಿನ ಬ್ರೇಕ್ ಫೈಲ್ ಆಗಿದ್ದು, ಚಾಲಕ ಲಿಬ್ಜಿತ್ ತಕ್ಷಣ ಕಾರು ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಂತರ ಬದಲಿ ಕಾರಿನಲ್ಲಿ ಖಾದರ್ ಅವರು ಮಂಗಳೂರಿಗೆ ಪ್ರಯಾಣ ಬೆಳೆಸಿದರು. ಅದೃಷ್ಟವಶತ್ ಶಾಸಕರು ಹಾಗೂ ಕಾರಲ್ಲಿದ್ದವರು ಏನೂ ಅಪಾಯವಾಗದೆ ಪಾರಾಗಿದ್ದಾರೆ.

ಈ ಬಗ್ಗೆ ಕಾರಿನ ಚಾಲಕ ಲಿಬ್ಜಿತ್ ರಿಪೋಟರ್ ಕರ್ನಾಟಕಕ್ಕೆ ಪ್ರತಿಕ್ರಿಸಿ, ನಗರದ ಪಡೀಲ್ ನ ಟೊಯೋಟಾ ಶೋರೂಮ್ ನಲ್ಲಿ ಕಾರನ್ನು ಸರ್ವಿಸ್ ಆಗಿ ತಂದು ಇಂದಿಗೆ 5 ದಿನ ಮಾತ್ರ ಆಗಿದ್ದು. ಅದಲ್ಲದೆ ಶಾಸಕರಿಲ್ಲದೆ ದಿನಕ್ಕೆ 10 ಕಿ.ಮೀ. ಓಡಿರಬಹದು. ಗೇರ್ ನಿಂದ ಕಂಟ್ರೋಲ್ ಮಾಡಿ ಕಾರು ನಿಲ್ಲಿಸಿದ್ದೇನೆ. ದೇವರ ದಯೆಯಿಂದ ಅವಘಡ ಏನು ಆಗಿಲ್ಲ. ಶಾಸಕರಿಗೆ ಏನು ಆಗಿಲ್ಲ. ನಂತರ ಬೇರೆ ಕಾರಿನ ವ್ಯವಸ್ಥೆ ಮಾಡಿದ್ದೇನೆ. ಈ ಬಗ್ಗೆ ಶೋರೂಮ್ ತೆರಳಿ ಕೇಳಿದ್ರೆ. ಬ್ರೇಕ್ ಲಿಕ್ವಿಡ್ ಹೋಗಿರಬಹುದು ಎಂದು ಉಡಾಫೆ ಉತ್ತರ ನೀಡಿದ್ದಾರೆ.
ಒಬ್ಬ ಜನ ಪ್ರತಿನಿಧಿಗೆ ಸರಿಯಾದ ಸರ್ವಿಸ್ ನೀಡಲಾಗಿಲ್ಲವಾದರೆ ಜನ ಸಾಮಾನ್ಯರಿಗೆ ಸಮಾಧಾನಕರ ಉತ್ತರಸಿಗಬಹುದೇ ಎಂಬುದು ಅವರ ಅಳಲು ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು