12:57 PM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಭಾರತೀಯ ಭಾಷೆಗಳ ಬಗ್ಗೆ ಪ್ರೀತಿ, ಗೌರವ, ಅಭಿಮಾನವಿರಲಿ: ಪರಶುರಾಮ್ ಜಿ. ಮಾಳಗೆ

09/12/2022, 23:26

ಮಂಗಳೂರು(reporterkarnata.com): ಭಾರತೀಯ ಭಾಷಾ ದಿವಸದ ಅಂಗವಾಗಿ ಕೆನರಾ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಹಿಂದಿ ಮತ್ತು ಸಂಸ್ಕೃತ ಸಂಘಗಳ ಜಂಟಿ ಆಶ್ರಯದಲ್ಲಿ “ಭಾರತೀಯ ಭಾಷೆ – ಮಹತ್ವ”ದ ಕುರಿತಾಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಮುಖ್ಯ ಅತಿಥಿಯಾಗಿದ್ದ ಬೆಸೆಂಟ್ ಮಹಿಳಾ ಮಹಾವಿದ್ಯಾಲಯದ ಡಾ. ಪರಶುರಾಮ್ ಜಿ. ಮಾಳಗೆ ಅವರು ಮಾತನಾಡಿ, ವಿವಿಧ ಭಾಷೆಗಳನ್ನು ಆಡುವ, ವಿವಿಧ ಆಚಾರ, ವಿಚಾರ ಸಂಪ್ರದಾಯಗಳಿದ್ದರೂ ನಾವೆಲ್ಲರೂ ಒಂದೇ, ನಾವೆಲ್ಲರೂ ಭಾರತೀಯರು. ಭಾಷೆ ಯಾವುದೇ ಇರಲಿ, ಪ್ರತಿಯೊಂದು ಭಾಷೆಯಲ್ಲಿ ಪ್ರೀತಿ, ಗೌರವವನ್ನು ಇಟ್ಟುಕೊಂಡು ಮುನ್ನಡೆದಲ್ಲಿ ವ್ಯಕ್ತಿತ್ವವು ವಿಕಸನಗೊಳ್ಳುವುದು. ಭಾಷೆಯು ನಮ್ಮ ಮನಸ್ಸಿನ ಭಾವನೆಗಳನ್ನು ಪರಸ್ಪರ ವ್ಯಕ್ತಪಡಿಸುವ ಒಂದು ಒಳ್ಳೆಯ ಸಾಧನವಾಗಿರುವುದು ಎಂದು ನುಡಿದರು. ಕಾಲೇಜಿನ ಪ್ರಾಂಶುಪಾಲೆ ಡಾ. ಪ್ರೇಮಲತಾ ವಿ. ಅವರು ಅಧ್ಯಕ್ಷತೆ ವಹಿಸಿದ್ದು ಭಾಷೆ ಯಾವುದೇ ಇರಲಿ ಅದರ ಬಗ್ಗೆ ಪ್ರೀತಿ, ಅಭಿಮಾನ, ಗೌರವವನ್ನು ಇಟ್ಟುಕೊಳ್ಳುವ ಅಗತ್ಯತೆ ಇದೆ ಎಂದರು.

ಕಲ್ಪೇಶ್ ತೆಂಡಲ್ ಅತಿಥಿಗಳನ್ನು ಪರಿಚಯಿಸಿ, ಸ್ವಾಗತಿಸಿದರು.
ಮನಸ್ವಿ ಮತ್ತು ಸೊನಾಲಿ ಪ್ರಾರ್ಥಿಸಿದರು. ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ಕಲ್ಪನಾ ಪ್ರಭು, ಹಿಂದಿ ಸಂಘದ ಸಂಯೋಜಕಿ ಸುಜಾತಾ ಜಿ. ನಾಯಕ್ ಹಾಗೂ ಸಂಸ್ಕೃತ ವಿಭಾಗದ ಮುಖ್ಯಸ್ಥೆ ಹಾಗೂ ಸಂಸ್ಕೃತ ಸಂಘದ ಸಂಯೋಜಕಿ ಚೇತನಾ, ಸ್ವಾತಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಅನುಶ್ರೀ ವಂದಿಸಿ, ಶೃಜನ್ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು