11:55 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಭಾರತೀಯ ಭಾಷೆಗಳ ಬಗ್ಗೆ ಪ್ರೀತಿ, ಗೌರವ, ಅಭಿಮಾನವಿರಲಿ: ಪರಶುರಾಮ್ ಜಿ. ಮಾಳಗೆ

09/12/2022, 23:26

ಮಂಗಳೂರು(reporterkarnata.com): ಭಾರತೀಯ ಭಾಷಾ ದಿವಸದ ಅಂಗವಾಗಿ ಕೆನರಾ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಹಿಂದಿ ಮತ್ತು ಸಂಸ್ಕೃತ ಸಂಘಗಳ ಜಂಟಿ ಆಶ್ರಯದಲ್ಲಿ “ಭಾರತೀಯ ಭಾಷೆ – ಮಹತ್ವ”ದ ಕುರಿತಾಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಮುಖ್ಯ ಅತಿಥಿಯಾಗಿದ್ದ ಬೆಸೆಂಟ್ ಮಹಿಳಾ ಮಹಾವಿದ್ಯಾಲಯದ ಡಾ. ಪರಶುರಾಮ್ ಜಿ. ಮಾಳಗೆ ಅವರು ಮಾತನಾಡಿ, ವಿವಿಧ ಭಾಷೆಗಳನ್ನು ಆಡುವ, ವಿವಿಧ ಆಚಾರ, ವಿಚಾರ ಸಂಪ್ರದಾಯಗಳಿದ್ದರೂ ನಾವೆಲ್ಲರೂ ಒಂದೇ, ನಾವೆಲ್ಲರೂ ಭಾರತೀಯರು. ಭಾಷೆ ಯಾವುದೇ ಇರಲಿ, ಪ್ರತಿಯೊಂದು ಭಾಷೆಯಲ್ಲಿ ಪ್ರೀತಿ, ಗೌರವವನ್ನು ಇಟ್ಟುಕೊಂಡು ಮುನ್ನಡೆದಲ್ಲಿ ವ್ಯಕ್ತಿತ್ವವು ವಿಕಸನಗೊಳ್ಳುವುದು. ಭಾಷೆಯು ನಮ್ಮ ಮನಸ್ಸಿನ ಭಾವನೆಗಳನ್ನು ಪರಸ್ಪರ ವ್ಯಕ್ತಪಡಿಸುವ ಒಂದು ಒಳ್ಳೆಯ ಸಾಧನವಾಗಿರುವುದು ಎಂದು ನುಡಿದರು. ಕಾಲೇಜಿನ ಪ್ರಾಂಶುಪಾಲೆ ಡಾ. ಪ್ರೇಮಲತಾ ವಿ. ಅವರು ಅಧ್ಯಕ್ಷತೆ ವಹಿಸಿದ್ದು ಭಾಷೆ ಯಾವುದೇ ಇರಲಿ ಅದರ ಬಗ್ಗೆ ಪ್ರೀತಿ, ಅಭಿಮಾನ, ಗೌರವವನ್ನು ಇಟ್ಟುಕೊಳ್ಳುವ ಅಗತ್ಯತೆ ಇದೆ ಎಂದರು.

ಕಲ್ಪೇಶ್ ತೆಂಡಲ್ ಅತಿಥಿಗಳನ್ನು ಪರಿಚಯಿಸಿ, ಸ್ವಾಗತಿಸಿದರು.
ಮನಸ್ವಿ ಮತ್ತು ಸೊನಾಲಿ ಪ್ರಾರ್ಥಿಸಿದರು. ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ಕಲ್ಪನಾ ಪ್ರಭು, ಹಿಂದಿ ಸಂಘದ ಸಂಯೋಜಕಿ ಸುಜಾತಾ ಜಿ. ನಾಯಕ್ ಹಾಗೂ ಸಂಸ್ಕೃತ ವಿಭಾಗದ ಮುಖ್ಯಸ್ಥೆ ಹಾಗೂ ಸಂಸ್ಕೃತ ಸಂಘದ ಸಂಯೋಜಕಿ ಚೇತನಾ, ಸ್ವಾತಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಅನುಶ್ರೀ ವಂದಿಸಿ, ಶೃಜನ್ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು