9:16 PM Tuesday28 - April 2026
ಬ್ರೇಕಿಂಗ್ ನ್ಯೂಸ್
ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು

ಇತ್ತೀಚಿನ ಸುದ್ದಿ

ಭಾರತೀಯ ಭಾಷೆಗಳ ಬಗ್ಗೆ ಪ್ರೀತಿ, ಗೌರವ, ಅಭಿಮಾನವಿರಲಿ: ಪರಶುರಾಮ್ ಜಿ. ಮಾಳಗೆ

09/12/2022, 23:26

ಮಂಗಳೂರು(reporterkarnata.com): ಭಾರತೀಯ ಭಾಷಾ ದಿವಸದ ಅಂಗವಾಗಿ ಕೆನರಾ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಹಿಂದಿ ಮತ್ತು ಸಂಸ್ಕೃತ ಸಂಘಗಳ ಜಂಟಿ ಆಶ್ರಯದಲ್ಲಿ “ಭಾರತೀಯ ಭಾಷೆ – ಮಹತ್ವ”ದ ಕುರಿತಾಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಮುಖ್ಯ ಅತಿಥಿಯಾಗಿದ್ದ ಬೆಸೆಂಟ್ ಮಹಿಳಾ ಮಹಾವಿದ್ಯಾಲಯದ ಡಾ. ಪರಶುರಾಮ್ ಜಿ. ಮಾಳಗೆ ಅವರು ಮಾತನಾಡಿ, ವಿವಿಧ ಭಾಷೆಗಳನ್ನು ಆಡುವ, ವಿವಿಧ ಆಚಾರ, ವಿಚಾರ ಸಂಪ್ರದಾಯಗಳಿದ್ದರೂ ನಾವೆಲ್ಲರೂ ಒಂದೇ, ನಾವೆಲ್ಲರೂ ಭಾರತೀಯರು. ಭಾಷೆ ಯಾವುದೇ ಇರಲಿ, ಪ್ರತಿಯೊಂದು ಭಾಷೆಯಲ್ಲಿ ಪ್ರೀತಿ, ಗೌರವವನ್ನು ಇಟ್ಟುಕೊಂಡು ಮುನ್ನಡೆದಲ್ಲಿ ವ್ಯಕ್ತಿತ್ವವು ವಿಕಸನಗೊಳ್ಳುವುದು. ಭಾಷೆಯು ನಮ್ಮ ಮನಸ್ಸಿನ ಭಾವನೆಗಳನ್ನು ಪರಸ್ಪರ ವ್ಯಕ್ತಪಡಿಸುವ ಒಂದು ಒಳ್ಳೆಯ ಸಾಧನವಾಗಿರುವುದು ಎಂದು ನುಡಿದರು. ಕಾಲೇಜಿನ ಪ್ರಾಂಶುಪಾಲೆ ಡಾ. ಪ್ರೇಮಲತಾ ವಿ. ಅವರು ಅಧ್ಯಕ್ಷತೆ ವಹಿಸಿದ್ದು ಭಾಷೆ ಯಾವುದೇ ಇರಲಿ ಅದರ ಬಗ್ಗೆ ಪ್ರೀತಿ, ಅಭಿಮಾನ, ಗೌರವವನ್ನು ಇಟ್ಟುಕೊಳ್ಳುವ ಅಗತ್ಯತೆ ಇದೆ ಎಂದರು.

ಕಲ್ಪೇಶ್ ತೆಂಡಲ್ ಅತಿಥಿಗಳನ್ನು ಪರಿಚಯಿಸಿ, ಸ್ವಾಗತಿಸಿದರು.
ಮನಸ್ವಿ ಮತ್ತು ಸೊನಾಲಿ ಪ್ರಾರ್ಥಿಸಿದರು. ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ಕಲ್ಪನಾ ಪ್ರಭು, ಹಿಂದಿ ಸಂಘದ ಸಂಯೋಜಕಿ ಸುಜಾತಾ ಜಿ. ನಾಯಕ್ ಹಾಗೂ ಸಂಸ್ಕೃತ ವಿಭಾಗದ ಮುಖ್ಯಸ್ಥೆ ಹಾಗೂ ಸಂಸ್ಕೃತ ಸಂಘದ ಸಂಯೋಜಕಿ ಚೇತನಾ, ಸ್ವಾತಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಅನುಶ್ರೀ ವಂದಿಸಿ, ಶೃಜನ್ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು