4:26 PM Tuesday5 - May 2026
ಬ್ರೇಕಿಂಗ್ ನ್ಯೂಸ್
ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ Kodagu | ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಹೋಂ ಸ್ಟೇ ಮಾಲೀಕನಿಗೆ… ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7…

ಇತ್ತೀಚಿನ ಸುದ್ದಿ

ಕೋಲಾರ: ರಕ್ತ ಚಂದನ, ಶ್ರೀಗಂಧ ಬೆಳೆಯುವ ಪ್ರದೇಶದ ರಕ್ಷಣೆಗೆ ವಿಶೇಷ ಯೋಜನೆಯಡಿ ಅಭಿಯಾನ 

04/07/2021, 09:10

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

Info.reporterkarnataka@gmail.com

ರಕ್ತ ಚಂದನ ಗಿಡಗಳನ್ನು ಸಂರಕ್ಷಣಾಭಿವೃದ್ಧಿ ಮಾಡಿ. ಕೆರೆಗಳ ಪಕ್ಕದಲ್ಲಿರುವ ಜಲಚರ ಗಿಡಗಳು ಮತ್ತು ಕೆರೆಗಳಲ್ಲಿರುವ ಜಲಚರ ಪ್ರಾಣಿಗಳನ್ನು ಉಳಿಸಿಕೊಂಡು ಕೆರೆಗಳ ಸ್ವರೂಪ ಕಾಪಾಡಿಕೊಂಡು ಅರಣ್ಯ ರಕ್ಷಣೆ ಮಾಡಬೇಕು ಎಂದು ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಹೇಳಿದರು. 

ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅರಣ್ಯ ಜೀವವೈವಿಧ್ಯ ಪರಿಸರ , ಕೆರೆ ಸಂರಕ್ಷಣೆ ಕುರಿತು ಸಮಾಲೋಚನೆ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಗೆ ಸಂಬಂಧಿಸಿದ ಎಲ್ಲಾ ಕೆರೆಗಳ ಸುಂದರೀಕರಣ ಎಂಬ ಕಾರ್ಯಕ್ರಮದ ಮೂಲಕ ಕೆರೆಗಳನ್ನು ಅಭಿವೃದ್ಧಿ ಪಡಿಸಲಾಗುವುದು. ರಕ್ತ ಚಂದನ ಮತ್ತು ಶ್ರೀಗಂಧ ನೈಸರ್ಗಿಕವಾಗಿ ಬೆಳೆಯುವ ಪ್ರದೇಶದ ರಕ್ಷಣೆಗೆ ವಿಶೇಷ ಯೋಜನೆಯಡಿಯಲ್ಲಿ ಅಭಿಯಾನ ಮಾಡಲಾಗುವುದು. ಚೌಗು ಪ್ರದೇಶಗಳ ರಕ್ಷಣೆ ಮಾಡಿ ಹಾಗೂ ಅವುಗಳನ್ನು ಅಭಿವೃದ್ಧಿ ಪಡಿಸಬೇಕು ಎಂದು ತಿಳಿಸಿದರು. 
ಪಂಚಾಯತ್ ರಾಜ್ , ನಗರಸಭೆ , ಅರಣ್ಯ ಇಲಾಖೆಗಳು ಸೇರಿ ಹಲವು ಇಲಾಖೆಗಳು ಮುಂದಾಗಿ ಕೆರೆಗಳ ಅಭಿವೃದ್ಧಿಗೆ ಕೈಜೋಡಿಸಿ ಜಿಲ್ಲೆಯನ್ನು ಜೀವ ವೈವಿಧ್ಯತೆಯ ಜಿಲ್ಲೆಯನ್ನಾಗಿಸಬೇಕು . ಕೋಲಾರದ ಅಂತರಗಂಗೆ ಮತ್ತು ಶ್ರೀನಿವಾಸಪುರದ ರಾಯಲ್ಪಾಡು ಹತ್ತಿರವಿರುವ ಬೆಟ್ಟ , ಗುಡ್ಡಗಾಡು ಪ್ರದೇಶಗಳಲ್ಲಿರುವ ಜನರಿಗೆ ಹೆಚ್ಚಿನ ಆದ್ಯತೆ ಕೊಟ್ಟು ಸರ್ಕಾರದಿಂದ ಬರುವ ಎಲ್ಲಾ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಲು ಅವಕಾಶಗಳನ್ನು ಕಲ್ಪಿಸಿಕೊಡಬೇಕು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು