10:35 AM Thursday24 - July 2025
ಬ್ರೇಕಿಂಗ್ ನ್ಯೂಸ್
ಇಡೀ ಮಲೆನಾಡು ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಕೇಂದ್ರವನ್ನಾಗಿ ಶಿವಮೊಗ್ಗ ಅಭಿವೃದ್ಧಿ: ಸಚಿವ ಡಾ.… ಐಟಿಐ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಅವಕಾಶಕ್ಕಾಗಿ ಬಜಾಜ್ ಆಟೋ ಜತೆ ರಾಜ್ಯ… ಜಗದೀಪ್‌ ಧನಕರ್‌ ಆರೋಗ್ಯ ಚೆನ್ನಾಗಿದೆ, ಬಿಜೆಪಿ ಆರೋಗ್ಯವೇ ಚೆನ್ನಾಗಿಲ್ಲ: ಸಚಿವ ಡಾ. ಶರಣಪ್ರಕಾಶ್‌… Kodagu | ಶೌಚಾಲಯ ಗುಂಡಿಗೆ ಬಿದ್ದ ಕಾಡಾನೆ: ಸ್ವಪ್ರಯತ್ನದಿಂದಲೇ ಮೇಲೆದ್ದು ಬಂದ ಸಲಗ! ತುಳು ರಂಗಭೂಮಿಯ ಹಿರಿಯ ಕಲಾವಿದ ಚಿ.ರಮೇಶ್ ಕಲ್ಲಡ್ಕ ಇನ್ನಿಲ್ಲ: ‘ಶಿವದೂತಗುಳಿಗೆ’ ನಾಟಕದ ಭೀಮಾ… Davanagere | ವೀರಶೈವ ಲಿಂಗಾಯತ ಎಲ್ಲ ಗುರು ಭಕ್ತರು ಒಂದಾದರೆ ನಮ್ಮನ್ನು ತಡೆಯುವವರು… Chikkamagaluru | ಬಣಕಲ್ ಪ್ರೌಢ ಶಾಲೆಯಲ್ಲಿ ಲಾಸ್ಟ್ ಬೆಂಚ್ ಸ್ಟೂಡೆಂಟ್ಸ್ ಪರಿಕಲ್ಪನೆಗೆ ಮಂಗಳ:… Kodagu | ಮಹಿಳೆಗೆ ಹಲ್ಲೆ ನಡೆಸಿ ಸರ ಅಪಹರಣ: ಗ್ರಾಮಸ್ಥರ ಕೈಗೆ ಸಿಕ್ಕಿ… ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ…

ಇತ್ತೀಚಿನ ಸುದ್ದಿ

ರಾಷ್ಟ್ರೀಯ ಮಟ್ಟದ ಕಬಡ್ಡಿಗೆ ಆಯ್ಕೆಯಾದ ಮಂಗಳೂರು ವಿವಿ ಆಟಗಾರರರಿಗೆ ಪ್ರತಿಪಕ್ಷ ಉಪ ನಾಯಕ ಯು.ಟಿ.ಖಾದರ್ ಅಭಿನಂದನೆ

10/12/2022, 19:21

ಮಂಗಳೂರು(reporterkarnataka.com):
ಬೆಂಗಳೂರಲ್ಲಿ ಜರಗಿದ ದಕ್ಷಿಣ ಭಾರತ ಅಂತರ್ ವಿಶ್ವ ವಿದ್ಯಾಲಯ ಕಬಡ್ಡಿ ಪಂದ್ಯಾಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನ ಪಡೆದು ರೋತಕ್ ಹರಿಯಾಣದಲ್ಲಿ ನಡೆಯುವ ಅಖಿಲ ಭಾರತ ಅಂತರ್ ವಿಶ್ವ ವಿದ್ಯಾಲಯ ಕಬಡ್ಡಿ ಪಂದ್ಯಾಟಕ್ಕೆ ಅರ್ಹತೆ ಗಳಿಸಿದ ಮಂಗಳೂರು ವಿಶ್ವ ವಿದ್ಯಾನಿಲಯ ತಂಡದ ಎಲ್ಲ ಆಟಗಾರರಿಗೆ ಪ್ರತಿಪಕ್ಷ ಉಪ ನಾಯಕ ಯು.ಟಿ.ಖಾದರ್ ಅಭಿನಂದನೆ ಸಲ್ಲಿಸಿದ್ದಾರೆ.

ಸುಮಾರು 80 ತಂಡಗಳು ಭಾಗವಹಿಸಿದ್ದ ಪಂದ್ಯಾಕೂಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಮಂಗಳೂರು ವಿಶ್ವವಿದ್ಯಾನಿಲಯ ತಂಡದ ಎಲ್ಲ ಆಟಗಾರರು,ಮುಖ್ಯವಾಗಿ ತಂಡದ ಪ್ರಮುಖ ಆಟಗಾರರಾದ ಉಳ್ಳಾಲದ ಸಾಯಿ, ದೈಹಿಕ ಶಿಕ್ಷಕರಾದ ಜೆರಾಲ್ಡ್ ಹಾಗೂ ಉಮಾ ಮಹೇಶ್ವರಿ ತೊಕ್ಕೋಟು ಇದರ ಗೋಪಿ ಅವರಿಗೆ ಅಭಿನಂದನೆ ಹಾಗೂ ಶುಭಾಶಯಗಳನ್ನು ಯು.ಟಿ.ಖಾದರ್ ಸಲ್ಲಿಸಿದರು.

ದಕ್ಷಿಣ ವಲಯ ಹಾಗೂ ಉತ್ತರ ವಲಯದ ತಲಾ ನಾಲ್ಕು ತಂಡಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸೆಣಸಾಡಲಿದ್ದು,ಮಂಗಳೂರು ವಿಶ್ವವಿದ್ಯಾನಿಲಯ ತಂಡ ಅತ್ಯುತ್ತಮ ಪ್ರದರ್ಶನ ನೀಡಿ ಪ್ರಶಸ್ತಿ ಗಳಿಸಲಿ ಎಂದು ಶಾಸಕ ಯು.ಟಿ.ಖಾದರ್ ರವರು ಈ ಸಂದರ್ಭದಲ್ಲಿ ಶುಭ ಹಾರೈಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು