6:10 PM Wednesday3 - December 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ…

ಇತ್ತೀಚಿನ ಸುದ್ದಿ

ಮಂಗಳೂರು ಉತ್ತರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಿದ ಆತ್ಮಸಂತೃಪ್ತಿ ಇದೆ: ಶಾಸಕ ಡಾ. ಭರತ್ ಶೆಟ್ಟಿ

11/12/2022, 21:20

ಸುರತ್ಕಲ್(reporterkarnataka.com): ಜನಸಾಮಾನ್ಯರ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು ನೀಡಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು ರೂಪಿಸಿ ಅವುಗಳನ್ನು ಕಾರ್ಯಗತಗೊಳಿಸಿದ ಆತ್ಮಸಂತೃಪ್ತಿ ನನ್ನಲ್ಲಿದೆ ಎಂದು ಶಾಸಕ ಡಾ. ವೈ ಭರತ್ ಶೆಟ್ಟಿ ನುಡಿದರು.

ಅವರು ಭಾನುವಾರದಂದು ಸುರತ್ಕಲ್ ವಿದ್ಯಾದಾಯಿನೀ ವಜ್ರಮಹೋತ್ಸವ ಸಭಾಂಗಣದಲ್ಲಿ ಸರಕಾರಿ ಇಲಾಖೆಗಳ ವಿವಿಧ ಅಧಿಕಾರಿಗಳ ಉಪಸ್ಥಿತಿಯಲ್ಲಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಏಳನೇ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ವಿವಿಧ ನಾಗರಿಕ ಮೂಲಭೂತ ಸೌಕರ್ಯಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿ ಮಾತನಾಡಿದರು.

ಸರಕಾರಿ ಯೋಜನೆಗಳನ್ನು ಮೌಲ್ಯಯುತವಾಗಿ ನನ್ನ ಕ್ಷೇತ್ರದಲ್ಲಿ ಅನುಷ್ಠಾನಗೊಳಿಸಲಾಗಿದೆ. ಮೂಲಭೂತಸೌಕರ್ಯಗಳನ್ನು ಒದಗಿಸುವಲ್ಲಿ ಪಕ್ಷಾತೀತವಾಗಿ ಪ್ರಜಾಪ್ರಭುತ್ವದ ನೆಲೆಯಲ್ಲಿ ಸರ್ವರಿಗೂ ಒದಗಿಸಿದ್ದೇನೆ ಎಂದ ಅವರು ಮುಂದಿನ ದಿನಗಳನ್ನು ನನ್ನ ಕ್ಷೇತ್ರವನ್ನು ಇನ್ನಷ್ಟು ಅಭಿವೃದ್ಧಿ ಪಡಿಸುವ ಇರಾದೆಯನ್ನು ವ್ಯಕ್ತಪಡಿಸಿದರು.

ಸುರತ್ಕಲ್, ಪಣಂಬೂರು, ಬೈಕಂಪಾಡಿ ಪ್ರದೇಶದ ಸುತ್ತುಮುತ್ತಲಿನ ಪ್ರದೇಶಗಳಲ್ಲಿನ ಕೆಲವೊಂದು ರಸ್ತೆಗಳ ಕಾಂಕ್ರೀಟಿಕರಣ ಕಾಮಗಾರಿ ಪ್ರಗತಿಯಿಂದ ಸಾಗುತ್ತಿದೆ ಎಂದರು. ಸರಕಾರಿ ಹಕ್ಕು ಪತ್ರ,
ಪಿಂಚಣಿ ಯೋಜನೆ, ಜಾತಿ ಪ್ರಮಾಣ ಅದಾಯ ಪ್ರಮಾಣ ಪತ್ರ, ಆಭಾ ಕಾರ್ಡ್, ಮತದಾರರ ಪಟ್ಟಿ ನೊಂದಣಿ, ಕೃಷಿ ಇಲಾಖೆಯ ಸವಲತ್ತುಗಳನ್ನು ಇದೇ ಸಂದರ್ಭದಲ್ಲಿ ವಿತರಿಸಲಾಯಿತು.


ಮೇಯರ್ ಜಯಾನಂದ ಅಂಚನ್, ಸದಸ್ಯರಾದ ಶೋಭಾ ರಾಜೇಶ್, ನಯನಾ ಕೋಟ್ಯಾನ್,ವರುಣ್ ಚೌಟ, ವೇದಾವತಿ, ಸುಮಿತ್ರ ಕರಿಯ, ಸುನೀತಾ, ಸರಿತಾ ಶಶಿಧರ್, ಲೋಕೇಶ್ ಬೊಳ್ಳಾಜೆ, ಪ್ರಶಾಂತ್ ಮೂಡಾಯಿಕೊಡಿ,ಲಕ್ಷ್ಮೀ ಶೇಖರ ದೇವಾಡಿಗ, ರಾಜೇಶ್ ಬೈಕಂಪಾಡಿ, ಪಕ್ಷದ ಪ್ರಮುಖರಾದ ಸಂದೀಪ್ ಪಚ್ಚನಾಡಿ,ಗಣೇಶ್ ಹೊಸಬೆಟ್ಟು, ವಿಠಲಸಾಲ್ಯಾನ್, ವಸಂತ ಹೊಸಬೆಟ್ಟು,ಯೋಗಿಶ್ ಕುಳಾಯಿ, ಸುನೀಲ್ ಕುಳಾಯಿ, ರಾಘವೇಂದ್ರ ಶೆಣೈ,ದಿನಕರ್ ಇಡ್ಯಾ, ಪ್ರಮೀಳಾ ಕೋಟ್ಯಾನ್, ಪವಿತ್ರ ನಿರಂಜನ್,ಬೇಬಿ, ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು