6:39 AM Saturday7 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಮಂಗಳೂರು ಉತ್ತರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಿದ ಆತ್ಮಸಂತೃಪ್ತಿ ಇದೆ: ಶಾಸಕ ಡಾ. ಭರತ್ ಶೆಟ್ಟಿ

11/12/2022, 21:20

ಸುರತ್ಕಲ್(reporterkarnataka.com): ಜನಸಾಮಾನ್ಯರ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು ನೀಡಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು ರೂಪಿಸಿ ಅವುಗಳನ್ನು ಕಾರ್ಯಗತಗೊಳಿಸಿದ ಆತ್ಮಸಂತೃಪ್ತಿ ನನ್ನಲ್ಲಿದೆ ಎಂದು ಶಾಸಕ ಡಾ. ವೈ ಭರತ್ ಶೆಟ್ಟಿ ನುಡಿದರು.

ಅವರು ಭಾನುವಾರದಂದು ಸುರತ್ಕಲ್ ವಿದ್ಯಾದಾಯಿನೀ ವಜ್ರಮಹೋತ್ಸವ ಸಭಾಂಗಣದಲ್ಲಿ ಸರಕಾರಿ ಇಲಾಖೆಗಳ ವಿವಿಧ ಅಧಿಕಾರಿಗಳ ಉಪಸ್ಥಿತಿಯಲ್ಲಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಏಳನೇ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ವಿವಿಧ ನಾಗರಿಕ ಮೂಲಭೂತ ಸೌಕರ್ಯಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿ ಮಾತನಾಡಿದರು.

ಸರಕಾರಿ ಯೋಜನೆಗಳನ್ನು ಮೌಲ್ಯಯುತವಾಗಿ ನನ್ನ ಕ್ಷೇತ್ರದಲ್ಲಿ ಅನುಷ್ಠಾನಗೊಳಿಸಲಾಗಿದೆ. ಮೂಲಭೂತಸೌಕರ್ಯಗಳನ್ನು ಒದಗಿಸುವಲ್ಲಿ ಪಕ್ಷಾತೀತವಾಗಿ ಪ್ರಜಾಪ್ರಭುತ್ವದ ನೆಲೆಯಲ್ಲಿ ಸರ್ವರಿಗೂ ಒದಗಿಸಿದ್ದೇನೆ ಎಂದ ಅವರು ಮುಂದಿನ ದಿನಗಳನ್ನು ನನ್ನ ಕ್ಷೇತ್ರವನ್ನು ಇನ್ನಷ್ಟು ಅಭಿವೃದ್ಧಿ ಪಡಿಸುವ ಇರಾದೆಯನ್ನು ವ್ಯಕ್ತಪಡಿಸಿದರು.

ಸುರತ್ಕಲ್, ಪಣಂಬೂರು, ಬೈಕಂಪಾಡಿ ಪ್ರದೇಶದ ಸುತ್ತುಮುತ್ತಲಿನ ಪ್ರದೇಶಗಳಲ್ಲಿನ ಕೆಲವೊಂದು ರಸ್ತೆಗಳ ಕಾಂಕ್ರೀಟಿಕರಣ ಕಾಮಗಾರಿ ಪ್ರಗತಿಯಿಂದ ಸಾಗುತ್ತಿದೆ ಎಂದರು. ಸರಕಾರಿ ಹಕ್ಕು ಪತ್ರ,
ಪಿಂಚಣಿ ಯೋಜನೆ, ಜಾತಿ ಪ್ರಮಾಣ ಅದಾಯ ಪ್ರಮಾಣ ಪತ್ರ, ಆಭಾ ಕಾರ್ಡ್, ಮತದಾರರ ಪಟ್ಟಿ ನೊಂದಣಿ, ಕೃಷಿ ಇಲಾಖೆಯ ಸವಲತ್ತುಗಳನ್ನು ಇದೇ ಸಂದರ್ಭದಲ್ಲಿ ವಿತರಿಸಲಾಯಿತು.


ಮೇಯರ್ ಜಯಾನಂದ ಅಂಚನ್, ಸದಸ್ಯರಾದ ಶೋಭಾ ರಾಜೇಶ್, ನಯನಾ ಕೋಟ್ಯಾನ್,ವರುಣ್ ಚೌಟ, ವೇದಾವತಿ, ಸುಮಿತ್ರ ಕರಿಯ, ಸುನೀತಾ, ಸರಿತಾ ಶಶಿಧರ್, ಲೋಕೇಶ್ ಬೊಳ್ಳಾಜೆ, ಪ್ರಶಾಂತ್ ಮೂಡಾಯಿಕೊಡಿ,ಲಕ್ಷ್ಮೀ ಶೇಖರ ದೇವಾಡಿಗ, ರಾಜೇಶ್ ಬೈಕಂಪಾಡಿ, ಪಕ್ಷದ ಪ್ರಮುಖರಾದ ಸಂದೀಪ್ ಪಚ್ಚನಾಡಿ,ಗಣೇಶ್ ಹೊಸಬೆಟ್ಟು, ವಿಠಲಸಾಲ್ಯಾನ್, ವಸಂತ ಹೊಸಬೆಟ್ಟು,ಯೋಗಿಶ್ ಕುಳಾಯಿ, ಸುನೀಲ್ ಕುಳಾಯಿ, ರಾಘವೇಂದ್ರ ಶೆಣೈ,ದಿನಕರ್ ಇಡ್ಯಾ, ಪ್ರಮೀಳಾ ಕೋಟ್ಯಾನ್, ಪವಿತ್ರ ನಿರಂಜನ್,ಬೇಬಿ, ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು