3:52 PM Sunday13 - July 2025
ಬ್ರೇಕಿಂಗ್ ನ್ಯೂಸ್
Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಇತ್ತೀಚಿನ ಸುದ್ದಿ

ಒತ್ತಿನೆಣೆ ಕೊಲೆ ಪ್ರಕರಣದ ಪ್ರಮುಖ‌ ಆರೋಪಿ ಹಿರಿಯಡಕ ಜೈಲಿನಲ್ಲಿ ಆತ್ಮಹತ್ಯೆಗೆ ಶರಣು

11/12/2022, 22:50

ಕಾರ್ಕಳ(reporterkarnataka.com):
ವಿಚಾರಣಾಧೀನ ಕೈದಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರಿಯಡಕದ ಸಮೀಪದ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಭಾನುವಾರ ನಡೆದಿದೆ.

ಕಾರ್ಕಳ ತಾಲೂಕಿನ ಮಾಳ ಗ್ರಾಮದ ಪೇರಡ್ಕ ನಿವಾಸಿ ಸದಾನಂದ ಸೇರಿಗಾರ್ ಆತ್ಮಹತ್ಯೆ ಮಾಡಿಕೊಂಡ ಕೈದಿ. ಈತನು ಇತರೆ ಮೂವರೊಂದಿಗೆ ಸೇರಿಕೊಂಡು ಕಾರ್ಕಳದ ಆನಂದ ದೇವಾಡಿಗ ಎಂಬಾತನನ್ನು ಬೈಂದೂರು ತಾಲೂಕಿನ ಒತ್ತಿನೆಣೆ ಹೇನ್ ಬೇರು ಬಳಿ ನಿರ್ಜನ ಪ್ರದೇಶದಲ್ಲಿ ಕಾರಿನಲ್ಲಿ ಸಜೀವವಾಗಿ ಸುಟ್ಟು ಹತ್ಯೆಗೈದಿದ್ದರು.
ಪ್ರಕರಣವೊಂದರಲ್ಲಿ ತಪ್ಪಿಸಿಕೊಳ್ಳುವ ಉದ್ದೇಶದಿಂದ ಈ ಕೃತ್ಯ ಎಸಗಿದ್ದರು. ಆದರೆ ಆ ಬಳಿಕ ಪೊಲೀಸರಿಗೆ ಸಿಕ್ಕಿಬಿದ್ದ ಸದಾನಂದ ಸೇರಿಗಾರ್ ಹಾಗೂ ಆತನ ಗೆಳತಿ ಶಿಲ್ಪ ಸಾಲಿಯಾನ್, ಸತೀಶ್ ದೇವಾಡಿಗ, ನಿತೀಶ್ ದೇವಾಡಿಗ ಜೈಲು ಪಾಲಾಗಿದ್ದರು. ಜೈಲು ಸೇರಿದ ಬಳಿಕ ಸದಾನಂದ ಸೇರಿಗಾರ್ ಬಹಳಷ್ಟು ಮಾನಸಿಕ‌ ಖಿನ್ನತೆಗೆ ಒಳಗಾಗಿದ್ದನು. ಇದೇ ಕಾರಣದಿಂದ ಇಂದು ಮುಂಜಾನೆ 5 ಗಂಟೆಯ ಸುಮಾರಿಗೆ ಪಂಚೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನು ಗಮನಿಸಿದ ಇತರ ಕೈದಿಗಳು ಆತನನ್ನು ನೇಣಿನ ಕುಣಿಕೆಯಿಂದ ಬಿಡಿಸಿ ಕೆಳಗೆ ಇಳಿಸಿದ್ದಾರೆ. ಬಳಿಕ ಜೈಲು ಸಿಬ್ಬಂದಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವ ದಾರಿ ಮಧ್ಯೆ ಸದಾನಂದ ಸೇರಿಗಾರ್ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದುಬಂದಿದೆ.

ಮೃತದೇಹವನ್ನು ಅಜ್ಜರಕಾಡು ಶವಗಾರದಲ್ಲಿ ಇರಿಸಲಾಗಿದ್ದು, ಸ್ಥಳದಲ್ಲಿ ಹೆಚ್ಚುವರಿ ಎಸ್ಪಿ ಎಸ್‌.ಟಿ ಸಿದ್ದಲಿಂಗಪ್ಪ, ಉಡುಪಿ ಡಿವೈಎಸ್ಪಿ ಸುಧಾಕರ್ ನಾಯ್ಕ್ ಮತ್ತು ಸಿಬ್ಬಂದಿಗಳು ಮೊಕ್ಕಾಂ ಹೂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು