7:23 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ನರಹಂತಕ ಮೂಡಿಗೆರೆಯ ಭೈರ ಆನೆ ಕೊನೆಗೂ ಸೆರೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

11/12/2022, 23:05

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಇಬ್ಬರನ್ನು ಬಲಿ ಪಡೆದು, ಡ್ರೋನ್ ಕ್ಯಾಮರಕ್ಕೂ ಚಳ್ಳೆಹಣ್ಣು ತಿನ್ನಿಸಿ ಜನರ ನಿದ್ದೆಗೆಡಿಸಿದ್ದ ಮೂಡಿಗೆರೆ ಬೈರ ಆನೆಯನ್ನು ಭಾನುವಾರ ಸೆರೆ ಹಿಡಿಯಲಾಗಿದೆ.

ಕಳೆದ ನಾಲ್ಕೈದು ತಿಂಗಳಿಂದ ಜಿಲ್ಲೆಯ ಮೂಡಿಗೆರೆ ತಾಲೂಕಿನ ಅರಣ್ಯ ಅಧಿಕಾರಿಗಳು ಹಾಗೂ ಜನರ ನಿದ್ದೆಗೆಡಿಸಿ ನೆಮ್ಮದಿ ಹಾಳು ಮಾಡಿದ್ದ ಒಂಟಿಸಲಗ, ನರಹಂತಕ ಕಾಡಾನೆ ಮೂಡಿಗೆರೆ ಭೈರನನ್ನ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ನಾಲ್ಕೈದು ತಿಂಗಳಿಂದ ಮೂಡಿಗೆರೆ ತಾಲೂಕಿನಾದ್ಯಂತ ದಾಂಧಲೆ ನಡೆಸಿಕೊಂಡು ಇಬ್ಬರ ಜೀವ ತೆಗೆದಿದ್ದ ಭೈರನಿಂದ ಜನ ರೋಸಿ ಹೋಗಿ, ಅರಣ್ಯ ಇಲಾಖೆ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದರು. ಆನೆ ಹಾವಳಿಯಿಂದ ತಿಂಗಳಿಗೊಂದು ಹೆಣ ಬಿದ್ದ ಪರಿಣಾಮ ತಾಳ್ಮೆಗೆಟ್ಟು ಕಂಗೆಟ್ಟಿದ್ದ ಜನ ಶಾಸಕರ ಮೇಲೂ ಹಲ್ಲೆಗೆ ಮುಂದಾಗಿದ್ದರು. ಜನ ಯಾವಾಗ ಶಾಸಕರ ಮೇಲೆ ಹಲ್ಲೆಗೆ ಮುಂದಾದರೋ ಕೂಡಲೇ ಸರ್ಕಾರ ಮೂರು ಕಾಡಾನೆಗಳನ್ನ ಹಿಡಿಯಲು ಹಸಿರು ನಿಶಾನೆ ತೋರಿತ್ತು. ಸರ್ಕಾರ ಗ್ರೀನ್ ಸಿಗ್ನಲ್ ನೀಡುತ್ತಿದ್ದಂತೆ ಕಳೆದ ಎಂಟತ್ತು ದಿನಗಳಿಂದ ಆರು ಸಾಕಾನೆಗಳೊಂದಿಗೆ ಮೂರು ಕಾಡಾನೆಗಳನ್ನ ಹಿಡಿಯಲು ಅಧಿಕಾರಿಗಳು-ಸ್ಥಳಿಯರು ಹಗಲಿರುಳು ಕಷ್ಟ ಪಟ್ಟಿದ್ದರು. ಎರಡು ಕಾಡಾನೆಗಳನ್ನ ಸೆರೆ ಹಿಡಿದು ಮಡಿಕೇರಿಯ ಆನೆ ದುಬಾರೆ ಹಾಗೂ ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲು ಆನೆಬಿಡಾರಕ್ಕೆ ಬಿಟ್ಟಿದ್ದರು. ಆದರೆ, ಪುಂಡ, ಒಂಟಿಸಲಗ ಮೂಡಿಗೆರೆ ಭೈರ ಮಾತ್ರ ಎಲ್ಲರ ಕಣ್ತಪ್ಪಿಸಿ ನಾಪತ್ತೆಯಾಗುತ್ತಿದ್ದ. ಅರಣ್ಯ ಅಧಿಕಾರಿಗಳ ಡ್ರೋನ್ ಕ್ಯಾಮರಕ್ಕೂ ಕಣ್ತಪ್ಪಿಸಿ ದಟ್ಟಕಾನನದಲ್ಲಿ ಎಸ್ಕೇಪ್ ಆಗಿ ಓಡಾಡ್ತಿದ್ದ. ಆದರೆ, ಇಂದು ಮಧ್ಯಾಹ್ನ ಮೂಡಿಗೆರೆ ತಾಲೂಕಿನ ಊರಬಗೆ ಗ್ರಾಮದಲ್ಲಿ ಭೈರ ಇರುವ ಖಚಿತ ಮಾಹಿತಿ ಪಡೆದ ಅಧಿಕಾರಿಗಳು ನಿರಂತರ ಕಾರ್ಯಾಚರಣೆ ನಡೆಸಿ ನರಹಂತಕನನ್ನ ಖೆಡ್ಡಾಕೆ ಬೀಳಿಸಿದ್ದಾರೆ. ಈ ಮೂಡಿಗೆರೆ ಭೈರನನ್ನ ಸೆರೆ ಹಿಡಿಯುವಷ್ಟರಲ್ಲಿ ಅರಣ್ಯ ಅಧಿಕಾರಿಗಳು ಕೂಡ ಹೈರಾಣಾಗಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳ ಡ್ರೋನ್ ಕ್ಯಾಮರಕ್ಕೂ ಚಳ್ಳೆ ಹಣ್ಣು ತಿನ್ನಿಸುತ್ತಾ ದಟ್ಟ ಕಾನನದಲ್ಲಿ ಮಿಂಚಿನ ವೇಗದಲ್ಲಿ ಕಣ್ಮರೆಯಾಗುತ್ತಿದ್ದ ಈ ಭೈರ. ಅಧಿಕಾರಿಗಳ ಕಣ್ಣಿಗೆ ಕೂಡಲೇ ಅಧಿಕಾರಿಗಳು ಕೂಡ ಸಿದ್ಧತೆ-ಪ್ಲ್ಯಾನ್ ಮಾಡಿಕೊಳ್ಳುವಷ್ಟರಲ್ಲಿ ಕಾಡಿನಲ್ಲಿ ಮರೆಯಾಗುತ್ತಿದ್ದ. ನರಹಂತಕನಾಗಿ ಜನರ ನಿದ್ದೆಗೆಡಿಸಿದ್ದ ಮೂಡಿಗೆರೆ ಭೈರ ಸೆರೆಯಾದ ಕಾರಣ ಜನರ ಜೊತೆ ಅರಣ್ಯ ಇಲಾಖೆ ಅಧಿಕಾರಿಗಳು ಕೂಡ ನಿಟ್ಟುಸಿರು ಬಿಟ್ಟಿದ್ದಾರೆ.

ಮೂಡಿಗೆರೆ ಭೈರನ ಹೆಜ್ಜೆಗುರುತು : ನಾಲ್ಕೈದು ತಿಂಗಳಲ್ಲಿ ಈ ಮೂಡಿಗೆರೆ ಭೈರನ ಹೆಜ್ಜೆ ಗುರುತುಗಳು ಮಲೆನಾಡ ಮಣ್ಣಲ್ಲಿ ಅಚ್ಚಳಿಯದೆ ಉಳಿದಿವೆ. ಯಾಕಂದ್ರೆ, ಮಲೆನಾಡಲ್ಲಿ ದಶಕಗಳಿಂದ ಆನೆ ಹಾವಳಿ ಇದೆ. ಆದರೆ, ಜನರಿಗೆ ಹಾಗೂ ಅಧಿಕಾರಿಗಳಿಗೆ ಇವನಷ್ಟು ಯಾರೂ ಕಾಟ ಕೊಟ್ಟಿರಲಿಲ್ಲ. ಜೀವ ತೆಗೆದಿರಲಿಲ್ಲ. ಇವನ ಅಬ್ಬರಕ್ಕೆ ಎರಡು ತಿಂಗಳಲ್ಲಿ ಇಬ್ಬರು ಬಲಿಯಾಗಿದ್ದರು. ಕಳೆದ ತಿಂಗಳ ಹಿಂದಷ್ಟೆ ಮಹಿಳೆಯೊಬ್ಬಳು ಸಾವನ್ನಪ್ಪಿದ್ದರಿಂದ ಜನ ರೊಚ್ಚಿಗೆದ್ದು ಅರಣ್ಯ ಇಲಾಖೆಯ ಕಳ್ಳಭೇಟೆ ನಿಗ್ರಹ ಕಚೇರಿಯನ್ನ ದ್ವಂಸ ಮಾಡಿದ್ದರು. ಆನೆ ದಾಳಿಗೆ ಕಂಗೆಟ್ಟು ಶಾಸಕರ ಮೇಲೂ ಹಲ್ಲೆ ಮಾಡಿದ್ದರು. ಇವನ ಕಾಟಕ್ಕೆ ಬೇಸತ್ತು ಅಧಿಕಾರಿಗಳು ಬೀದಿ-ಬೀದಿಯಲ್ಲಿ ಮೈಕ್ ಹಿಡಿದು ಅನೌನ್ಸ್ ಮಾಡಿದ್ದರು. ಒಂದು ಪುಂಡ ಕಾಡಾನೆ ಮಲೆನಾಡಿಗರಿಗೆ ಈ ಮಟ್ಟಕ್ಕೆ ರೋಧನೆ ಕೊಟ್ಟಿದ್ದು ಇದೇ ಮೊದಲು.


ಭೈರನ ಹಿಡಿಯಲು ಬಂದ ಆನೆಗಳೇ ವಾಪಸ್ ಹೋಗಿದ್ವು : ಈ ಭೈರನ ಸೆರೆಗೆ ಅರಣ್ಯ ಇಲಾಖೆ ಪ್ರಯತ್ನಿಸಿದ್ದು ಇದೇ ಮೊದಲಲ್ಲ. ಕಳೆದ ಎರಡು ತಿಂಗಳ ಹಿಂದೆಯೂ ಇವನನ್ನ ಹಿಡಿಯೋಕೆ ಎಂದು ದಸರಾ ಆನೆಗಳ ಜೊತೆ ಮಡಿಕೇರಿಯಿಂದ ಒಟ್ಟು ಆರು ಕಾಡಾನೆಗಳು ಬಂದಿದ್ದವು. ಎರಡ್ಮೂರು ದಿನ ಕಾರ್ಯಾಚರಣೆ ಕೂಡ ನಡೆಸಿದ್ದವು. ಆದರೆ, ಆ ಹೊತ್ತಿಗಾಗಲೇ ಈ ಭೈರ ಕಾಡಿನಲ್ಲಿ ಕಣ್ಮರೆಯಾಗಿದ್ದ. ಇದೇ ವೇಳೆ, ಆನೆಗಳಿಗೆ ಜ್ವರ ಹಾಗೂ ಹೊಟ್ಟೆ ಕೆಟ್ಟಿತ್ತು ಎಂದು ಕಾರ್ಯಾಚರಣೆ ಸ್ಥಗಿತಗೊಳಿಸಿ ವಾಪಸ್ ಕಳಿಸಿದ್ದರು. ಸಾಕಾನೆಗಳು ಹೋಗುತ್ತಿದ್ದಂತೆ ಮತ್ತೆ ಬಂದ ಈ ಪುಂಡ ಸಿಕ್ಕಾಪಟ್ಟೆ ಕಾಟ ಕೋಡೋಕೆ ಶುರುಮಾಡಿದ್ದ. ಎರಡನೇ ಬಾರಿ ಮತ್ತೆ ಬಂದ ಆರು ಸಾಕಾನೆಗಳು ಎಂಟತ್ತು ದಿನಗಳ ಕಾಲ ನಿರಂತರ ಕಾರ್ಯಾಚರಣೆಯ ಬಳಿಕ ಈ ಭೈರನನ್ನ ಸೆರೆ ಹಿಡಿದಿವೆ.

ಇತ್ತೀಚಿನ ಸುದ್ದಿ

ಜಾಹೀರಾತು