12:34 PM Tuesday29 - July 2025
ಬ್ರೇಕಿಂಗ್ ನ್ಯೂಸ್
Mandya | ಒಂದೇ ದಿನ 1146 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ… ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ: ಬ್ಯಾರಿಕೆಡ್ ಹಾಕಿರುವ ಪೊಲೀಸರು Shivamogga | ತೀರ್ಥಹಳ್ಳಿ: ಬೆಜ್ಜವಳ್ಳಿ ಸಮೀಪ ಸ್ಕೂಟಿಗೆ ಹಿಂಭಾಗದಿಂದ ಬಸ್ ಡಿಕ್ಕಿ; ಸವಾರ… ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಒಂಟಿ ಸಲಗ ಪ್ರತ್ಯಕ್ಷ: ಪ್ರಯಾಣಿಕರಲ್ಲಿ ಭೀತಿ ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ…

ಇತ್ತೀಚಿನ ಸುದ್ದಿ

ತಹಶೀಲ್ದಾರ್ ಮನೆಗೆ ಕನ್ನ ಹಾಕಿದ ಖದೀಮರು: 19.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

12/12/2022, 13:01

ರಾಹುಲ್ ಅಥಣಿ ಬೆಳಗಾವಿ

info.reporter Karnataka@gmail.com

ಬೆಳಗಾವಿ ಜಿಲ್ಲೆಯ ಗೋಕಾಕದಲ್ಲಿ ತಹಶೀಲ್ದಾರರ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವುಗೈದ ಘಟನೆ ನಡೆದಿದೆ.
ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಅವರ ವಸತಿ ಗೃಹದಲ್ಲಿ ಶನಿವಾರ ತಡರಾತ್ರಿ ಕಳ್ಳತನ ನಡೆದಿದ್ದು, ಸುಮಾರು 400 ಗ್ರ ಚಿನ್ನವನ್ನು ಕಳವು ಗೈಯಲಾಗಿದೆ. ತಹಶೀಲ್ದಾರ ಅವರು ಕೆಲಸದ ನಿಮಿತ್ಯ ಮೈಸೂರಿಗೆ ತೆರಳಿದ್ದು, ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ಬಗ್ಗೆ ಖಚಿತಪಡಿಸಿಕೊಂಡಿದ್ದ ಕಳ್ಳರು ಕಳ್ಳತನ ನಡೆಸಿದ್ದಾರೆ.


ಕಬ್ಬಿಣದ ಕಟ್ಟರ್ ಸಹಾಯದಿಂದ ಮನೆಯ ಕೀಲಿ ಕೈಯನ್ನು ಕತ್ತರಿಸಿ ಮನೆಯೊಳಗೆ ನುಗ್ಗಿದ ಕಳ್ಳರು ಮನೆಯೊಳಗೆ ಜಾಲಾಡಿ ಕಪಾಟಿನಲ್ಲಿದ್ದ ಸುಮಾ ರು 19.5 ಲಕ್ಷ ರೂ. ಮೌಲ್ಯದ 4 ತೊಲಿ ಗಂಟನ, 4 ತೊಲಿ ಬಂಗಾರದ ಬಿಲ್ವರ 1 ಜೊತೆ, ನಕ್ಲಸ್ 3 10 ತೊಲಿ, ಬಂಗಾರದ ಪಾಟಿ 1 ಜೊತೆ 5 ತೊಲಿ, 2 ಲಾಕೇಟ್ 5 ತೊಲಿ, 4 ಬಂಗಾರದ ಉಂಗರು 10 ತೊಲಿ, ಕಿವಿಯೊಲೆ 2 ಜೊತೆ 2 ತೊಲಿ, ಗಟ್ಟಿ ಬಂಗಾರ 10 ತೊಲಿ ಒಟ್ಟು 40.1/2 ತೊಲಿ ಬಂಗಾರ ಹಾಗೂ 5,500 ರೂ ನಗದು ಹಣ ದೋಚಿ ಕಳ್ಳರು ಫರಾರಿಯಾಗಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು