6:39 AM Saturday7 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಕೋಟೆದ ಬಬ್ಬು ದೈವಸ್ಥಾನದ ಗೋಪುರ ಪುನರ್ ನಿರ್ಮಾಣ: ಶಾಸಕ ಡಾ. ಭರತ್ ಶೆಟ್ಟಿ ವಿಜ್ಞಾಪನಾ ಪತ್ರ ಬಿಡುಗಡೆ

12/12/2022, 20:37

ಸುರತ್ಕಲ್(reporterkarnataka.com): ಕುಳಾಯಿಯ ಪುರಾತನ ಕೋಟೆದ ಬಬ್ಬು ದೈವಸ್ಥಾನದ ಗೋಪುರ ಪುನರ್ ನಿರ್ಮಾಣ ಮತ್ತು ಇತರ ಅಭಿವೃದ್ಧಿ ಕಾರ್ಯಗಳ “ವಿಜ್ಞಾಪನಾ ಪತ್ರ”ವನ್ನು ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ದೈವಸ್ಥಾನದ ವಠಾರದಲ್ಲಿ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು,ಸರಕಾರದ ವತಿಯಿಂದ ಹಾಗೂ ತನ್ನ ವೈಯಕ್ತಿಕ ನೆಲೆಯಿಂದಲೂ ಸಾಧ್ಯವಾದಷ್ಟು ಸಹಾಯವನ್ನು ಈ ಅಭಿವೃದ್ಧಿ ಕಾರ್ಯಗಳಿಗೆ ಒದಗಿಸಿಕೊಡುವುದಾಗಿ ತಿಳಿಸಿದರು.
ದೈವಸ್ಥಾನಕ್ಕೆ ಸಂಬಂಧ ಪಟ್ಟ ಬಗ್ಗುಂಡಿ ಕೆರೆ ಮತ್ತು ದೈವಸ್ಥಾನದ ಹತ್ತಿರ ಇರುವ ಕೆರೆ ಅಭಿವೃದ್ಧಿಯನ್ನೂ ಸರಕಾರ ಮತ್ತು ದಾನಿಗಳ ಸಹಕಾರದೊಂದಿಗೆ ಕೈಗೆತ್ತಿಕೊಳ್ಳುವುದಾಗಿ ನುಡಿದರು.

ದೈವಸ್ಥಾನದ ಆಡಳಿತ ಕಮಿಟಿಯ ಅಧ್ಯಕ್ಷರಾದ ಯೋಗೀಶ್ ಕುಳಾಯಿ, ಆಡಳಿತ ಮೊಕ್ತೇಸರರಾದ ಪಠೇಲ್ ಶಂಕರ್ ರೈ, ಮಾಜಿ ಮೇಯರ್ ಗಣೇಶ್ ಹೊಸಬೆಟ್ಟು, ಕಾರ್ಪೊರೇಟರ್ ಗಳಾದ ವೇದಾವತಿ, ವರುಣ್ ಚೌಟ, ಉದ್ಯಮಿ ರವಿರಾಜ್, ಕುಳಾಯಿಗುತ್ತು ಚರಣ್ ಶೆಟ್ಟಿ,
ಯೋಗೀಶ್ ಸನಿಲ್ ಕುಳಾಯಿ, ದೈವಸ್ಥಾನದ ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿ ರತನ್ ಕುಮಾರ್, ಗೀತಾ ಯಾದವ್ ಹಾಗೂ ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು