1:51 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಕೋಟೆದ ಬಬ್ಬು ದೈವಸ್ಥಾನದ ಗೋಪುರ ಪುನರ್ ನಿರ್ಮಾಣ: ಶಾಸಕ ಡಾ. ಭರತ್ ಶೆಟ್ಟಿ ವಿಜ್ಞಾಪನಾ ಪತ್ರ ಬಿಡುಗಡೆ

12/12/2022, 20:37

ಸುರತ್ಕಲ್(reporterkarnataka.com): ಕುಳಾಯಿಯ ಪುರಾತನ ಕೋಟೆದ ಬಬ್ಬು ದೈವಸ್ಥಾನದ ಗೋಪುರ ಪುನರ್ ನಿರ್ಮಾಣ ಮತ್ತು ಇತರ ಅಭಿವೃದ್ಧಿ ಕಾರ್ಯಗಳ “ವಿಜ್ಞಾಪನಾ ಪತ್ರ”ವನ್ನು ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ದೈವಸ್ಥಾನದ ವಠಾರದಲ್ಲಿ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು,ಸರಕಾರದ ವತಿಯಿಂದ ಹಾಗೂ ತನ್ನ ವೈಯಕ್ತಿಕ ನೆಲೆಯಿಂದಲೂ ಸಾಧ್ಯವಾದಷ್ಟು ಸಹಾಯವನ್ನು ಈ ಅಭಿವೃದ್ಧಿ ಕಾರ್ಯಗಳಿಗೆ ಒದಗಿಸಿಕೊಡುವುದಾಗಿ ತಿಳಿಸಿದರು.
ದೈವಸ್ಥಾನಕ್ಕೆ ಸಂಬಂಧ ಪಟ್ಟ ಬಗ್ಗುಂಡಿ ಕೆರೆ ಮತ್ತು ದೈವಸ್ಥಾನದ ಹತ್ತಿರ ಇರುವ ಕೆರೆ ಅಭಿವೃದ್ಧಿಯನ್ನೂ ಸರಕಾರ ಮತ್ತು ದಾನಿಗಳ ಸಹಕಾರದೊಂದಿಗೆ ಕೈಗೆತ್ತಿಕೊಳ್ಳುವುದಾಗಿ ನುಡಿದರು.

ದೈವಸ್ಥಾನದ ಆಡಳಿತ ಕಮಿಟಿಯ ಅಧ್ಯಕ್ಷರಾದ ಯೋಗೀಶ್ ಕುಳಾಯಿ, ಆಡಳಿತ ಮೊಕ್ತೇಸರರಾದ ಪಠೇಲ್ ಶಂಕರ್ ರೈ, ಮಾಜಿ ಮೇಯರ್ ಗಣೇಶ್ ಹೊಸಬೆಟ್ಟು, ಕಾರ್ಪೊರೇಟರ್ ಗಳಾದ ವೇದಾವತಿ, ವರುಣ್ ಚೌಟ, ಉದ್ಯಮಿ ರವಿರಾಜ್, ಕುಳಾಯಿಗುತ್ತು ಚರಣ್ ಶೆಟ್ಟಿ,
ಯೋಗೀಶ್ ಸನಿಲ್ ಕುಳಾಯಿ, ದೈವಸ್ಥಾನದ ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿ ರತನ್ ಕುಮಾರ್, ಗೀತಾ ಯಾದವ್ ಹಾಗೂ ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು